ಎಗ್ಗಿಲ್ಲದೆ ವಿಜೃಂಭಿಸುತ್ತಿದೆ ಲೈವ್ಬ್ಯಾಂಡ್: ಪೊಲೀಸರ ಡೋಂಟ್ ಕೇರ್
ಬೆಂಗಳೂರು, ಆಗಸ್ಟ್ 23: ಬೆಂಗಳೂರಲ್ಲಿ ಪರವಾನಗಿ ಇಲ್ಲದ ಲೈವ್ಬ್ಯಾಂಡ್ಗಳು ಮತ್ತೆ ಸದ್ದುಮಾಡುತ್ತಿವೆ. ಪರವನಾಗಿ ಇಲ್ಲದ ಲೈವ್ ಬ್ಯಾಂಡ್ಗಳಿಗೆ ನೋಟಿಸ್ ನೀಡಿದ್ದರೂ ಕೂಡ ಮಾಲೀಕರು ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗೆಯೇ ಪೊಲೀಸರು ಹೇಳಿ ಹೇಳಿ ಸುಸ್ತಾದಂತಿದೆ.
ಈ ರೀತಿ ಲೈವ್ಬ್ಯಾಂಡ್ಗಳಲ್ಲಿ ಹಾಕುವ ಸಂಗೀತದಿಂದಾಗಿ ಅಕ್ಕ-ಪಕ್ಕದ ಮನೆಗಳಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರು ಕೇಲಿ ಬಂದಿತ್ತು ಹೀಗಾಗಿ ಇಂತಹ ಲೈವ್ಬ್ಯಾಂಡ್ಗಳಿಗೆ ನೋಟಿಸ್ ನೀಡಲಾಗಿತ್ತು.
ಆದರೆ ಲೈವ್ಬ್ಯಾಂಡ್ನಿಂದ ಮಾಲೀಕರಿಗೆ ಸಾಕಷ್ಟು ಲಾಭವಿದೆ. ಪರವಾನಗಿಗೆ ಅರ್ಜಿ ಸಲ್ಲಿಸಿದರೂ ಇನ್ನೂ ಪರವಾನಗಿ ದೊರೆತಿಲ್ಲ ಎಂದು ಮಾಲೀಕರು ಸಬೂಬು ಹೇಳುತ್ತಿದ್ದಾರೆ. ಪರವಾನಗಿ ಪ್ರಕ್ರಿಯೆ ಮುಗಿಯಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಇಂತಹ ಪಬ್ ಗಳಲ್ಲಿ ಸಂಗೀತ ಹಾಕಲು ಅವಕಾಶ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಕೆಲ ಪಬ್ ಗಳಿಗೆ ನೋಟಿಸ್ ನೀಡಲಾಗಿತ್ತು. ಬಳಿಕ ಪರವಾನಗಿ ಪಡೆಯಲು ಹೆಚ್ಚಿನ ಅರ್ಜಿಗಳು ಬಂದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಯಾವುದೇ ರೀತಿಯ ಸಂಗೀತ ಕೇಳಿಸುವ ಪಬ್ ಗಳು ಆ ಸ್ಥಳಕ್ಕೆ ಆಕ್ಯುಪೆನ್ಸಿ ಸರ್ಟಿಫೀಕೇಟ್, ಅಗ್ನಿಶಾಮಕ ಇಲಾಖೆಯಿಂದ, ಬಿಬಿಎಂಪಿ ಸೇರಿ ವಿವಿಧ ಇಲಾಖೆಯಿಂದ ಪರವಾನಗಿ ಮತ್ತು ನಿರಾಪೇಕ್ಷಣ ಪತ್ರ ಪಡೆಯಬೇಕು ಎಂಬ ನಿಯಮಗಳಿವೆ ಆದರೆ ಪಬ್ ಗಳನ್ನು ನಡೆಸಲು ಅವಕಾಶವಿಲ್ಲದ ಸ್ಥಳಗಳಲ್ಲಿಯೂ ಯಾವುದೇ ನಿರಾಪೇಕ್ಷಣ ಪತ್ರವಾಗಿರಲಿ, ಪರವಾನಗಿಯಾಗಿರಲಿ ತೆಗೆದುಕೊಳ್ಳದೆ ಎಗ್ಗಿಲ್ಲದೆ ಪಬ್ ನಡೆಸುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ











Click it and Unblock the Notifications