'ವಾಲ್ಮೀಕಿ' ಪುಸ್ತಕ ಮಾರಾಟ, ಸಪ್ನಾ ಮಳಿಗೆ ಮೇಲೆ ರೈಡ್
ಬೆಂಗಳೂರು, ನ.7: ಖ್ಯಾತ ವಿದ್ವಾಂಸ ಕೆ.ಎಸ್ ನಾರಾಯಣಾಚಾರ್ಯ ಅವರ "ವಾಲ್ಮೀಕಿ ಯಾರು?" ಎಂಬ ನಿಷೇಧಿತ ಕೃತಿ ಮಾರಾಟ ಮಾಡುತ್ತಿದ್ದ ಸಪ್ನಾ ಪುಸ್ತಕ ಮಳಿಗೆ ಮೇಲೆ ಉಪ್ಪಾರಪೇಟೆ ಪೊಲೀಸರು ದಾಳಿ ನಡೆಸಿ, ಪುಸ್ತಕಗಳನ್ನು ಜಪ್ತಿ ಮಾಡಿದ್ದಾರೆ.
ನಿಷೇಧಿತ ಕೃತಿಯನ್ನು ಮಾರಾಟ ಮಾಡಿದ ಆರೋಪದ ಮೇಲೆ ಗಾಂಧಿನಗರದ ಸಪ್ನಾ ಬುಕ್ ಹೌಸ್ ಮಾಲೀಕರ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಸಪ್ನಾ ಮಳಿಗೆಯ ಇನ್ನಿತರ ಕೇಂದ್ರಗಳ ಮೇಲೂ ದಾಳಿ ನಡೆಯುವ ಸಂಭವವಿದೆ. [ವಾಲ್ಮೀಕಿ ಯಾರು? ಪುಸ್ತಕದ ವಿರುದ್ಧ ಭುಗಿಲೆದ್ದ ಆಕ್ರೋಶ]
ತುಮಕೂರಿನ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿರುವ ಡಾ. ಸುರೇಶ್ ಎಂಬುವರು ಸಪ್ನಾ ಬುಕ್ ಹೌಸ್ ವಿರುದ್ಧ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಉಪ್ಪಾರಪೇಟೆ ಪೊಲೀಸರು ಗುರುವಾರ ದಾಳಿ ನಡೆಸಿ 45 ಪುಸ್ತಕಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ವಿಚಾರಣೆ ಮುಂದುವರೆದಿದೆ ಎಂದು ಪಶ್ಚಿಮವಲಯ ಡಿಸಿಪಿ ಲಬೂ ರಾಮ್ ಹೇಳಿದ್ದಾರೆ.ಸಪ್ನಾ ಬುಕ್ ಹೌಸ್ ವಿರುದ್ಧ ಐಪಿಸಿ ಸೆಕ್ಷನ್ 135(ಎ) ಹಾಗೂ 295 (ಎ) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. [ವಿವಾದಿತ ವಾಲ್ಮೀಕಿ ಯಾರು? ಪುಸ್ತಕ ಮುಟ್ಟುಗೋಲು]

ಸಪ್ನ ಬುಕ್ ಹೌಸ್ ಪ್ರತಿಕ್ರಿಯೆ: ಸಪ್ನ ಬುಕ್ ಹೌಸ್ ಮಾಲೀಕರಾದ ನಿತಿನ್ ಶಾ ಮಾತನಾಡಿ, ನಾವು ಈ ಪುಸ್ತಕದ ಪ್ರಕಾಶಕರಲ್ಲ. ಪುಸ್ತಕದ ಮಾರಾಟಗಾರರಷ್ಟೇ. ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನದಿಂದ ಪುಸ್ತಕ ಹೊರ ಬಂದಿದೆ. ನಾವು ರೀಟೈಲ್ ಮಾರಾಟಗಾರರಾಗಿದ್ದು, ರಾಜ್ಯ ಸರ್ಕಾರದಿಂದಾಗಲಿ, ಪುಸ್ತಕ ಪ್ರಕಾಶಕರಿಂದಾಗಲಿ ವಾಲ್ಮೀಕಿ ಯಾರು? ಕೃತಿ ನಿಷೇಧಗೊಂಡಿರುವ ಬಗ್ಗೆ ಸುತ್ತೋಲೆ ಬಂದಿಲ್ಲ. ಪುಸ್ತಕ ನಿಷೇಧವಾಗಿರುವುದಕ್ಕೆ ಸರಿಯಾದ ದಾಖಲೆಗಳೇ ಇಲ್ಲದಿರುವಾಗ ನಾವು ಮಾಡಿದ ತಪ್ಪೇನು? ನಿಷೇಧವಾದ ಮೇಲೆ ಪ್ರಕಾಶಕರು ನಮಗೆ ಹೇಗೆ ಮಾರಾಟ ಮಾಡಲು ಸಾಧ್ಯ? ನಾವು ಕಾನೂನಿನ ಮೂಲಕ ಹೋರಾಟಕ್ಕೆ ಮುಂದಾಗಿದ್ದೇವೆ ಎಂದಿದ್ದಾರೆ.[ಕೆಎಸ್ಸೆನ್ ಆಚಾರ್ಯರ ಕೃತಿಗೇಕೆ ನಿಷೇಧ?]
ನಿಷೇಧ ಏಕೆ?: ಖ್ಯಾತ ವಿದ್ವಾಂಸ ಕೆ.ಎಸ್ ನಾರಾಯಣಾಚಾರ್ಯ ಅವರ "ವಾಲ್ಮೀಕಿ ಯಾರು?" ಎಂಬ ಕೃತಿಯನ್ನು ಕರ್ನಾಟಕ ಸರ್ಕಾರ ನಿಷೇಧಿಸಲು ಮುಂದಾಗಿದೆ. ಈ ಕೃತಿಯಲ್ಲಿ ನಾರಾಯಣಾಚಾರ್ಯ ಅವರು ಬೇಡ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಆಧಾರವಿಲ್ಲದೆ ವಾಲ್ಮೀಕಿಯನ್ನು ಬ್ರಾಹ್ಮಣ ಎಂದು ಕರೆಯಲಾಗಿದೆ. ವಾಲ್ಮೀಕಿ ಅವರ ಕುಲಕ್ಕೂ ಅವಮಾನ ಮಾಡಲಾಗಿದೆ. ಸರ್ಕಾರ ನಡೆಸುವ ವಾಲ್ಮೀಕಿ ಜಯಂತಿಯನ್ನು ಪ್ರಶ್ನಿಸಿದ್ದಾರೆ ಎಂಬೆಲ್ಲಾ ಕಾರಣವನ್ನು ನೀಡಲಾಗಿದೆ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications