ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಮೇಶ್ ಜಾಧವ್ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್ ರಮೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 01: ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ ಉಮೇಶ್ ಜಾಧವ್ ಅವರ ರಾಜೀನಾಮೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಅಂಗೀಕರಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮಾರ್ಚ್ 4 ರಂದು ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದಕ್ಕೂ ಮುನ್ನಾ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಉಮೇಶ್ ಜಾಧವ್ ವಿರುದ್ಧ ದೂರು ನೀಡಿದ್ದ ಕಾರಣ, ರಾಜೀನಾಮೆ ಅಂಗೀಕಾರ ಗೊಂದಲದ ಗೂಡಾಗಿತ್ತು.

ಕಚೇರಿಯ ಚೌಕೀದಾರನಿಗೆ ರಾಜೀನಾಮೆ ಪತ್ರ ನೀಡಿ ಪಕ್ಷ ತೊರೆದ ಬಿಜೆಪಿ ಸಂಸದ ಕಚೇರಿಯ ಚೌಕೀದಾರನಿಗೆ ರಾಜೀನಾಮೆ ಪತ್ರ ನೀಡಿ ಪಕ್ಷ ತೊರೆದ ಬಿಜೆಪಿ ಸಂಸದ

ಉಮೇಶ್ ಜಾಧವ್ ಅವರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕು ಎಂಬುದು ಕಾಂಗ್ರೆಸ್ ನ ಒತ್ತಾಯವಾಗಿತ್ತು, ಅದರಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ಜಾಧವ್ ಅವರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಿದರು. ಕೊನೆಗೆ ಇಂದು ಜಾಧವ್ ಅವರ ರಾಜೀನಾಮೆ ಅಂಗೀಕರಿಸಲಾಗಿದೆ.

Umesh Jadhavs resignation accepted by speaker Ramesh Kumar

ಉಮೇಶ್ ಜಾಧವ್ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಅವರು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಹಿರಿಯ ಸಂಸದ ಮಲ್ಲಿಕಾರ್ಜುನ ಖರ್ಗೆ ಎದುರು ಸ್ಪರ್ಧಿಸುತ್ತಿದ್ದಾರೆ.

English summary
Umesh Jadhav's resignation accepted by speaker Ramesh Kumar. He was MLA of Chincholi constituency of congress. He now joins BJP and contesting Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X