ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಿದ ಉಪೇಂದ್ರ
ಬೆಂಗಳೂರು, ಮಾರ್ಚ್ 30: ಬಹಳ ಭಿನ್ನವಾಗಿ ಚುನಾವಣೆ ಎದುರಿಸಲು ಸಜ್ಜಾಗಿ ಬಂದಿರುವ ಉಪೇಂದ್ರ ಅವರು ತಮ್ಮ ಉತ್ತಮ ಪ್ರಜಾಕೀಯ ಪಕ್ಷದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರಿಚಯ ಮಾಡಿಸಿದರು.
ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸುತ್ತಿರುವ 14 ಅಭ್ಯರ್ಥಿಗಳನ್ನು ಇಂದು ಉಪೇಂದ್ರ ಅವರು ಮಾಧ್ಯಮಗಳಿಗೆ ಪರಿಚಯ ಮಾಡಿಸಿದರು.
ಸಿನಿ ಶೈಲಿಯಲ್ಲಿಯೇ ಹಿನ್ನೆಲೆಯಲ್ಲಿ ಹಾಡೊಂದು ಬರುತ್ತಿದ್ದಾಗ ಅಭ್ಯರ್ಥಿಗಳು ತಾವು ಪ್ರತಿನಿಧಿಸಿಸುತ್ತಿರುವ ಕ್ಷೇತ್ರ ಹಾಗೂ ತಮ್ಮ ಹೆಸರು ಬರೆದಿರುವ ಬೋರ್ಡ್ ಅನ್ನು ಹಿಡಿದು ವೇದಿಕೆಯ ಮಧ್ಯಕ್ಕೆ ಬಂದು ಪರಿಚಯ ಮಾಡಿಕೊಂಡರು. ಪ್ರತಿಯೊಬ್ಬ ಅಭ್ಯರ್ಥಿಯು ಬಂದಾಗಲೂ ಆ ಕ್ಷೇತ್ರದ ಕುರಿತು ಹಾಡು ಹಿನ್ನೆಲೆಯಲ್ಲಿ ಬರುವಂತೆ ವ್ಯವಸ್ಥೆ ಮಾಡಲಾಗಿತ್ತು.

ನಮ್ಮ ಪಕ್ಷ ಅಥವಾ ಅಭ್ಯರ್ಥಿ ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಯೂ ಕೈಚಾಚುವುದಿಲ್ಲ, ನಮ್ಮ ಪಕ್ಷವಾಗಲಿ, ಅಭ್ಯರ್ಥಿಯಾಗಲಿ ಯಾರಿಗೂ ಹಣ ನೀಡುವುದಿಲ್ಲ, ಕ್ಷೇತ್ರಕ್ಕೆ ತಾವು ಮಾಡುವ ಸೇವೆಯನ್ನು ಮಾತ್ರವೇ ಇರಿಸಿಕೊಂಡು ಮತ ಕೇಳುತ್ತೇವೆ ಎಂದು ಉಪೇಂದ್ರ ಈ ಸಮಯದಲ್ಲಿ ಹೇಳಿದರು.
ನಮ್ಮ ಪಕ್ಷದ ನೀತಿ-ನಿಯಮಗಳಿಗೆ ಬದ್ಧರಾಗಿ ಹಾಗೂ ಅವರು ಜನರ ಪರವಾಗಿ ಹೇಗೆ ಕೆಲಸ ಮಾಡುತ್ತಾರೆ ಎಂಬುದನ್ನು ತಿಳಿದು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ತಿಳಿಸಿದರು. ಹಣ ಬಲ, ಜಾತಿಬಲ ಯಾವುದೂ ಇಲ್ಲದೆ ಸಮಾಜಕ್ಕಾಗಿ ದುಡಿಯುವವರೇ ಬೇಕು ಎಂದು ಅವರು ಹೇಳಿದರು.
ಹಾಸನ ಹೆಚ್.ಎಂ ಚಂದ್ರೇಗೌಡ, ಉಡುಪಿ-ಚಿಕ್ಕಮಗಳೂರು ಸುರೇಶ್ ಕುಂದರ್, ಚಿತ್ರದುರ್ಗ ದೇವೇಂದ್ರಪ್ಪ , ತುಮಕೂರು ಛಾಯಾ ರಾಜಾಶಂಕರ್, ಮಂಡ್ಯ ಸಿ.ಪಿ.ಗೌಡ, ದಕ್ಷಿಣ ಕನ್ನಡ ವಿಜಯ ಶ್ರೀನಿವಾಸ್, ಮೈಸೂರು ವಿ.ಆಶಾರಾಣಿ ಸೇರಿದಂತೆ 14 ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, ಪಕ್ಷದ ಚಿಹ್ನೆ ಆಟೋರಿಕ್ಷಾ. ಇದನ್ನು ಬೆಂಬಲಿಸುವಂತೆ ಮನವಿ ಮಾಡಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications