ಸಂಬಂಧಿಕರು ಬರುತ್ತಿಲ್ಲ: ಸರಕಾರದಿಂದಲೇ ಸಾಮೂಹಿಕ ಅಸ್ಥಿ ವಿಸರ್ಜನೆ
ಬೆಂಗಳೂರು, ಮೇ 22: ನಗರದ ವಿವಿಧ ಚಿತಾಗಾರಗಳಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿಯನ್ನು ಸಂಬಂಧಿಕರು ತೆಗೆದುಕೊಂಡು ಹೋಗದ ಹಿನ್ನಲೆಯಲ್ಲಿ ಸರಕಾರವೇ ಇದರ ವಿಸರ್ಜನೆಗೆ ಮುಂದಾಗಿದೆ.
ಈ ಬಗ್ಗೆ ಮಾತನಾಡುತ್ತಿದ್ದ ಕಂದಾಯ ಸಚಿವ ಆರ್.ಅಶೋಕ್, "ವಿವಿಧ ಶ್ಮಶಾನಗಳಲ್ಲಿ 1,200ಕ್ಕೂ ಹೆಚ್ಚು ಮಂದಿಯ ಅಸ್ಥಿಗಳನ್ನು ಸಂಬಂಧಿಕರು ತೆಗೆದುಕೊಂಡು ಹೋಗಿಲ್ಲ. ಬಿಎಂಪಿಯವರು ಸಂಬಂಧಪಟ್ಟವರಿಗೆ ಕರೆ ಮಾಡಿದರೆ ಅವರ ಫೋನ್ ಸ್ವಿಚ್ ಆಫ್ ಆಗಿರುತ್ತದೆ".
"ಹೀಗಾಗಿ ಗೌರವಯುತವಾಗಿ ಅಸ್ಥಿಗಳ ವಿಸರ್ಜನೆಯನ್ನು ಸರಕಾರದ ವತಿಯಿಂದಲೇ ಮಾಡಲು ನಿರ್ಧರಿಸಲಾಗಿದೆ. ಈ ಸಂಬಂಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ"ಎಂದು ಆರ್.ಅಶೋಕ್ ಹೇಳಿದ್ದಾರೆ.

ಕೊರೊನಾ ಎರಡನೇ ಅಲೆಯ ಮರಣಮೃದಂಗದಿಂದಾಗಿ, ಶ್ಮಶಾನದಲ್ಲಿ ಭಾರೀ ದಟ್ಟಣಿ ಉಂಟಾಗಿತ್ತು. ಆಗ ಸರಕಾರ, ಬೆಂಗಳೂರು ಹೊರವಲಯದ ಕೆಲವು ಪ್ರದೇಶಗಳಲ್ಲಿ ಶವಸಂಸ್ಕಾರಕ್ಕೆ ವ್ಯವಸ್ಥೆಯನ್ನು ಮಾಡಿತ್ತು.
ಜೊತೆಗೆ, ಮೃತಪಟ್ಟವರ ಸ್ವಂತ ಜಮೀನಿನಲ್ಲೂ ಅಂತಿಮ ಸಂಸ್ಕಾರ ಮಾಡಲು ಅವಕಾಶವನ್ನು ನೀಡಿತ್ತು. ಇದರಿಂದ, ನಗರದ ಚಿತಾಗಾರಗಳಲ್ಲಿ ಸಾಲುದ್ದದ ಕ್ಯೂ ದಿನೇ ದಿನೇ ಕಮ್ಮಿಯಾಗುತ್ತಾ ಬರುತ್ತಿದೆ.
ಬೆಂಗಳೂರಿನಲ್ಲಿ ಹೊಸ ಸೋಂಕಿತರ ಪ್ರಮಾಣ ಕಮ್ಮಿಯಾಗುತ್ತಾ ಬರುತ್ತಿದೆ. ಇನ್ನೊಂದೆಡೆ, ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆದರೆ, ಸಾವಿನ ಪ್ರಮಾಣ ಏರಿಳಿಕೆಯಾಗುತ್ತಿದೆ.
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?











Click it and Unblock the Notifications