ಬೆಂಗಳೂರು ಸಮಸ್ಯೆ ಬಗ್ಗೆ ಸಿಎಂಗೆ ಯುನೈಟೆಡ್ ಬೆಂಗಳೂರು ಪತ್ರ
ಬೆಂಗಳೂರು, ಜೂನ್ 24 : ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರು ನಗರ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಬೆಂಗಳೂರು ಡಿಮಾಂಡ್ಸ್ ಕ್ಯಾಂಪೈನ್ ಎಂಬ ಘೋಷವಾಕ್ಯದಡಿ ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ವೇದಿಕೆ ಸಿದ್ಧವಾಗಿದೆ.
ಬತ್ತುತ್ತಿರುವ ಕೆರೆಗಳು, ಅನಧಿಕೃತ ಒತ್ತುವರಿ, ಎಲ್ಲೆಂದರಲ್ಲಿ ಕಸ ತಂದು ಸುರಿಯುವುದು, ನಂಬಿಕಸ್ತರಲ್ಲದ ನೆರೆಹೊರೆಯವರು ಮುಂತಾದವುಗಳಿಂದಾಗಿ ಬೆಂಗಳೂರು ನಗರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರು ನಗರ ಮತ್ತೆ ಹಿಂದಿನ ರೀತಿಯಲ್ಲಿ ಆಗಬೇಕಾದರೆ ಸರ್ಕಾರ ಮತ್ತು ಜನರು ಒಟ್ಟಾಗಿ ಕೆಲಸ ಮಾಡಬೇಕು. ಯುನೈಟೆಡ್ ಬೆಂಗಳೂರು ಮುಖ್ಯಮಂತ್ರಿ/ಉಪಮುಖ್ಯಮಂತ್ರಿಗಳಿಗೆ ಸರ್ಕಾರ ಮತ್ತು ಜನರ ಸಹಭಾಗಿತ್ವದಲ್ಲಿ ಕೆಲಸ ಮಾಡುವ ಕುರಿತು ಮನವಿ ಸಲ್ಲಿಸಿದೆ.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾಗ ಎಚ್.ಎಸ್.ದೊರೆಸ್ವಾಮಿ ಮತ್ತು ಇತರರು ಬೆಂಗಳೂರು ನಗರದ ಸಮಸ್ಯೆ ಕುರಿತು ಚರ್ಚೆ ನಡೆಸಲು ಕಾಲಾವಕಾಶ ನೀಡುವಂತೆ ಸರ್ಕಾರವನ್ನು ಮನವಿ ಮಾಡಿದರು.
ಎಚ್.ಎಸ್.ದೊರೆಸ್ವಾಮಿ ಅವರು, 'ಎಚ್.ಡಿ.ಕುಮಾರಸ್ವಾಮಿ ಅವರು ಉತ್ತಮ ಕೆಲಸಗಳನ್ನು ಮಾಡುತ್ತಾರೆ ಎಂಬ ನಂಬಿಕೆ ಇದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ವಿಷನ್ ಗ್ರೂಪ್ ಸದಸ್ಯರನ್ನು ಭೇಟಿ ಮಾಡಿ ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು' ಎಂದರು.
'ನಮ್ಮ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಕೆರೆಗಳನ್ನು ಸಂರಕ್ಷಣೆ ಮಾಡಬೇಕಿದೆ. ಬಜೆಟ್ ಮಂಡನೆ ಮಾಡುವ ಮುನ್ನ ಅವರು ನಗರದ ಜನರ ಜೊತೆ ಚರ್ಚೆ ನಡೆಸಲಿ' ಎಂದು ದೊರೆಸ್ವಾಮಿ ಹೇಳಿದರು.
ನಗರದ ಸಮಸ್ಯೆಗಳು
* ವಸತಿ ಪ್ರದೇಶಗಳ ವಾಣಿಜ್ಯೀಕರಣ
* ಮೂಲಸೌಕರ್ಯಗಳು
* ವಾರ್ಡ್ ಕಮಿಟಿ ಮತ್ತು ಆಡಳಿತದಲ್ಲಿ ಜನರ ಸಹಭಾಗಿತ್ವ
* ಬೆಂಗಳೂರಿನಲ್ಲಿ ಕೆಸಿಡಿಸಿಯ ಸಂಪೂರ್ಣ ಕಾರ್ಯವಿಧಾನ
* ಘನತ್ಯಾಜ್ಯ ವಿಲೇವಾರಿ ನಿರ್ವಹಣೆ
* ಮಹಿಳೆ ಮತ್ತು ಮಕ್ಕಳ ಸುರಕ್ಷತೆ
* ರಿಯಲ್ ಎಸ್ಟೇಟ್ ರೆಗ್ಯುಲರ್ ಅಥಾರಿಟಿ
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications