70ಕ್ಕೆ 73 ಅಂಕ ನೀಡಿ ಬೆಂಗಳೂರು ವಿಶ್ವವಿದ್ಯಾಲಯ ಎಡವಟ್ಟು!
ಬೆಂಗಳೂರು, ಜನವರಿ 24: ರಾಜ್ಯ ಅತಿ ದೊಡ್ಡ ವಿಶ್ವವಿದ್ಯಾಲಯ ಖ್ಯಾತಿಗೊಳಗಾಗಿರುವ ಬೆಂಗಳೂರು ವಿಶ್ವವಿದ್ಯಾಲಯವು ಆಗಾಗ ಹಲವು ವಿಷಯಗಳಿಗೆ ಸುದ್ದಿ ಆಗುತ್ತಲೇ ಇರುತ್ತದೆ. ಈಗ ಗರಿಷ್ಠ ಅಂಕಕ್ಕಿಂತ ಮೂರು ಅಂಕ ಹೆಚ್ಚು ನೀಡುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡು ನಗೆಪಾಟಲಿಗೀಡಾಗಿದೆ.
ಕೆಲವೊಮ್ಮೆ ಸಾಧಾರಣ ವಿದ್ಯಾರ್ಥಿಗಳಿಗೆ ಪಾಸ್ ಆದರೆ ಸಾಕು ಅಂತ ಅಂದುಕೊಂಡಿರುತ್ತಾರೆ. ಕನಿಷ್ಠ ಅಂಕ ಪಡೆಯಲು ಕೆಲ ವಿದ್ಯಾರ್ಥಿಗಳು ಹಗಲು ರಾತ್ರಿಯನ್ನದೇ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಓದಿರುತ್ತಾರೆ. ಆದರೆ ಬೆಂಗಳೂರು ವಿಶ್ವವಿದ್ಯಾಲಯ ಗರಿಷ್ಠಕ್ಕಿಂತ ಮೂರು ಅಂಕಗಳನ್ನು ಹೆಚ್ಚು ನೀಡಿದೆ.
ಬೆಂಗಳೂರು ವಿಶ್ವವಿದ್ಯಾಲಯವು 70 ಅಂಕದ ಪರೀಕ್ಷೆಗೆ 73 ಅಂಕ ನೀಡಿ ಮತ್ತೆ ಸುದ್ದಿಯಾಗಿದೆ. ಗರಿಷ್ಠ ಅಂಕಕ್ಕಿಂತ ಹೆಚ್ಚು ಅಂಕ ನೀಡಿದ ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ಬೇಕಾಬಿಟ್ಟಿ ಅಂಕಗಳನ್ನು ಕೊಟ್ಟಿದೆ. ಬಿ.ಕಾಂ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬೇಕಾಬಿಟ್ಟಿ ಅಂಕ ನೀಡಿದೆ ಎಂದು ತಿಳಿದುಬಂದಿದೆ. ಟ್ರಾವೆಲ್ ಏಜೆನ್ಸಿ ಆ್ಯಂಡ್ ಟೂರ್ ಆಪರೇಟರ್ ವಿಷಯ ಪರಿಕ್ಷೆಯಲ್ಲಿ ಈ ಎಡವಟ್ಟು ಬೆಳಕಿಗೆ ಬಂದಿದೆ.

2021ರ ಡಿಸೆಂಬರ್ನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪರೀಕ್ಷೆ ನಡೆಸಿತ್ತು. 70 ಅಂಕ ಥಿಯರಿ ಮತ್ತು 30 ಅಂಕ ಇಂಟರ್ನಲ್ಸ್ ಸೇರಿ ಒಟ್ಟು 100 ಅಂಕ ನಿಗದಿ ಮಾಡಲಾಗಿತ್ತು. ಆದರೆ ಥಿಯರಿಯಲ್ಲಿ ಗರಿಷ್ಠ 70 ಅಂಕಕ್ಕೆ 73 ಅಂಕ ನೀಡಿದೆ. ಈ ಅಂಕಗಳನ್ನು ನೋಡಿ ವಿದ್ಯಾರ್ಥಿಗಳೇ ತಬ್ಬಿಬ್ಬಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಬಹುತೇಕ ಕಾಲೇಜುಗಳಲ್ಲಿ ಇದೇ ಎಡವಟ್ಟಾಗಿರುವುದು ತಿಳಿದುಬಂದಿದೆ.
ಸದ್ಯ ಈ ಅಂಕಗಳನ್ನು ಕಂಡ ವಿದ್ಯಾರ್ಥಿಗಳು ಕಾಲೇಜು ಗಮನಕ್ಕೆ ತಂದಿದ್ದಾರೆ. ಈ ಎಡವಟ್ಟನ್ನು ಬೆಂಗಳೂರ ವಿವಿ ಹೇಗೆ ಸರಿಪಡಿಸುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.
ಕುಲಸಚಿವ ಹುದ್ದೆಗಾಗಿ ಹಗ್ಗಜಗ್ಗಾಟ
ಕುಲಸಚಿವ ಕುರ್ಚಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕುಸ್ತಿ ಶುರುವಾಗಿತ್ತು. ಅಧಿಕಾರ ಸ್ವೀಕಾರಕ್ಕಾಗಿ ಇಬ್ಬರ ನಡುವೆ ಹೈಡ್ರಾಮಾ ನಡೆದಿದೆ. ಬೆಂಗಳೂರು ಕುಲಸಚಿವ ಸ್ಥಾನಕ್ಕೆ ಪ್ರೊ.ಕೊಟ್ರೇಶ್ ಹೊಸದಾಗಿ ನೇಮಕಗೊಂಡಿದ್ದಾರೆ. ನವೆಂಬರ್ 26ರಂದು ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿತ್ತು.
ಆದರೆ ಹಾಲಿ ಕುಲಸಚಿವೆ ಕೆ. ಜ್ಯೋತಿ ಬೇರೆ ಯಾವುದೇ ಇಲಾಖೆಗೆ ವರ್ಗಾವಣೆ ಆಗಿರಲಿಲ್ಲ. ಇದು ತಿಳಿದಿದ್ದರೂ ಹಾಲಿ ಕುಲಸಚಿವೆ ಇಲ್ಲದ ಸಮಯದಲ್ಲಿ ಪ್ರೊ.ಕೊಟ್ರೇಶ್ ಕಡತಗಳಿಗೆ ಸಹಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications