ಮಂಡಳಿ ಅನುಮತಿ ಪಡೆಯದೇ ಮನೆ ಗೋಡೆ ಒಡೆದು ಪ್ರವೇಶಿಸಿದವನಿಗೆ ದಂಡ ವಿಧಿಸಿದ ಕೋರ್ಟ್ ತೀರ್ಪು, ಏನಿದು? ತಿಳಿಯಿರಿ
ಬೆಂಗಳೂರಿನಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಿದ್ದ ಮನೆಗಳ ಮಧ್ಯದ ಗೋಡೆ ಒಡೆದು ಅನಧಿಕೃತ ಪ್ರವೇಶ ಮಾಡಿದ ಪ್ರಕರಣದಲ್ಲಿ ಅಂತಿಮ ತೀರ್ಪು ಹೊರಡಿಸಿದೆ ಸಿಎಂಎಂ ನ್ಯಾಯಾಲಯ.
ಬೆಂಗಳೂರು, ಮಾರ್ಚ್ 08: ಬೆಂಗಳೂರಿನ ಜಯನಗರಲ್ಲಿರುವ ರಾಗಿಗುಡ್ಡ ಕೊಳಚೆ ಪ್ರದೇಶದಲ್ಲಿ ಮಂಡಳಿ ವತಿಯಿಂದ ನಿರ್ಮಿಸಿದ ಮನೆಗಳ ನಡುಗೋಡೆ ಒಡೆದು ಹಾಕಿ ಅನಧಿಕೃತ ಪ್ರವೇಶ ಮಾಡಿರುವ ಆರೋಪಿಗೆ ಸಿಎಂಎಂ ನ್ಯಾಯಾಲಯವು ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯ (ವಾರ್ಡ್ ನಂ.177) ರಾಗಿಗುಡ್ಡ ಕೊಳಚೆ ಪ್ರದೇಶದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ನರ್ಮ್, ಬಿಎಸ್ಯುಪಿ ಯೋಜನೆಯಡಿ ನಿರ್ಮಿಸಿದ್ದ ನಿವೇಶನ ವಸತಿ ಸಂಕೀರ್ಣದ ಬ್ಲಾಕ್ ನಂ.1 ರಲ್ಲಿ 1ನೇ ಮಹಡಿಯನ್ನು ವೆಂಕಟೇಶ್ ಬಿನ್ ಕುರಪ್ಪನ್ ಅವರಿಗೆ ಹಂಚಿಕೆ ಮಾಡಲಾಗಿತ್ತು. ಸದರಿ ನಿವೇಶನಕ್ಕೆ ಹೊಂದಿಕೊಂಡಿರುವ ಮನೆ ನಂ.15 ಖಾಲಿ ಇತ್ತು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಯಾವುದೇ ಅನುಮತಿಯನ್ನು ಪಡೆಯದೇ ನಂ.11 ಮತ್ತು 15ರ ಮಧ್ಯ ಮಂಡಳಿಯಿಂದ ನಿರ್ಮಾಣ ಮಾಡಿದ್ದ ಅಡ್ಡಗೋಡೆಯನ್ನು ತೆರವುಗೊಳಿಸಿ ಆರೋಪಿ ಅನಧಿಕೃತ ಪ್ರವೇಶ ಮಾಡಿದ್ದ. ಇದರಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆರ್ಥಿಕ ನಷ್ಟ ಮಾಡಲಾಗಿತ್ತು.

ಈ ಸಂಬಂಧ ಬಿಎಂಟಿಎಫ್ ಪೊಲೀಸ್ ಠಾಣೆ 2015ರಲ್ಲಿ ಜೂನ್ 18 ರಂದು ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸಾಕ್ಷಾಧಾರ, ದಾಖಲೆ ಸಂಗ್ರಹಿಸಿದರು. ಸಿಎಂಎಂ ನ್ಯಾಯಾಲಯ ಬೆಂಗಳೂರಲ್ಲಿ ಸದರಿ ಪ್ರಕರಣದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಯಿತು. ಅದರ ವಿಚಾರಣೆ ನಡೆಯುತ್ತ ಬಂದಿದ್ದು, ಮಂಗಳವಾರ ಅಂತಿಮ ಆದೇಶ ಹೊರಬಿದ್ದಿದೆ.
ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಮನೆ ನಂ. 11 ಮತ್ತು 15ರ ಮಧ್ಯ ಮಂಡಳಿಯಿಂದ ನಿರ್ಮಾಣ ಮಾಡಿದ್ದ ಅಡ್ಡಗೋಡೆ ತೆರವುಗೊಳಿಸಿ ನವೀಕರಣ ಮಾಡಿರುವುದು ದೃಢಪಟ್ಟಿದೆ. ಆದ್ದರಿಂದ ಆರೋಪಿ ಜೆಪಿ ನಗರದ ರಾಗಿಗುಡ್ಡ ಸ್ಲಂ ನಿವಾಸಿ ವೆಂಕಟೇಶ್ ಬಿನ್ ಲೇಟ್ ಅವರಿಗೆ 10,000/ ರೂ ದಂಡ ವಿಧಿಸಲಾಗಿದೆ. ಒಂದು ವೇಳೆ ದಂಡ ಕಟ್ಟಲು ತಪ್ಪಿದ್ದಲ್ಲಿ 75ದಿನ ಕಾರಾಗೃಹ ಶಿಕ್ಷೆಗೆ ಒಳಗಾಗಬೇಕು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ.
ಸದರಿ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೃಷ್ಣಕುಮಾರ್, ರವರು ಕೈಗೊಂಡ ಉತ್ತಮ ತನಿಖೆಗಾಗಿ ಮತ್ತು ತನಿಖೆಗೆ ಸಹಕರಿಸಿದ ಸಿಬ್ಬಂದಿಯವರಿಗೆ ಡಾ, ಕೆ.ರಾಮಚಂದ್ರರಾವ್ ಐಪಿಎಸ್ ಎಡಿಜಿಪಿ ಬಿಎಂಟಿಎಫ್ ರವರು ಪ್ರಶಂಸೆ ವ್ಯಕ್ತವಾಗಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications