ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ
Suraj Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ, ಸಹೋದರ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ಬಗ್ಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಈ ವೇಳೆ ಸೂರಜ್ ರೇವಣ್ಣ ಪ್ರಕರಣಕ್ಕೆ ಬಗ್ಗೆ ಕೇಳುತ್ತಿದ್ದಂತೆ ಆಕ್ರೊಶಗೊಂಡಿದ್ದಾರೆ. ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ. ರಾಜ್ಯಕ್ಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಅಷ್ಟೇ ಚರ್ಚೆ ಮಾಡಿ ಅಂತಾ ಹೇಳಿದ್ದಾರೆ.
ಇಂತಹ ವಿಚಾರಗಳನ್ನಯ ನನ್ನ ಹತ್ತಿರ ಯಾಕೆ ಚರ್ಚೆ ಮಾಡುತ್ತೀರಾ? ಅದರ ಅವಶ್ಯಕತೆ ಏನಿದೆ? ಕಾನೂನು ಇದ್ದು, ಅದನ್ನು ಕಾನೂನು ನೋಡಿಕೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಆ ತರಹದ ಪ್ರಶ್ನೆಗಳನ್ನು ಕೇಳಬೇಡಿ ಎಂದು ಗರಂ ಆಗಿದ್ದಾರೆ.
ಅತ್ಯಾಚಾರ ಆರೋಪ: ಸೂರಜ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಿಂದ ಮುಜುಗರಕ್ಕೀಡಾಗಿದ್ದ ರೇವಣ್ಣ ಕುಟುಂಬ ಮತ್ತಷ್ಟು ಮುಜುರಕ್ಕೆ ಒಳಗಾಗುವಂತಾಗಿದೆ.
ಇನ್ನು ಸಂತ್ರಸ್ತ ಯುವಕ ಸಿಎಂ, ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎಂದು ಕಾದುನೋಡಬೇಕಿದೆ. ಎಚ್.ಡಿ.ರೇವಣ್ಣ ಅವರ ಮಗ ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡಿದ್ದು, ಈ ವೇಳೆ ಆತನ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಗಂಭೀರ ಆರೋಪ ಇದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications