ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಮನವಿ
ಬೆಂಗಳೂರು, ಜು. 5 : ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸುವಂತೆ ಮೂಲಭೂತ ಸೌಲಭ್ಯ ಅಭಿವೃದ್ಧಿ, ಹಜ್ ಹಾಗೂ ವಾರ್ತಾ ಸಚಿವ ಆರ್. ರೋಷನ್ ಬೇಗ್ ಅವರು ಕೇಂದ್ರ ರೈಲ್ವೆ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಸಲಹೆ ಮಾಡಿದ್ದಾರೆ.
ರಾಜ್ಯದ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 90 ಲಕ್ಷ ದಾಟಿದ್ದರೂ, ನಗರದಲ್ಲಿ ಕೇವಲ ಎರಡು ರೈಲ್ವೇ ನಿಲ್ದಾಣಗಳಿಂದಲೇ ರೈಲುಗಳ ಸಂಚಾರ ಪ್ರಾರಂಭವಾಗುತ್ತದೆ. ಬೆಂಗಳೂರು ನಗರ ರೈಲ್ವೇ ನಿಲ್ದಾಣದಿಂದ 67 ರೈಲುಗಳು ಹಾಗೂ ಯಶವಂತಪುರ ನಿಲ್ದಾಣದಿಂದ 42 ರೈಲುಗಳು ಪ್ರತಿದಿನ ವಿವಿಧ ಗಮ್ಯಸ್ಥಾನಗಳತ್ತ ಪ್ರಯಾಣ ಬೆಳೆಸುತ್ತವೆ.

ಆದರೆ, ನಗರದ ಜನಸಂಖ್ಯೆಯ ಅವಶ್ಯಕತೆಗಳಿಗೆ ರೈಲುಗಳ ಸಂಖ್ಯೆ ಕಡಿಮೆಯೇ ಆಗಿದೆ. ಹೆಚ್ಚುವರಿ ರೈಲುಗಳನ್ನು ಪ್ರಾರಂಭಿಸಲು ರೈಲ್ವೆ ಸಂಚಾರ ದಟ್ಟಣೆಯ ಕಡಿತಗೊಳಿಸಲು ಬೆಂಗಳೂರಿಗೆ ಪರ್ಯಾಯ ರೈಲ್ವೇ ನಿಲ್ದಾಣದ ಅವಶ್ಯಕತೆ ಇದೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣದಲ್ಲಿ 80 ಎಕರೆ ರೈಲ್ವೇ ಜಮೀನು ಲಭ್ಯವಿರುವ ಹಿನ್ನೆಲೆಯಲ್ಲಿ ಈ ರೈಲ್ವೇ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ವಿಪುಲ ಅವಕಾಶಗಳಿವೆ.
ಈ ರೈಲ್ವೇ ನಿಲ್ದಾಣಕ್ಕೆ ಹೊಂದಿಕೊಂಡಂತೆ ಮೆಟ್ರೋ ರೈಲು ನಿಲ್ದಾಣವೂ ಇರುವುದರಿಂದ ಬೈಯ್ಯಪ್ಪನಹಳ್ಳಿಯಿಂದ ಪೀಣ್ಯಾವರೆಗೆ, ಮುಂಬರುವ ದಿನಗಳಲ್ಲಿ ಕನಕಪುರ ರಸ್ತೆಯಿಂದ ಕೆಂಗೇರಿಯವರೆಗೆ ಮೆಟ್ರೋ ಸಂಪರ್ಕ ಕಲ್ಪಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಈ ಕುರಿತ ಕಾಮಗಾರಿಗಳನ್ನು ಪ್ರಸ್ತುತ ರೈಲ್ವೇ ಬಜೆಟ್ನಲ್ಲಿಯೇ ಅಳವಸುವಂತೆ ರೋಷನ್ ಬೇಗ್ ಅವರು ಕೆಂದ್ರ ರೈಲ್ವೇ ಸಚಿವರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications