ಮೆಜೆಸ್ಟಿಕ್ನಲ್ಲಿ ಅಂಧ ದಂಪತಿಯ 8 ತಿಂಗಳ ಹಸುಗೂಸು ಅಪಹರಣ
ಬೆಂಗಳೂರು, ಏಪ್ರಿಲ್ 30: ಸಂಬಂಧಿಕರ ಮನೆಗೆಂದು ನಗರಕ್ಕೆ ಬಂದಿದ್ದ ಅಂಧ ದಂಪತಿಗಳ 8 ತಿಂಗಳ ಹಸುಗೂಸನ್ನು ಮಹಿಳೆಯೊಬ್ಬರು ಅಪಹರಿಸಿದ ಘಟನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಡೆದಿದೆ.
ರಾಯಚೂರು ಮೂಲದ ಬಸವರಾಜು ಮತ್ತು ಬಿಕೆ ಚಿನ್ನು ದಂಪತಿಯ ಮಗು ಸಾಗರ್ನನ್ನು ಅಪಹರಣ ಮಾಡಲಾಗಿದ್ದು,ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು ಮಗು ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ದಂಪತಿ ಕೆಎಸ್ಆರ್ಟಿಸಿ ಬಸ್ ಮೂಲಕ ರಾಯಚೂರಿನಿಂದ ಬೆಂಗಳೂರಿಗೆ ಬಂದಿದ್ದರು. ಮೆಜೆಸ್ಟಿಕ್ ಶೌಚಾಲಯದಲ್ಲಿ ದಂಪತಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಬೆಳಗ್ಗೆ 7.30ರ ಸುಮಾರಿಗೆ ನಿಲ್ದಾಣದಲ್ಲಿರುವ ಪ್ಲಾಟ್ಫಾರಂ ಸಂಖ್ಯೆ 19ರಲ್ಲಿ ಮಗು ಜೊತೆ ಕುಳಿತಿದ್ದರು. ಮಗು ಜೋರಾಗಿ ಅಳುತ್ತಿದ್ದ ಹಿನ್ನೆಲೆಯಲ್ಲಿ ಚಿನ್ನು ಮಗುವಿಗೆ ನೀರು ಕುಡಿಸುವುದಾಗಿ ಬಾಟಲಿ ಪಡೆದುಕೊಂಡಿದ್ದಾಳೆ.

ನಮಗೆ ಯಾರೋ ಸಹಾಯ ಮಾಡುತ್ತಿದ್ದಾರೆ ಎಂದುಕೊಂಡು ಚಿನ್ನು ಅವರು ಮಹಿಳೆಗೆ ಕೈಗೆ ನೀರಿನ ಬಾಟಲಿ ನೀಡಿದ್ದಾರೆ. ನಂತರ ಮಗುವನ್ನು ಎತ್ತಿಕೊಳ್ಳುತ್ತೇನೆ ಎಂದು ಮಹಿಳೆಯು ಮಗುವನ್ನು ಕೇಳಿದ್ದು, ಚಿನ್ನು ಮಗುವನ್ನು ಆಕೆಗೆ ನೀಡಿದ್ದಾಳೆ. ಕೆಲ ನಿಮಿಷಗಳ ಬಳಿಕ ಮಗುವನ್ನು ಕೊಡುವಂತೆ ಕೇಳಿದ್ದಾಳೆ. ಆದರೆ ಯಾರಿಂದಲೂ ಪ್ರತಿಕ್ರಿಯೆ ಬಂದಿಲ್ಲ, ಅಲ್ಲೆಲ್ಲಾ ಹುಡುಕಾಡಿದಾಗಲೂ ಮಗು ಸಿಗಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications