ಕನ್ನಡ ಎಸ್ಸೆಂಎಸ್ ಬಳಕೆಗೆ ಸರ್ಕಾರದಿಂದ ತಂತ್ರಾಂಶ
ಬೆಂಗಳೂರು, ಸೆ. 18: ಬಹುಬಳಕೆಯ ಮಾಧ್ಯಮವಾದ ಮೊಬೈಲ್ನಲ್ಲಿ ಕನ್ನಡ ಬಳಕೆ ಹೆಚ್ಚಳಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಂತ್ರಾಂಶ ಅಭಿವೃದ್ಧಿ ಪಡಿಸಿದೆ. ಯುನಿಕೋಡ್ ಶಿಷ್ಟತೆಯನ್ನು ಒಳಗೊಂಡ ತಂತ್ರಾಂಶವನ್ನು ಸೆ. 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ.
ಯಾವುದೇ ಕಂಪನಿಯ ಫೋನ್ನಲ್ಲಿ ಕನ್ನಡ ಲಿಪಿಯೊಂದಿಗೆ ಸಂಪರ್ಕ ಸಾಧಿಸಲು ಈ ತಂತ್ರಾಂಶ ಸಹಾಯ ಮಾಡುತ್ತದೆ. ಕನ್ನಡದಲ್ಲೇ ಸಂದೇಶಗಳನ್ನು ಕಳುಹಿಸುವ ಮತ್ತು ಸ್ವೀಕರಿಸುವ ಸಾಧ್ಯತೆಗಳನ್ನು ಈ ತಂತ್ರಾಂಶದಲ್ಲಿ ತೆರೆದಿಡಲಾಗಿದೆ.
ಈ ತಂತ್ರಾಂಶಗಳನ್ನು ಅಧಿಕೃತವಾಗಿ ಕರ್ನಾಟಕ ಸರ್ಕಾರವು ಲೋಕಾರ್ಪಣೆಗೊಳಿಸುತ್ತಾ, ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಯೂನಿಕೋಡ್ ತಂತ್ರಾಂಶವನ್ನೇ ಬಳಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಮತ್ತು ಈ ಕುರಿತು ಅಗತ್ಯ ತರಬೇತಿಗಳನ್ನು ನೀಡಲಾಗುವುದು ಎಂದು ಇಲಾಖೆ ಪ್ರಕಟಿಸಿದೆ.[ಯೂನಿಕೋಡ್ ಶಿಷ್ಟತೆ ಫಲ, ಕನ್ನಡ ಎಸ್ಸೆಂಎಸ್ ಭಾಗ್ಯ]

ಇದಲ್ಲದೆ, ಕರ್ನಾಟಕದ ಸಾಂಸ್ಕೃತಿಕ ಉತ್ಸವಗಳನ್ನು ಕುರಿತು ಮೊಬೈಲ್ ಆಪ್ ಸಿದ್ಧಪಡಿಸಿದ್ದು, ಪ್ರತಿಯೊಂದು ಉತ್ಸವಗಳ ಸಾಂಸ್ಕೃತಿಕ ಹಿನ್ನಲೆ, ಆಚರಿಸುವ ಸ್ಥಳ, ಜಿಲ್ಲೆ, ಆಚರಿಸುವ ಬಗೆ ಮತ್ತು ಅದರ ವೈಶಿಷ್ಟ್ಯತೆಯನ್ನು ನೀಡಲಾಗಿದೆ.ಉತ್ಸವದ ಇತಿಹಾಸ ಮತ್ತು ಪರಂಪರೆ, ಧಾರ್ಮಿಕ ಪ್ರಾಮುಖ್ಯತೆ, ಸಾಮಾಜಿಕ ಪ್ರಸ್ತುತತೆ, ಈ ಸ್ಥಳಕ್ಕೆ ತಲುಪುವ ಬಗೆ ಹೇಗೆ ಎಂಬ ಬಗ್ಗೆ ಮಾಹಿತಿಯನ್ನು ಸಹ ನೀಡಲಾಗಿದೆ.
ಇದರಿಂದ ರಾಜ್ಯದ ಸಾಂಸ್ಕೃತಿಕ ತಾಣಗಳು ಮತ್ತು ಉತ್ಸವಗಳ ಮಹತ್ವವು ಇಲಾಖೆಯ ಜಾಲತಾಣದಲ್ಲಿ ವಿಶ್ವದಾದ್ಯಂತ ಪರಿಚಿತವಾಗುವುದಲ್ಲದೆ ವಿಶ್ವದಾದ್ಯಂತ ಬರುವ ಪ್ರವಾಸಿಗರಿಗೆ ಈ ಸ್ಥಳಗಳ ಪ್ರಾಮುಖ್ಯತೆ, ಉತ್ಸವಗಳು ನಡೆಯುವ ಕಾಲಮಾನ ಮತ್ತು ಅಲ್ಲಿಗೆ ಹೋಗಲು ಇರುವ ಸಾಧ್ಯತೆಗಳ ವಿವರಗಳನ್ನೆಲ್ಲಾ ಸುಲಭವಾಗಿ ಒದಗಿಸಿದಂತಾಗುತ್ತದೆ. [ಕುವೆಂಪು ತಂತ್ರಾಂಶ ಆವೃತ್ತಿ 2.0]
ಇದರಿಂದ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಿದಂತೆಯೂ ಆಗುತ್ತದೆ ಎಂಬ ಸದಾಶಯ ಇಲಾಖೆಯದ್ದಾಗಿದೆ. ಇದು ಆಂಡ್ರಾಯ್ಡ್ ಅಲ್ಲದೆ ವಿಂಡೋಸ್ ಎಚ್ ಟಿಎಂಎಲ್ 5ನಲ್ಲಿ ಲಭ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications