ನಮ್ಮ ಮೆಟ್ರೋದಲ್ಲಿ ತ್ರಿಭಾಷಾ ಸೂತ್ರ: ಸದಾನಂದ ಗೌಡರ ಹಿಂದಿ ವ್ಯಾಮೋಹ?
ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಸಂಬಂಧ ಗುರುವಾರ (ಜು6) ಕರೆಯಲಾಗಿದ್ದ ಸಭೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗದೇ ಮುಂದೂಡಲ್ಪಟ್ಟಿದೆ. ಸದಾನಂದ ಗೌಡ ಈಗಿರುವ ಹಿಂದಿ ಸೇರಿದಂತೆ ಮೂರು ಭಾಷೆಗಳನ್ನು ಬಳಸುವುದಕ್ಕೆ ಒಲವು ತೋರಿದರೆ, ಕೆ ಜೆ ಜಾರ್
ಬೆಂಗಳೂರು, ಜುಲೈ 7: ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಸಂಬಂಧ ಗುರುವಾರ (ಜು6) ಕರೆಯಲಾಗಿದ್ದ ಸಭೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗದೇ ಮುಂದೂಡಲ್ಪಟ್ಟಿದೆ.
ನಮ್ಮ ಮೆಟ್ರೋದಲ್ಲಿ ಪಾಲಿಸಲಾಗುತ್ತಿರುವ ತ್ರಿಭಾಷಾ ಸೂತ್ರದ ಬಗ್ಗೆ ಕೇಂದ್ರ ಮತ್ತು ರಾಜ್ಯದ ಪ್ರತಿನಿಧಿಗಳು ಗುರುವಾರ ಸಭೆ ಸೇರಿದ್ದರು. ಕೇಂದ್ರದ ಪ್ರತಿನಿಧಿಯಾಗಿ ಸಚಿವ ಸದಾನಂದ ಗೌಡ, ರಾಜ್ಯದ ಪ್ರತಿನಿಧಿಯಾಗಿ ಕೆ ಜೆ ಜಾರ್ಜ್ ಮತ್ತು ಸಂಸದ ಪಿ ಸಿ ಮೋಹನ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ಕೇಂದ್ರ ಸಚಿವ ಸದಾನಂದ ಗೌಡ ಈಗಿರುವ ಹಿಂದಿ ಸೇರಿದಂತೆ ಮೂರು ಭಾಷೆಗಳನ್ನು ಬಳಸುವುದಕ್ಕೆ ಒಲವು ತೋರಿದರೆ, ಬೆಂಗಳೂರು ನಗರಾಭಿವೃದ್ದಿ ಸಚಿವ ಕೆ ಜೆ ಜಾರ್ಜ್ ಕನ್ನಡ ಮತ್ತು ಇಂಗ್ಲಿಷ್ ಭಾಷೆ ಇದ್ದರೆ ಸಾಕು ಎನ್ನುವ ನಿಲುವು ತಾಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ #NammaMetroHindiBeda ಅಭಿಯಾನ ಗೊಂದಲದಿಂದ ಕೂಡಿದ್ದು, ಮಾಧ್ಯಮಗಳು ಇದಕ್ಕೆ ಹೈಪ್ ನೀಡುತ್ತಿವೆ ಎಂದು ಸದಾನಂದ ಗೌಡ ಅಭಿಪ್ರಾಯ ಪಟ್ಟಿದ್ದಾರೆ.
ಕೇಂದ್ರದ ಸಚಿವನಾಗಿ ನಮ್ಮ ಮೆಟ್ರೋದಲ್ಲಿ ಮೂರು ಭಾಷೆ ಬಳಸುವುದಕ್ಕೆ ನನ್ನ ಅಭ್ಯಂತರವಿಲ್ಲ. ಕನ್ನಡ, ಜೊತೆಗೆ ಹಿಂದಿಯನ್ನು ಬಹಳಷ್ಟು ರಾಜ್ಯಗಳಲ್ಲಿ ಬಳಸಲಾಗುತ್ತದೆ, ಜೊತೆಗೆ ಇಂಗ್ಲಿಷ್ ಅಂತರಾಷ್ಟ್ರೀಯ ಭಾಷೆಯಾಗಿರುವುದರಿಂದ ಮೂರು ಭಾಷೆಯಿದ್ದರೆ ತಪ್ಪಿಲ್ಲ ಎನ್ನುವ ಹೇಳಿಕೆಯನ್ನು ಸದಾನಂದ ಗೌಡ ನೀಡಿದ್ದಾರೆಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.
ನಮ್ಮ ಮೆಟ್ರೋದಲ್ಲಿ ಹಿಂದಿ ಬಳಸುವುದಕ್ಕೆ ನಮ್ಮ ವಿರೋಧವಿದೆ, ಸಿದ್ದರಾಮಯ್ಯ ನವದೆಹಲಿಗೆ ಇತ್ತೀಚೆಗೆ ಭೇಟಿ ನೀಡಿದ್ದ ವೇಳೆ, ಕನ್ನಡ ಮತ್ತು ಇಂಗ್ಲಿಷ್ ಮಾತ್ರ ಸಾಕು ಎನ್ನುವ ಹೇಳಿಕೆಯನ್ನು ನೀಡಿದ್ದಾರೆಂದು ಕೆ ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
Bengaluru Metro: ORR ರಸ್ತೆಯ ನೀಲಿ ಮಾರ್ಗದಲ್ಲಿ ಸಂಯೋಜಿತ ಗರ್ಡರ್ ಸ್ಥಾಪನೆ -
Traffic Alert: ಬೆಂಗಳೂರು ಹೊರ ವರ್ತುಲ ಸವಾರರೇ ಗಮನಿಸಿ, ರಸ್ತೆ ಸಂಚಾರ ನಿರ್ಬಂಧ -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ











Click it and Unblock the Notifications