ಮೋದಿ ಅಭಿಮಾನಿಗಳಿಗೆ ಉಪ್ಪಿಟ್ಟು, ಮೈಸೂರ್ ಪಾಕ್!
ಬೆಂಗಳೂರು, ನ. 16 : ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಸಮಾವೇಶಕ್ಕೆ ಆಗಮಿಸುವ ಜನರಿಗೆ ಉಪ್ಪಿಟ್ಟು ಮೈಸೂರು ಪಾಕ್ ಸ್ವಾಗತ ದೊರೆಯಲಿದೆ. ಹೊರ ಜಿಲ್ಲೆಗಳಿಂದ ಆಗಮಿಸುವ ಕಾರ್ಯಕರ್ತರಿಗಾಗಿಯೇ ಬೆಳಗ್ಗೆ 6.30ಕ್ಕೆ ಉಪಹಾರ ವ್ಯವಸ್ಥೆ ಆರಂಭಿಸಲಾಗುತ್ತದೆ.
ಮೋದಿ ಸಮಾವೇಶದಲ್ಲಿ ಭಾಗವಹಿಸುವ ಜನರಿಗೆ ಊಟ, ತಿಂಡಿಗಾಗಿ ಬಿಜೆಪಿ ಸಕಲ ರೀತಿಯ ವ್ಯವಸ್ಥೆ ಕೈಗೊಂಡಿದೆ. ಅರಮನೆ ಮೈದಾನದಲ್ಲಿ 300 ಕೌಂಟರ್ ಗಳನ್ನು ತೆರಯಲಾಗಿದ್ದು, ಒಂದು ಕೌಂಟರ್ ನಲ್ಲಿ ಸುಮಾರು 50,000 ಜನರು ಊಟ ಮಾಡಬಹುದಾಗಿದೆ.

ಮೂರು ಲಕ್ಷಕ್ಕೂ ಅಧಿಕ ಜನರಿಗೆ ಊಟ ಮತ್ತು ತಿಂಡಿ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಳಗ್ಗೆ 6.30ಕ್ಕೆ ಉಪಹಾರ ನೀಡಲು ಆರಂಭಿಸಲಾಗುತ್ತದೆ. ತುಮಕೂರು, ಬೆಂಗಳೂರಿನಿಂದ ಅಡುಗೆ ಮಾಡುವವರು ಆಗಮಿಸಿದ್ದಾರೆ. 1000ಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಊಟ ಮತ್ತು ತಿಂಡಿ ನೀಡಲು ನಿಯೋಜಿಸಲಾಗಿದೆ.
12 ಲಕ್ಷ ನೀರಿನ ಪ್ಯಾಕೆಟ್ ಗಳನ್ನು ಅರಮನೆ ಆವರಣದಲ್ಲಿ ಸಿದ್ದಗೊಳಿಸಲಾಗಿದೆ. ಊಟ ಮತ್ತು ತಿಂಡಿಯನ್ನು ಪರಿಸರ ಸ್ನೇಹಿ ಅಡಕೆ ಹಾಳೆಯ ತಟ್ಟೆಗಳಲ್ಲಿ ನೀಡಲಾಗುತ್ತದೆ. ಸಮಾವೇಶ ಮುಗಿಸಿ ಹೊರ ದೂರದ ಜಿಲ್ಲೆಗಳಿಗೆ ತೆರಳುವ ಕಾರ್ಯಕರ್ತರಿಗಾಗಿ ಪಾರ್ಸೆಲ್ ಕಟ್ಟಿಕೊಡುವ ವ್ಯವಸ್ಥೆಯನ್ನು ಮಾಡಲಾಗಿದೆ. (ನಮೋ ಸಮಾವೇಶಕ್ಕೆ ನಾವು ಸಿದ್ಧ, ನೀವು ಬನ್ನಿ)
ಊಟ ತಿಂಡಿ ಮೆನು : ಬೆಳಗ್ಗೆ 6.30ರಿಂದ ಜನರಿಗೆ ಉಪ್ಪಿಟ್ಟು ಲಭ್ಯವಾಗಲಿದೆ. 10.30ರ ನಂತರ ಪಲಾವ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ಊಟಕ್ಕೆ ಟೊಮೆಟೋ ಬಾತ್ ಮತ್ತು ಮೈಸೂರು ಪಾಕ್ ನೀಡಲಾಗುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ ಆರೋಪ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರದ ಕಿಡಿ, ಮೋದಿ ಆಕ್ರೋಶ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications