ಇಂದಿರಾನಗರದಲ್ಲಿ ಮರಗಣತಿ ನಡೆಸಿದ ಯುನೈಟೆಡ್ ಬೆಂಗಳೂರು
ಬೆಂಗಳೂರು, ಆಗಸ್ಟ್ 17: ಯುನೈಟೆಡ್ ಬೆಂಗಳೂರು ಸಂಸ್ಥೆಯು ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್ ಬಳಿ ಇರುವ ಮರಗಳ ಗಣತಿ ನಡೆಸಿದೆ. ಅದರ ಜತೆಗೆ ಅಲ್ಲಿರುವುವ ವಿವಿಧ ಅಪರೂಪದ ಮರಗಳ ಕುರಿತು ಮಕ್ಕಳು ಹಾಗೂ ಸ್ಥಳಿಯರಿಗೆ ಮಾಹಿತಿ ನೀಡಿದೆ.
ಇಂದಿರಾನಗರದ ಬಿಡಿಎ ಕಾಂಪ್ಲೆಕ್ಸ್ ಆವರಣ ಪ್ರವೇಶಿಸಿದರೆ ಪುಟ್ಟದೊಂದು ಉದ್ಯಾನ ಪ್ರವೇಶಿಸಿದಂತಾಗುತ್ತದೆ. ಇನ್ನು ಸ್ವಲ್ಪ ದಿನಗಳಲ್ಲಿ ಈ ಚಿತ್ರ ಬದಲಾಗಿದೆ. ಆ ಪ್ರದೇಶದಲ್ಲಿರುವ ಹಸಿರು ಜಾಗದಲ್ಲಿ ವಾಣಿಜ್ಯ ಸಂಕೀರ್ಣವನ್ನು ಸ್ಥಾಪಿಸಲು ಉದ್ದೇಶಿಸಿರುವ ಬಿಡಿಎ ವಿರುದ್ಧ ಯುನೈಟೆಡ್ ಬೆಂಗಳೂರು ಹಾಗೂ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲಿರುವ ಮರಗಳು ಅದರಲ್ಲಿರುವ ವಿಶೇಷತೆ ಕುರಿತು ಶುಕ್ರವಾರ ವೃಕ್ಷ ತಜ್ಞರು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ರೈನ್ ಟ್ರೀ, ಸಿಲ್ವರ್ ಓಕ್, ಅರಳಿ, ಆಲ, ಬಸವನಪಾದ, ಚೆರ್ರಿ, ಸಂಪಿಗೆ, ಸೀಬೆ, ನೆಲ್ಲಿಕಾಯಿ, ನಿಂಬೆ, ಸೀತಾಫಲ ಸೇರಿದಂತೆ ಅನೇಕ ಬಗೆಯ ಅಪರೂಪದ ಸಸ್ಯಗಳನ್ನು ಕಾಣಬಹುದು, ಒಂದೊಮ್ಮೆ ಈ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸಿದ್ದೇ ಆದಲ್ಲಿ ಇದೆಲ್ಲಾ ಮರಗಳ ಮಾರಣಹೋಮವಾಗಲಿದೆ.
ರೈನ್ ಟ್ರೀ,ಗುಲ್ಮೊಹರ್,ಸಿಲ್ವರ್ ಓಕ್,ಜಂಗ್ಲಿ ಜಲೆಬಿ ಮುಂತಾದ ಹಲವಾರು ವಿವಿಧ ವೃಕ್ಷಗಳಿಗೆ ತವರಾಗಿರುವ ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್ ನಲ್ಲಿ @unitedbengaluru @icindngr ಮರಗಳ ಸಮೀಕ್ಷೆ ಆಯೋಜಿಸಿತ್ತು.
— United Bengaluru (@unitedbengaluru) August 17, 2018
ಟ್ರೀ ಡಾಕ್ಟರ್ @vijayvruksha ಅವರು ನಾಗರೀಕರಿಗೆ ಮರಗಣತಿಯ ಪ್ರಾಮುಖ್ಯತೆ ಮತ್ತು ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸಿದರು. pic.twitter.com/FMDy00mtLc
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈ ಆವರಣದಲ್ಲಿನ 30 ವರ್ಷ ಹಳೆಯ ಸಂಕೀರ್ಣದ ಕಟ್ಟಡಗಳನ್ನು ನೆಲಸಮಗೊಳಿಸಿ, ಹೊಸದೊಂದು ವಾಣಿಜ್ಯ ಸಂಕೀರ್ಣವನ್ನು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿರ್ಮಿಸಲು ಯೋಜನೆ ರೂಪಿಸಿದೆ.

ಹಾಗಾಗಿ, ಹುಲುಸಾಗಿ ಬೆಳೆದು ಜನರಿಗೆ ಶುದ್ಧಗಾಳಿ ಹಾಗೂ ನೆರಳನ್ನು ನೀಡುತ್ತ, ಪಕ್ಷಿಗಳಿಗೆ ಆವಾಸ ಸ್ಥಾನವಾಗಿರುವ 171 ಮರಗಳ ಜೀವಕ್ಕೆ ಕುತ್ತು ಒದಗಿದೆ. ಕೆಲವೇ ದಿನಗಳಲ್ಲಿ ಈ ಮರಗಳು ಧರೆಗೆ ಉರುಳಲಿವೆ.
ಕಾಂಪ್ಲೆಕ್ಸ್ನ ಉತ್ತರದಲ್ಲಿ 75 ಮೀಟರ್ ಅಂತರದಲ್ಲಿಯೇ ಬಿನ್ನಮಂಗಲ (ಕದಿರೇನಪಾಳ್ಯ) ಕೆರೆ, 25 ಮೀ ಅಂತರದಲ್ಲಿ ರಾಜಕಾಲುವೆ ಹರಿಯುತ್ತದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶದ ಪ್ರಕಾರ ಕೆರೆ ಮತ್ತು ರಾಜಕಾಲುವೆಯ ಬಫರ್ ಝೋನ್ಗಳಲ್ಲಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವಂತಿಲ್ಲ. ಹೊಸ ಕಾಂಪ್ಲೆಕ್ಸ್ ನಿರ್ಮಾಣ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದಂತಾಗುತ್ತದೆ ಎನ್ನುವುದು ವಾದವಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications