ಚೈನಾ ಹೂಗಳ ವಿರುದ್ಧ ಬೆಂಗಳೂರಲ್ಲಿ ವಿನೂತನ ಪ್ರತಿಭಟನೆ
Recommended Video
ಬೆಂಗಳೂರು, ಸೆಪ್ಟೆಂಬರ್ 29 : ಚೈನಾ ಪ್ಲಾಸ್ಟಿಕ್ ಹೂಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಯಿತು. 10 ಲಕ್ಷ ರೂ. ಮೌಲ್ಯದ ಹೂಗಳನ್ನುಉಚಿತವಾಗಿ ಹಂಚಿ ನೂರಾರು ಜನರು ಪ್ರತಿಭಟನೆ ನಡೆಸಿದರು.
ಭಾನುವಾರ ದಕ್ಷಿಣ ಭಾರತದ ಹೂ ಬೆಳೆಗಾರರ ಸಂಘದ ವತಿಯಿಂದ ಲಾಲ್ ಬಾಗ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಉಚಿತವಾಗಿ ಹೂಗಳನ್ನು ಹಂಚಿ, ಪ್ಲಾಸ್ಟಿಕ್ ಹೂ ಬಳಕೆಯಿಂದ ಪರಿಸರದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಯಿತು.
ಹೂ ಬೆಳೆಗಾರರನ್ನು ಬೀದಿಗೆ ತಳ್ಳಿರುವ ಚೈನಾದಿಂದ ಆಮದುಗೊಳ್ಳುವ ಪ್ಲಾಸ್ಟಿಕ್ ಹೂಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಹೂ ಮಾರಾಟಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು ಎಂದು ಪ್ರತಿಭಟನಾನಿರತರು ಸರ್ಕಾರವನ್ನು ಒತ್ತಾಯಿಸಿದರು.
ಕೃತಕ ಹೂಗಳಿಂದಾಗಿ ಪ್ರತಿ ಏಕರೆಗೆ 50 ಲಕ್ಷ ರೂಪಾಯಿ ಬಂಡವಾಳವನ್ನು ಹೂಡುವ ಮೂಲಕ ಪಾಲಿ ಹೌಸ್ ಸೇರಿದಂತೆ ಹಲವಾರು ಉಪಕರಣಗಳನ್ನು ಖರೀದಿ ಮಾಡಿ ಹೂ ಬೆಳೆದ ರೈತರಿಗೆ ಸರಿಯಾದ ಪ್ರತಿಫಲ ಸಿಗುತ್ತಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಪರಿಸರಕ್ಕೆ ಹಾನಿ
ಪ್ಲಾಸ್ಟಿಕ್ ಬಳಸಿ ತಯಾರಿಸಿರುವ ಕೃತಕ ಹೂಗಳು ಸುಲಭವಾಗಿ ಕೊಳೆಯುವಂತಹವಲ್ಲ. ಕಾಲ ಕ್ರಮೇಣ ಭೂಮಿಗೆ ಹಾಗೂ ನೀರಿಗೆ ಸೇರಿ ಪರಿಸರವನ್ನು ಹಾಳುಗೆಡವುತ್ತವೆ ಎಂದು ಪ್ರತಿಭಟನಾನಿರತರು ಆತಂಕ ವ್ಯಕ್ತಪಡಿಸಿದರು.

ಕೃತಕ ಹೂಗಳ ಬಳಕೆ ಹೆಚ್ಚಾಗುತ್ತಿದೆ
ದೆೇಶದ ಶೆೇಕಡಾ 78 ರಷ್ಟು ಭಾಗದ ಜನರು ಈಗಲೂ ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ವರ್ಷದಿಂದ ವರ್ಷಕ್ಕೆ ಹಬ್ಬಗಳಲ್ಲಿ, ಮದುವೆ ಹಾಗೂ ಇನ್ನಿತರ ಸಮಾರಂಭಗಳಲ್ಲಿ ಕೃತಕ ಹೂಗಳ ಬಳಕೆ ಹೆಚ್ಚಾಗುತ್ತಿದೆ. ಇದೇ ರೀತಿಯ ಬಳಕೆ ಹೆಚ್ಚಾದಲ್ಲಿ ನೈಸರ್ಗಿಕ ಹೂಗಳ ಬಳಕೆ ಸಂಪೂರ್ಣ ಕಡಿಮೆಯಾಗಲಿದ್ದು, ಹೂಗಳ ಬಳಕೆ ಸಂಪೂರ್ಣ ಕಡಿಮೆಯಾಗಲಿದ್ದು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೂವಿನ ಬಳಕೆ ನಿಷೇಧಿಸಿ
ರಾಜ್ಯ ಹಾಗೂ ದೇಶದ ಪ್ರಮುಖ ಹೂ ಬೆಳೆಗಾರರ ಹಬ್ ಆಗಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಹೂ ಬೆಳೆಗಾರರ ರೈತರ ಹಿತಾಸಕ್ತಿಯನ್ನು ಕಾಪಾಡಲು ಕೃತಕ ಹೂಗಳ ಬಳಕೆಯನ್ನು ನಿಷೇಧಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಹೂವು ರಸ್ತೆಗೆ ಚೆಲ್ಲುವುದು ನೋವಿನ ಸಂಗತಿ
ಕಷ್ಟಪಟ್ಟು ಬೆಳೆದ ಹೂಗಳನ್ನು ರಸ್ತೆಯಲ್ಲಿ ಚೆಲ್ಲುವುದು ನಮಗೆ ತುಂಬಾ ನೋವು ತರುವ ಸಂಗತಿಯಾಗಿದೆ. ಈ ಹೂಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡುವ ಮೂಲಕ ನಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದೇವೆ ಎಂದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ












Click it and Unblock the Notifications