ಮೋದಿಯ ಭಾರತದಲ್ಲಿ ನಾನಿರೋಲ್ಲ : ಅನಂತಮೂರ್ತಿ

ಬೆಂಗಳೂರಿನಲ್ಲಿ ಭಾನುವಾರ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅನಂತಮೂರ್ತಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಪಡೆದರೆ, ಗಾಂಧಿ, ನೆಹರು ಕಂಡಂತಹ ಭಾರತ ಉಳಿಯುವುದಿಲ್ಲ ಎಂದು ಅಭಿಪ್ರಾಯಪಟ್ಟರು ಎಂದು ಈ ಸಂಜೆ ದಿನಪತ್ರಿಕೆ ವರದಿ ಮಾಡಿದೆ.
ಗಾಂಧಿ, ನೆಹರು ತತ್ವಗಳು ಇಲ್ಲದ ದೇಶದಲ್ಲಿ ನಾನು ಬದುಕಲು ಇಚ್ಛೆ ಪಡುವುದಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದರೆ ನಾನು, ಭಾರತದಲ್ಲಿ ಬದುಕಲು ಇಚ್ಛೆ ಪಡುವುದಿಲ್ಲ ಎಂದು ಅನಂತಮೂರ್ತಿ ಅವರು ಹೇಳಿದರು.
ಮಾಧ್ಯಮಗಳು ನರೇಂದ್ರ ಮೋದಿಯ ಒಂದು ಮುಖವನ್ನು ಮಾತ್ರ ಬಿಂಬಿಸಿ ಪ್ರಧಾನಿಯನ್ನಾಗಿ ಮಾಡಲು ಹೊರಟಿವೆ. ಅವರ ಇನ್ನೊಂದು ಮುಖವನ್ನು ಅನಾವರಣ ಮಾಡುತ್ತಿಲ್ಲ. ಇದು ದೊಡ್ಡ ದುರಂತ ಎಂದು ವಿಶ್ಲೇಷಿಸಿದರು.
ನರೇಂದ್ರ ಮೋದಿ ಪ್ರಧಾನಿಯಾದರೆ, ಭಾರತ ಸರ್ವ ಜನಾಂಗದ ಸುಂದರ ತೋಟವಾಗಿ ಉಳಿಯುವುದಿಲ್ಲ. ಮೋದಿ ಯಂತಹವರು ದೇಶವನ್ನು ಮುನ್ನೆಡುಸುವುದಾದದರೆ, ನನ್ನಂಥವರು ಭಾರತದಲ್ಲಿ ಬದುಕಲು ಇಷ್ಟ ಪಡುವುದೂ ಇಲ್ಲ ಎಂದು ಘೋಷಿಸಿದರು.
ಕೆಲವು ದಿನಗಳ ಹಿಂದೆ ಕಾರ್ಪೋರೇಟ್ ಕಂಪನಿಗಳು, ಶ್ರೀಮಂತರು, ಮೇಲ್ಜಾತಿಯವರು ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿ ಮಾಡಬೇಕೆಂದು ಹಂಬಲಿಸುತ್ತಿವೆ ಎಂದು ಅನಂತಮೂರ್ತಿ ದೂರಿದ್ದರು. ಸದ್ಯ ಮೋದಿ 2014ರ ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆಯಾದ ಬಳಿಕ ಅನಂತಮೂರ್ತಿ ಅವರನ್ನು ಟೀಕಿಸಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications