ಮರ್ಯಾದಾ ಪುರುಷೋತ್ತಮ ಶ್ರೀರಾಮನ ನೃತ್ಯ ರೂಪಕ
ಬೆಂಗಳೂರು ಜನವರಿ 27: ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಆದರ್ಶಗಳನ್ನು ಪ್ರಸ್ತುತಪಡಿಸಲಿರುವ ಶ್ರೀ ರಾಮ ಯಾನ ಕುರಿತ ನೃತ್ಯ ರೂಪಕವನ್ನು ದೇಶದಲ್ಲೇ ಮೊದಲ ಬಾರಿಗೆ ಫೆಬ್ರವರಿ 5 ರಂದು ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದೆ ಎಂದು ಖ್ಯಾತ ನಿರ್ದೇಶಕ ಹಾಗೂ ರಂಗಕರ್ಮಿ ಟಿ ಎಸ್ ನಾಗಾಭರಣ ಅವರು ಹೇಳಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀ ರಾಮಾಯಣದ ಪಾತ್ರಧಾರಿಗಳು ಪ್ರದರ್ಶಿಸಿದ ನಂತರ ಅವರು ಮಾತನಾಡಿದ, ರಾಜ್ಯದ ಹೆಸರಾಂತ ಸಂಗೀತಗಾರ್ತಿ ಪಿ. ರಮಾ ಮತ್ತು ಪ್ರಖ್ಯಾತ ನೃತ್ಯ ಕಲಾವಿದೆ ಡಾ.ವೀಣಾ ಮೂರ್ತಿ ವಿಜಯರ್ ರವರು ಇದೇ ಫೆಬ್ರವರಿ 3,4 ಮತ್ತು 5 ನೇ ತಾರೀಖುಗಳಂದು ಮೂರು ದಿನಗಳ ಕಾಲ ಸಂಗೀತ ಸಂಭ್ರಮ ಟ್ರಸ್ಟ್ ವತಿಯಿಂದ ನಮ್ಮ ಪವಿತ್ರ ಗ್ರಂಥ ರಾಮಾಯಣಕ್ಕೆ ಸಂಬಂಧಿಸದಂತೆ ವಿವಿಧ ಕಲಾ ಪ್ರಕಾರಗಳ ಕಲಾ ಉತ್ಸವವನ್ನು ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿಸುತ್ತಾರೆ. ಈ ಕಲಾ ಉತ್ಸವವರು ಪ್ರಸ್ತುತ ನಮ್ಮ ಕಲೆ ಮತ್ತು ಸಂಸ್ಕೃತಿಯ ಮೌಲ್ಯವನ್ನು ಎತ್ತಿಹಿಡಿಯುವಲ್ಲಿ ಬಹಳ ಪ್ರಮುಖವಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ನಡೆಸಿಕೊಡಲಿದ್ದು, ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಜಿ ಅವರು ಪಾಲ್ಗೊಳ್ಳಿದ್ದಾರೆ ಎಂದು ಹೇಳಿದರು.

ನೃತ್ಯ ರೂಪಕದಲ್ಲಿ ರಾಮಾಯಣ
ಶ್ರೀ ರಾಮಾಯಣವನ್ನು ನೃತ್ಯ ರೂಪಕದಲ್ಲಿ ಪ್ರಸ್ತುತುಪಡಿಸುತ್ತಿರುವುದು ಇದೇ ಮೊದಲ ಪ್ರಯತ್ನವಾಗಿದೆ. ಅಂತಹ ಅಮೂಲಾಗ್ರ ಸಂಪುಟವನ್ನು ಈ ನೃತ್ಯ ರೂಪಕದಲ್ಲಿ ಸಂಗೀತ ಸಂಭ್ರಮ ಟ್ರಸ್ಟ್ ನ ಶ್ರೀಮತಿ ಪಿ.ರಮಾ ಹಾಗೂ ಡಾ. ವೀಣಾಮೂರ್ತಿ ವಿಜಯ್ ರವರು ಪ್ರಸ್ತುತಪಡಿಸುತ್ತಿದ್ದಾರೆ. ಈ ಟ್ರಸ್ಟ್ ಅಡಿಯಲ್ಲಿ ಕಳೆದ 2 ತಿಂಗಳಿನಿಂದ ರಾಮಾಯಣದ ಬಗ್ಗೆ 24 ಶಾಲೆಗಳಲ್ಲಿ ಕಾಳಜಿ ಹಾಗೂ ಗೌರವ ಮೂಡಿಸುವ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಈ ಪ್ರಚಾರ/ಅಭಿಯಾವನು ಚಿತ್ರಕಲೆ, ಕಥೆ ಹೇಳುವುದುದ, ಶ್ಲೋಕ ಪಠಣ ಮತ್ತು ಹಾಡುವುದನ್ನೊಳಗೊಂಡಿದ್ದು ಉತ್ಸಾಹಿ ಮಾರ್ಗದರ್ಶಕರಿಂದ ಯಶಸ್ವಿಯಾಗಿದೆ.

ಸಂಗೀತ ಸಂಭ್ರಮ ಟ್ರಸ್ಟಿನ ಅಧ್ಯಕ್ಷೆ ಡಾ.ಪಿ ರಮಾ
ಸಂಗೀತ ಸಂಭ್ರಮ ಟ್ರಸ್ಟಿನ ಅಧ್ಯಕ್ಷೆ ಡಾ.ಪಿ ರಮಾ ಅವರು ಮಾತನಾಡಿ, ಫೆಬ್ರವರಿ 3, 4 ಮತ್ತು 5 ಮೂರು ದಿನಗಳ ಕಾಲ ನಡೆಯಲಿರುವ ಸಂಗೀತ ಸಂಭ್ರಮ ನಡೆಯಲಿದೆ. ಫೆಬ್ರವರಿ 3 ರಂದು ಸೊಮವಾರ ಬೆಳಿಗ್ಗೆ ಶ್ರೀ ರಾಮ ಯಾನ - ನಡಿಗೆ ಮತ್ತು ಗಿಡನೆಡುವ ಕಾರ್ಯಕ್ರಮ ನಡೆಯಲಿದೆ. 24 ಶಾಲೆಯ 2000 ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ. ಸಂಜೆ ಯದುಗಿರಿ ಯತಿರಾಜ ನಾರಾಯಣ ಜೀಯರ್ ಸ್ವಾಮೀಜಿ ಹಿರಿಯ ಮಹೋನ್ನತ ಕಲಾವಿದರಿಗೆ/ವಿದ್ವಾಂಸರಿಗೆ "ಸಂಭ್ರಮ ಪುರಸ್ಕಾರ" ನೀಡಿ ಗೌರವಿಸಲಾಗುವುದು. ಪ್ರಸಿದ್ದ ರಂಗಕರ್ಮಿ ಹಾಗೂ ನಿರ್ದೇಶಕರಾದ ಟಿ ಎಸ್ ನಾಗಾಭರಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಭ್ರಮ ಪುರಸ್ಕಾರ ಸ್ವೀಕರಿಸಲಿರುವ ಶತಾವಧಾನಿ ಆರ್. ಗಣೇಶ್ ನಂತರ ಸಂಜೆ 6:45ಕ್ಕೆ ಪ್ರಾಚೀನ ಭಾರತ ಹಾಗೂ ಪ್ರಸ್ತುತ ನವ ಭಾರತದಲ್ಲಿ ರಾಮಾಯಣದ ಪ್ರಾಮುಖ್ಯತೆ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.

ಬೆಂಗಳೂರು ನಾಗರತ್ನಮ್ಮ ನಾಟಕ
ಫೆಬ್ರವರಿ 04-02-2020 ಮಂಗಳವಾರದಂದು ಶ್ರೀರಾಮನ ಭಕ್ತೆ, ಹೆಸರಾಂತ ಸಂಗೀತಗಾರ್ತಿ ಬೆಂಗಳೂರು ನಾಗರತ್ನಮ್ಮನವರ ಜೀವನದ ಸತ್ಯ ಕಥೆಯನ್ನಾಧರಿಸಿದ ನಾಟಕದ ಪ್ರದರ್ಶನ ಆಯೋಜಿಸಲಾಗಿದೆ. ಇದರ ಪರಿಕಲ್ಪನೆ, ವಿನ್ಯಾಸ ಮತ್ತು ನಿರ್ದೇಶವನ್ನು ಟಿ.ಎಸ್ ನಾಗಾಭರಣ ಅವರದ್ದಾಗಿದೆ ಎಂದು ಹೇಳಿದರು. ಈ ಅಭಿಯಾನವು ರಾಮಾಯಣ ಕುರಿತಂತೆ ಅಂತರ್ ಶಾಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಫೆಬ್ರವರಿ 3 ನೇ ತಾರೀಖ ಬೆಳಿಗ್ಗೆ ಸ್ಪರ್ಧಾ ವಿಜೇತರಿಂದ ಪ್ರದರ್ಶನವನ್ನೂ ಆಯೋಜಿಸಲಾಗಿದೆ ಎಂದು ಹೇಳಿದರು.

ಡಿಸಿಎಂ ಡಾ ಸಿ.ಎನ್ ಅಶ್ವಥ್ ನಾರಾಯಣ ನೆರವು
ಫೆಬ್ರವರಿ 05-02-2020 ಬುಧವಾರದಂದು ಶ್ರೀ ರಾಮ ಯಾನ - ರಾಮಾಯಣ ಗ್ರಂಥ ಕುರಿತು ನೃತ್ಯ ರೂಪಕ ವನ್ನು ಆಯೋಜಿಸಲಾಗಿದೆ. ಶ್ರೀ ರಾಮಾಯಣ ಸಮಗ್ರತೆಯನ್ನು ಸುಂದರ ಕಾವ್ಯದ ರೂಪದಲ್ಲಿ ಹಿರಿಯ ಕಲಾವಿದರುಗಳು ವೇದಿಕೆಯ ಮೇಲೆ ಪ್ರಸ್ತುತಪಡಿಸಲಿದ್ದಾರೆ. ಪ್ರಶಾಂತ್ ಗೋಪಾಲ ಶಾಸ್ತ್ರಿ ಶ್ರೀ ರಾಮನ ಪಾತ್ರದಲ್ಲಿ ಹಾಗೂ ಸೌಂದರ್ಯ ಶ್ರೀವತ್ಸ ಅವರು ಸೀತಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂರುದಿನಗಳ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಾ ಸಿ.ಎನ್ ಅಶ್ವಥ್ ನಾರಾಯಣ ಅವರು ಬಹಳ ಸಹಯೋಗವನ್ನು ನೀಡಿದ್ದಾರೆ ಎಂದು ತಿಳಿಸಿದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications