ಇಂದಿರಾನಗರದಲ್ಲಿ ಮರಗಣತಿ ನಡೆಸಿದ ಯುನೈಟೆಡ್ ಬೆಂಗಳೂರು
ಬೆಂಗಳೂರು, ಆಗಸ್ಟ್ 17: ಯುನೈಟೆಡ್ ಬೆಂಗಳೂರು ಸಂಸ್ಥೆಯು ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್ ಬಳಿ ಇರುವ ಮರಗಳ ಗಣತಿ ನಡೆಸಿದೆ. ಅದರ ಜತೆಗೆ ಅಲ್ಲಿರುವುವ ವಿವಿಧ ಅಪರೂಪದ ಮರಗಳ ಕುರಿತು ಮಕ್ಕಳು ಹಾಗೂ ಸ್ಥಳಿಯರಿಗೆ ಮಾಹಿತಿ ನೀಡಿದೆ.
ಇಂದಿರಾನಗರದ ಬಿಡಿಎ ಕಾಂಪ್ಲೆಕ್ಸ್ ಆವರಣ ಪ್ರವೇಶಿಸಿದರೆ ಪುಟ್ಟದೊಂದು ಉದ್ಯಾನ ಪ್ರವೇಶಿಸಿದಂತಾಗುತ್ತದೆ. ಇನ್ನು ಸ್ವಲ್ಪ ದಿನಗಳಲ್ಲಿ ಈ ಚಿತ್ರ ಬದಲಾಗಿದೆ. ಆ ಪ್ರದೇಶದಲ್ಲಿರುವ ಹಸಿರು ಜಾಗದಲ್ಲಿ ವಾಣಿಜ್ಯ ಸಂಕೀರ್ಣವನ್ನು ಸ್ಥಾಪಿಸಲು ಉದ್ದೇಶಿಸಿರುವ ಬಿಡಿಎ ವಿರುದ್ಧ ಯುನೈಟೆಡ್ ಬೆಂಗಳೂರು ಹಾಗೂ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲಿರುವ ಮರಗಳು ಅದರಲ್ಲಿರುವ ವಿಶೇಷತೆ ಕುರಿತು ಶುಕ್ರವಾರ ವೃಕ್ಷ ತಜ್ಞರು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ರೈನ್ ಟ್ರೀ, ಸಿಲ್ವರ್ ಓಕ್, ಅರಳಿ, ಆಲ, ಬಸವನಪಾದ, ಚೆರ್ರಿ, ಸಂಪಿಗೆ, ಸೀಬೆ, ನೆಲ್ಲಿಕಾಯಿ, ನಿಂಬೆ, ಸೀತಾಫಲ ಸೇರಿದಂತೆ ಅನೇಕ ಬಗೆಯ ಅಪರೂಪದ ಸಸ್ಯಗಳನ್ನು ಕಾಣಬಹುದು, ಒಂದೊಮ್ಮೆ ಈ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸಿದ್ದೇ ಆದಲ್ಲಿ ಇದೆಲ್ಲಾ ಮರಗಳ ಮಾರಣಹೋಮವಾಗಲಿದೆ.
ರೈನ್ ಟ್ರೀ,ಗುಲ್ಮೊಹರ್,ಸಿಲ್ವರ್ ಓಕ್,ಜಂಗ್ಲಿ ಜಲೆಬಿ ಮುಂತಾದ ಹಲವಾರು ವಿವಿಧ ವೃಕ್ಷಗಳಿಗೆ ತವರಾಗಿರುವ ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್ ನಲ್ಲಿ @unitedbengaluru @icindngr ಮರಗಳ ಸಮೀಕ್ಷೆ ಆಯೋಜಿಸಿತ್ತು.
— United Bengaluru (@unitedbengaluru) August 17, 2018
ಟ್ರೀ ಡಾಕ್ಟರ್ @vijayvruksha ಅವರು ನಾಗರೀಕರಿಗೆ ಮರಗಣತಿಯ ಪ್ರಾಮುಖ್ಯತೆ ಮತ್ತು ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸಿದರು. pic.twitter.com/FMDy00mtLc
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈ ಆವರಣದಲ್ಲಿನ 30 ವರ್ಷ ಹಳೆಯ ಸಂಕೀರ್ಣದ ಕಟ್ಟಡಗಳನ್ನು ನೆಲಸಮಗೊಳಿಸಿ, ಹೊಸದೊಂದು ವಾಣಿಜ್ಯ ಸಂಕೀರ್ಣವನ್ನು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿರ್ಮಿಸಲು ಯೋಜನೆ ರೂಪಿಸಿದೆ.

ಹಾಗಾಗಿ, ಹುಲುಸಾಗಿ ಬೆಳೆದು ಜನರಿಗೆ ಶುದ್ಧಗಾಳಿ ಹಾಗೂ ನೆರಳನ್ನು ನೀಡುತ್ತ, ಪಕ್ಷಿಗಳಿಗೆ ಆವಾಸ ಸ್ಥಾನವಾಗಿರುವ 171 ಮರಗಳ ಜೀವಕ್ಕೆ ಕುತ್ತು ಒದಗಿದೆ. ಕೆಲವೇ ದಿನಗಳಲ್ಲಿ ಈ ಮರಗಳು ಧರೆಗೆ ಉರುಳಲಿವೆ.
ಕಾಂಪ್ಲೆಕ್ಸ್ನ ಉತ್ತರದಲ್ಲಿ 75 ಮೀಟರ್ ಅಂತರದಲ್ಲಿಯೇ ಬಿನ್ನಮಂಗಲ (ಕದಿರೇನಪಾಳ್ಯ) ಕೆರೆ, 25 ಮೀ ಅಂತರದಲ್ಲಿ ರಾಜಕಾಲುವೆ ಹರಿಯುತ್ತದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶದ ಪ್ರಕಾರ ಕೆರೆ ಮತ್ತು ರಾಜಕಾಲುವೆಯ ಬಫರ್ ಝೋನ್ಗಳಲ್ಲಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವಂತಿಲ್ಲ. ಹೊಸ ಕಾಂಪ್ಲೆಕ್ಸ್ ನಿರ್ಮಾಣ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದಂತಾಗುತ್ತದೆ ಎನ್ನುವುದು ವಾದವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications