ದೋಸ್ತಿ ದೋಖಾ! ಸ್ನೇಹಿತೆಗೆ ತಿಳಿಯದಂತೆ ಆಕೆ ಹೆಸರಿನಲ್ಲಿ 30 ಲಕ್ಷ ಸಾಲ ಪಡೆದು ವಂಚಿಸಿದ ಸ್ನೇಹಿತ!
ಬೆಂಗಳೂರು ಜುಲೈ 26: ಸ್ನೇಹಿತನೊಬ್ಬ ಸ್ನೇಹಿತೆಗೆ ತಿಳಿಯದಂತೆ ಆಕೆ ಹೆಸರಿನಲ್ಲಿ 30 ಲಕ್ಷ ಸಾಲ ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸ್ನೇಹಿತೆ ತನ್ನ ಸ್ನೆಹಿತನ ವಿರುದ್ಧ ದೂರು ದಾಖಲಿಸಿದ್ದಾಳೆ.
ಹೌದು... ಸ್ನೇಹಿತೆಯ ಗಮನಕ್ಕೆ ಬಾರದಂತೆ ಆಕೆ ಹೆಸರಿನಲ್ಲಿ 30 ಲಕ್ಷ ಸಾಲ ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾರತಹಳ್ಳಿ ಅಶ್ವತ್ಥನಗರದ ಮೆಲಿಸ್ಸಾ ಪೌರಬ್ಬಾಸ್ ಎಂಬುವವರು ನೀಡಿದ ದೂರಿನ ಮೇರೆಗೆ ಗುರಪ್ಪನ ಪಾಳ್ಯದ ಮೊಹಮ್ಮದ್ ವಸೀಮ್ ಶೇಖ್ (28) ಎಂಬಾತನ ವಿರುದ್ಧ ನಂಬಿಕೆ ದ್ರೋಹ ಮತ್ತು ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಆಗಿದ್ದೇನು?
2019ರಂದು ನಗರದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಕ್ಕೆ ಸೇರಿದ್ದ ಮೆಲಿಸ್ಸಾಗೆ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ವಸೀಪ್ ಶೇಖ್ ಪರಿಚಯವಾಗಿತ್ತು. ಇಬ್ಬರು ಸ್ನೇಹಿತರಾಗಿದ್ದರು. 2021ರಲ್ಲಿ ಮೆಲಿಸ್ಸಾ ಆ ಕಂಪನಿಯಲ್ಲಿ ಉದ್ಯೋಗ ತೊರೆದು ಬೇರೊಂದು ಕಂಪನಿಗೆ ಸೇರಿದ್ದರು.
ಸ್ನೇಹಿತ ವಂಚಿಸಿದ್ದು ಹೇಗೆ?
2022ರಲ್ಲಿ ಮೊಹಮ್ಮದ್ ವಸೀಮ್ ಶೇಖ್, ಮೆಲಿಸ್ಸಾ ಅವರನ್ನು ಭೇಟಿಯಾಗಿ 'ನನ್ನ ಎರಡೂ ಮೂತ್ರಪಿಂಡಗಳು ಹಾಳಾಗಿವೆ. ಕಸಿ ಮಾಡಿಸಿಕೊಳ್ಳಲು ಹಣದ ಅಗತ್ಯವಿದೆ. ನನಗೆ ನಿನ್ನ ಬಿಟ್ಟರೆ ಬೇರೆ ಪರಿಚಯಸ್ಥರು ಇಲ್ಲ. ಕಸಿ ಮಾಡಿಸಲು 10 ಲಕ್ಷ ಅಗತ್ಯವಿದ್ದು, ನಿನ್ನ ಬ್ಯಾಂಕ್ ಖಾತೆಯಿಂದ 10 ಲಕ್ಷ ಸಾಲ ಕೊಡಿಸು' ಎಂದು ಕೇಳಿದ್ದಾನೆ. ಇದಕ್ಕೆ ಮೆಲಿಸ್ಸಾ ಒಪ್ಪಿಗೆ ಸೂಚಿಸಿದ್ದಾರೆ.
ಮೂರು ಬ್ಯಾಂಕ್ಗಳಲ್ಲಿ ತಲಾ 10 ಲಕ್ಷ ಸಾಲ!
ಮೊಹಮ್ಮದ್ ವಸೀಮ್ ಶೇಖ್, ಮೆಲಿಸ್ಸಾ ಗಮನಕ್ಕೆ ಬಾರದಂತೆ ಆಕೆಯ ಹೆಸರಿನಲ್ಲಿ ಮೂರು ಬೇರೆ ಬ್ಯಾಂಕ್ಗಳಲ್ಲಿ ತಲಾ 10 ಲಕ್ಷದಂತೆ ಒಟ್ಟು ಮೂರು ಲಕ್ಷ ಸಾಲ ತೆಗೆದುಕೊಂಡಿದ್ದಾನೆ. ಈ ವಿಚಾರ ಗೊತ್ತಾಗಿ ಮೆಲಿಸ್ಸಾ ಪ್ರಶ್ನೆ ಮಾಡಿದಾಗ ಏಳು ಲಕ್ಷ ವಾಪಾಸ್ ನೀಡಿದ್ದಾನೆ. ಉಳಿದ ಹಣ ವಾಪಾಸ್ ಕೇಳಲು ಕರೆ ಮಾಡಿದಾಗ ಮೊಹಮ್ಮದ್ ವಸೀಮ್ ಶೇಖ್ ಮೊಬೈಲ್ ಸ್ವಚ್ಡ್ ಆಫ್ ಮಾಡಿಕೊಂಡಿದ್ದಾನೆ.
ಹೀಗಾಗಿ ತಮಗೆ ನಂಬಿಕೆ ದ್ರೋಹ, ಮೋಸ ಮಾಡಿರುವ ಮೊಹಮ್ಮದ್ ವಸೀಮ್ ಶೇಖ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮೆಲಿಸ್ಸಾ ಎಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications