'ಬೆಂಗಳೂರಿನಲ್ಲಿ ಬಡವರಿಗೆ ಸೂರು ಕಲ್ಪಿಸಲು ಕೇಂದ್ರ ಸಿದ್ಧ'
ಬೆಂಗಳೂರು, ಡಿಸೆಂಬರ್ 14 : ಬೆಂಗಳೂರಿನಲ್ಲಿ ಸೂರಿಲ್ಲದ ಜನರಿಗೆ ಸೂರು ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದೆ, ಅದರ ಜತೆಗೆ ಪ್ರಧಾನ ಮಂತ್ರಿ ಆವಾಜ್ ಯೋಜನೆಗೂ ಕೂಡ ಹೆಚ್ಚಿನ ನೆರವು ನೀಡಲು ಕೇಂದ್ರ ಸಜ್ಜಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ತಿಳಿಸಿದರು.
ನಗರದ ಖಾಸಗಿ ಹೋಟೆಲ್ ವೊಂದರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ರಾಜ್ಯದಲ್ಲಿ ವಸರತಿ ಯೋಜನೆ ಸರಿಯಾಗಿ ಜಾರಿಯಾಗುತ್ತಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸೂರು ಕಲ್ಪಿಸುವುದು ಸರ್ಕಾರಗಳ ಜವಾಬ್ದಾರಿ.ತ್ಯಾಜ್ಯ ನೀರು ಸಂಸ್ಕರಣೆಗೆ ಹೆಚ್ಚಿನ ಆದ್ಯತೆ ನೀಡಲಿದ್ದೇವೆ ಎಂದರು.

ರಾಜ್ಯದ 7ನಗರಗಳನ್ನು ಸ್ಮಾರ್ಟ್ ಸಿಟಿ ಮಾಡಲು ಆಯ್ಕೆ ಮಾಡಲಾಗಿದೆ.ದಾವಣಗೆರೆ, ತುಮಕೂರು, ಮಂಗಳೂರು, ಬೆಳಗಾವಿ, ಶಿವಮೊಗ್ಗ, ಹುಬ್ಬಳಿ- ಧಾರವಾಡ, ಬೆಂಗಳೂರು ನಗರಗಳನ್ನ ಸ್ಮಾರ್ಟ್ ಸಿಟಿ ಮಾಡಲಾಗುವುದು. 14,104 ಕೋಟಿ ರೂ ಸ್ಮಾರ್ಟ್ ಸಿಟಿಗೆ ಪ್ರಸ್ತಾವನೆ ಇದೆ ಎಂದು ಹೇಳಿದರು.
ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್. ಯೋಜನೆ ಮಾರ್ಚ್ ಅಂತ್ಯಕ್ಕೆ ಪೂರ್ಣ ಎಂದು ಹೇಳುವ ಸಂದರ್ಭದಲ್ಲಿ ಕಾಮಗಾರಿ ಶೇ.60 ರಷ್ಟು ಮಾತ್ರ ಮುಗಿದಿದೆ ಎಂದು ತಿಳಿದಾಗ ಅಧಿಕಾರಿಗಳು ತಮಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಷಯ ತಿಳಿದು ಏಪ್ರಿಲ್ 1 ರೊಳಗೆ ಕಾಮಮಗಾರಿ ಪುರ್ಣಗೊಳಿಸಬೇಕು ಎಂದು ಗಡುವು ನೀಡಿದರು. ರಾಜ್ಯ ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣಪ್ಪ, ರೋಷನ್ ಬೇಗ್ ಹಾಜರಿದ್ದರು.












Click it and Unblock the Notifications