ಮೋದಿ ಅಭಿಮಾನಿಗಳಿಗೆ ಉಪ್ಪಿಟ್ಟು, ಮೈಸೂರ್ ಪಾಕ್!
ಬೆಂಗಳೂರು, ನ. 16 : ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಸಮಾವೇಶಕ್ಕೆ ಆಗಮಿಸುವ ಜನರಿಗೆ ಉಪ್ಪಿಟ್ಟು ಮೈಸೂರು ಪಾಕ್ ಸ್ವಾಗತ ದೊರೆಯಲಿದೆ. ಹೊರ ಜಿಲ್ಲೆಗಳಿಂದ ಆಗಮಿಸುವ ಕಾರ್ಯಕರ್ತರಿಗಾಗಿಯೇ ಬೆಳಗ್ಗೆ 6.30ಕ್ಕೆ ಉಪಹಾರ ವ್ಯವಸ್ಥೆ ಆರಂಭಿಸಲಾಗುತ್ತದೆ.
ಮೋದಿ ಸಮಾವೇಶದಲ್ಲಿ ಭಾಗವಹಿಸುವ ಜನರಿಗೆ ಊಟ, ತಿಂಡಿಗಾಗಿ ಬಿಜೆಪಿ ಸಕಲ ರೀತಿಯ ವ್ಯವಸ್ಥೆ ಕೈಗೊಂಡಿದೆ. ಅರಮನೆ ಮೈದಾನದಲ್ಲಿ 300 ಕೌಂಟರ್ ಗಳನ್ನು ತೆರಯಲಾಗಿದ್ದು, ಒಂದು ಕೌಂಟರ್ ನಲ್ಲಿ ಸುಮಾರು 50,000 ಜನರು ಊಟ ಮಾಡಬಹುದಾಗಿದೆ.

ಮೂರು ಲಕ್ಷಕ್ಕೂ ಅಧಿಕ ಜನರಿಗೆ ಊಟ ಮತ್ತು ತಿಂಡಿ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಳಗ್ಗೆ 6.30ಕ್ಕೆ ಉಪಹಾರ ನೀಡಲು ಆರಂಭಿಸಲಾಗುತ್ತದೆ. ತುಮಕೂರು, ಬೆಂಗಳೂರಿನಿಂದ ಅಡುಗೆ ಮಾಡುವವರು ಆಗಮಿಸಿದ್ದಾರೆ. 1000ಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಊಟ ಮತ್ತು ತಿಂಡಿ ನೀಡಲು ನಿಯೋಜಿಸಲಾಗಿದೆ.
12 ಲಕ್ಷ ನೀರಿನ ಪ್ಯಾಕೆಟ್ ಗಳನ್ನು ಅರಮನೆ ಆವರಣದಲ್ಲಿ ಸಿದ್ದಗೊಳಿಸಲಾಗಿದೆ. ಊಟ ಮತ್ತು ತಿಂಡಿಯನ್ನು ಪರಿಸರ ಸ್ನೇಹಿ ಅಡಕೆ ಹಾಳೆಯ ತಟ್ಟೆಗಳಲ್ಲಿ ನೀಡಲಾಗುತ್ತದೆ. ಸಮಾವೇಶ ಮುಗಿಸಿ ಹೊರ ದೂರದ ಜಿಲ್ಲೆಗಳಿಗೆ ತೆರಳುವ ಕಾರ್ಯಕರ್ತರಿಗಾಗಿ ಪಾರ್ಸೆಲ್ ಕಟ್ಟಿಕೊಡುವ ವ್ಯವಸ್ಥೆಯನ್ನು ಮಾಡಲಾಗಿದೆ. (ನಮೋ ಸಮಾವೇಶಕ್ಕೆ ನಾವು ಸಿದ್ಧ, ನೀವು ಬನ್ನಿ)
ಊಟ ತಿಂಡಿ ಮೆನು : ಬೆಳಗ್ಗೆ 6.30ರಿಂದ ಜನರಿಗೆ ಉಪ್ಪಿಟ್ಟು ಲಭ್ಯವಾಗಲಿದೆ. 10.30ರ ನಂತರ ಪಲಾವ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ಊಟಕ್ಕೆ ಟೊಮೆಟೋ ಬಾತ್ ಮತ್ತು ಮೈಸೂರು ಪಾಕ್ ನೀಡಲಾಗುತ್ತದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications