ಲಾಕ್ಡೌನ್: ಯಡಿಯೂರಪ್ಪ ಮುಂದೆ ಎರಡು ಐಡಿಯಾ ಇಟ್ಟ ಉಪೇಂದ್ರ
ಬೆಂಗಳೂರು, ಏಪ್ರಿಲ್ 9: ಕೊರೊನಾ ವೈರಸ್ ಹರಡದಂತೆ ದೇಶದೆಲ್ಲೆಡೆ 21 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ಅವಧಿ ಏಪ್ರಿಲ್ 14ಕ್ಕೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ ಲಾಕ್ಡೌನ್ ವಿಸ್ತರಣೆ ಮಾಡಬೇಕೊ ಬೇಡವೊ ಎಂಬುದನ್ನು ನಾಳೆ(ಏಪ್ರಿಲ್ 10) ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲೂ ಭಾರಿ ಚರ್ಚೆ ನಡೆದಿದೆ. ಉತ್ತಮ ಪ್ರಜಾಕೀಯ ಪಕ್ಷದ ಮುಖಂಡ, ನಟ, ನಿರ್ದೇಶಕ ಉಪೇಂದ್ರ ಅವರು ಕೂಡಾ ಟ್ವೀಟ್ ಮಾಡಿ, ಸಿಎಂ ಯಡಿಯೂರಪ್ಪ ಅವರಿಗೆ ಎರಡು ಸಲಹೆ ನೀಡಿದ್ದಾರೆ.
"ಈ ಲಾಕ್ ಡೌನ್ ಸಂದರ್ಭದಲ್ಲಿ ಜನತೆ ಮನೆಯಿಂದ ಹೊರಗೆ ಬರದೆ ಸಹಕರಿಸಬೇಕು. ಉಲ್ಲಂಘಿಸುವವರ ವಿರುದ್ದ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಬೆಂಗಳೂರಿನಲ್ಲಿ ಲಾಕ್ಡೌನ್ ಉಲ್ಲಂಘಿಸಿದವರ ಸುಮಾರು 10 ಸಾವಿರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜನತೆ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ತೀರ್ಮಾನ ಕೈಗೊಳ್ಳುವುದು ಅನಿವಾರ್ಯವಾಗಲಿದೆ'' ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ಕೊಟ್ಟರು.
@BSYBJP @CMofKarnataka ಮಾನ್ಯ ಮುಖ್ಯಮಂತ್ರಿಯವರಲ್ಲಿ ವಿನಂತಿ... ಎರಡರಲ್ಲಿ ಯಾವುದಾದರೂ ಒಂದನ್ನು ಮಾಡಿ...🙏🙏🙏#cmbsy #cmofkarnataka #coronavirus #indialockdown #upp #request #upendra #covid19 pic.twitter.com/pDr3a5e0uH
— Upendra (@nimmaupendra) April 9, 2020
ಈ ನಡುವೆ ಉಪೇಂದ್ರ ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಯವರಲ್ಲಿ ವಿನಂತಿ... ಎರಡರಲ್ಲಿ ಯಾವುದಾದರೂ ಒಂದನ್ನು ಮಾಡಿ. ಎಂದು ಎರಡು ಸಲಹೆ ನೀಡಿದ್ದಾರೆ.

1. ಶೇಕಡಾ ನೂರಕ್ಕೆ ನೂರು ಲಾಕ್ಡೌನ್
ಸಂಪೂರ್ಣ ಸರ್ಕಾರಿ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದ ಯೋಜನೆಯಿಂದ ಬಳಸಿಕೊಂಡು ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸಿ
* ಹಾಲು, ತರಕಾರಿ, ಧಾನ್ಯಗಳನ್ನು ಒಂದು ಜಾಗದಲ್ಲಿ ಕೊಳ್ಳಲು ಬಿಟ್ಟರೆ ಜನ ಸೇರೇ ಸೇರುತ್ತಾರೆ.
* ಬೇಕರಿ, ದಿನಸಿ ಮತ್ತು ಅಗತ್ಯ ವಸ್ತುಗಳಿಗಾಗಿ ಸಂತೆ, ಅಂಗಡಿ ತೆರೆದರೆ ಅಲ್ಲೂ ಜನ ಸೇರುತ್ತಾರೆ.
2. ಜನರಿಗೆ ಜವಾಬ್ದಾರಿ ಕೊಟ್ಟು ಸಂಪೂರ್ಣವಾಗಿ ಲಾಕ್ಡೌನ್ ತೆರೆಯಿರಿ
ಅಂದರೆ ಅವರವರೇ ಜವಾಬ್ದಾರಿ ತೆಗೆದುಕೊಂಡು ಅಂತರ ಕಾಯ್ದುಕೊಂಡು(ಸೋಷಿಯಲ್ ಡಿಸ್ಟೆನ್ಸಿಂಗ್) ಮಾಸ್ಕ್ ಧರಿಸಿ ಅವರವರ ವ್ಯವಹಾರವನ್ನು ಮುಂದುವರಿಸುವುದು.
'
ಜನರನ್ನು ಜನರು ಎಷ್ಟೇ ಮೂರ್ಖರು ಅಂದುಕೊಂಡರೂ (ಹೀಗೆ ನಾಯಕರು ಮಾಡಿಬಿಟ್ಟಿದ್ದಾರೆ) ಅವರವರ ಪ್ರಾಣಕ್ಕೆ ಅವರ ಮಕ್ಕಳ ಪ್ರಾಣಕ್ಕೆ ಬೆಲೆ ಕೊಟ್ಟೇ ಕೊಡುತ್ತಾರೆ ಎಂಬ ನಂಬಿಕೆಯಿಂದ ಹೇಳುತ್ತಿದ್ದೇನೆ.
* ಲಾಕ್ಡೌನ್ ಮಾಡಿಕೊಂಡ ಜನರನ್ನು ಹಾಲು ರೇಷನ್ ಖರೀದಿಸುವುದಕ್ಕೆ ಬಿಟ್ಟು ಜನ ಗುಂಪು ಸೇರಿದಾಗ ಜನರನ್ನು ಬೈಯುವುದು ಎಷ್ಟು ಸರಿ?
ಇಷ್ಟೆಲ್ಲ ಲಾಕ್ಡೌನ್ ಮಾಡಿನೇ ನಮ್ ದಡ್ಡ ಜನರು ಹೀಗೆ ಇನ್ನು ಲಾಕ್ಡೌನ್ ತೆಗೆದ್ರೆ ರೋಡ್ ರೋಡಲಿ ಹೆಣಗಳು ಬೀಳುತ್ತೆ ಅಂತ ಹೇಳುವವರಿಗೆ(ಹೆದರುವವರಿಗೆ) ಒಂದು ಕಿವಿ ಮಾತು. ಹೀಗೆ ಲಾಕ್ಡೌನ್ ಮುಂದುವರಿಸಿದರೂ ಅದೇ ಪರಿಸ್ಥಿತಿ ಬರಬಹುದು ಯೋಚನೆ ಮಾಡಿ
ಮಲಗಿದ್ರೆ -ಸಾವು|ಕೂತಿದ್ರೆ -ರೋಗ| ನಡಿತಿದ್ರೆ-ಜೀವನ- ನಿಮ್ಮ ಉಪೇಂದ್ರ
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications