ನೆಲಮಂಗಲದ ಕುಣಿಗಲ್ ವೃತ್ತದಲ್ಲಿ ಕಾರಿನಲ್ಲಿ ಶವ ಪತ್ತೆ
ಬೆಂಗಳೂರು, ಜನವರಿ 27: ಬೆಂಗಳೂರಿನ ಗ್ರಾಮಾಂತರ ನೆಲಮಂಗಲ ತಾಲೂಕಿನ ಕುಣಿಗಲ್ ವೃತ್ತದ ಬಳಿ ಕಾರಿನಲ್ಲಿ ಶವವೊಂದು ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ನೆಲಮಂಗಲ ಟೌನಿನ ಕುಣಿಗಲ್ ಸರ್ಕಲ್ ಬಳಿ ಇರುವ ಅರುಣ್ ಗ್ಯಾರೇಜಿನಲ್ಲಿ ಕೆಟ್ಟು ನಿಂತ ಕಾರಿನಲ್ಲಿ ಶವ ಕಂಡು ಬಂದಿದೆ. ಕಾರಿನಲ್ಲಿ ಕುಳಿತ ರೀತಿ ವ್ಯಕ್ತಿಯೊಬ್ಬರಿದ್ದಾರೆ. ಸುಮಾರು 40-45 ವರ್ಷ ವಯಸ್ಸು ಇರಬಹುದು ಎಂದು ಅಂದಾಜು ಮಾಡಲಾಗಿದೆ. ಚಳಿಗೆ ಮುದುಡಿಕೊಂಡು ಕುಳಿತಂತೆ ಕಾಣುತ್ತದೆ.
ಹೆದ್ದಾರಿ ಪಕ್ಕದಲ್ಲೇ ಇರುವ ಗ್ಯಾರೇಜ್ ಮುಂದೆ ನಿಲ್ಲಿಸಿರುವ ಕಾರಿನಲ್ಲಿ ಶವ ಕೊಳತೆ ವಾಸನೆ ಬರಲಾರಂಭಿಸಿದೆ. ರಸ್ತೆಯಲ್ಲಿ ಓಡಾಡುವರೊಬ್ಬರು ಕೆಟ್ಟ ವಾಸನೆ ಬಂದಿದ್ದರಿಂದ ಕಾರಿನ ಬಳಿ ತೆರಳಿ ಪರೀಕ್ಷಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆ ಇನ್ನೂ ಆಗಿಲ್ಲ, ಕಾರಿನಲ್ಲಿ ವ್ಯಕ್ತಿಗೆ ಸಂಬಂಧಿಸಿದ ದಾಖಲೆಗಳು ಸಿಕ್ಕಿಲ್ಲ. ಚಳಿಗೆ ಉಸಿರುಗಟ್ಟೆ ಮೃತಪಟ್ಟಿರಬಹುದು, ಅಥವಾ ಕಾರಿನ ಎಸಿ ಗಾಳಿ ವಿಷವಾಗಿ ಸತ್ತಿರಬಹುದು ಎಂಬ ಅನುಮಾನ ಮೂಡಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಗ್ಯಾರೇಜಿನ ಬಳಿ ಇರುವ ಸಿಸಿಟಿವಿ ದೃಶ್ಯಗಳು ಇನ್ನು ಲಭ್ಯವಾಗಿಲ್ಲ. ಸಿಸಿಟಿವಿ ಕ್ಲಿಪ್ಪಿಂಗ್ ಸಿಕ್ಕರೆ ಕಾರು ಈ ಸ್ಥಳಕ್ಕೆ ಯಾವಾಗ ಬಂದಿದ್ದು, ಎಂಬುದರ ಬಗ್ಗೆ ತಿಳಿಯಲಿದೆ ಎಂದು ಪೊಲೀಸರು ಹೇಳಿದರು.
-
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications