Tulu language: ರಾಜ್ಯದ ಎರಡನೇ ಭಾಷೆಯನ್ನಾಗಿ ಮಾಡಲು ಆಗ್ರಹ
ಬೆಂಗಳೂರು, ಜುಲೈ 19: ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಕರಾವಳಿ ಕನ್ನಡ ಕುರಿತು ಚರ್ಚೆಯಾಗಿದೆ. ಉಡುಪಿ, ಮಂಗಳೂರು ಸೇರಿದಂತೆ ದಕ್ಷಿಣ ಭಾಗದ ಜನರ ಭಾಷೆಯಾದ ತುಳು ಕನ್ನಡವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಮಾಡುವಂತೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರು ಕಲಾಪ ವೇಳೆ ಮನವಿ ಮಾಡಿದರು.
ಕರಾವಳಿ ಕನ್ನಡಿಗರು ಮಾತನಾಡುವುದು ತುಳು ಕನ್ನಡ. ಈ ಭಾಷೆಗೂ ಸೂಕ್ತ ಸ್ಥಾನ ಮಾನ ಸಿಗಬೇಕು ಎಂಬ ಆಶಯ ಇದ್ದೆ ಇದೆ. ಇದೀಗ ಕಲಾಪದಲ್ಲಿ ಸದ್ದು ಮಾಡಿದೆ. ಸದನದಲ್ಲಿ ಶಾಸಕ ಅಶೋಕ್ ರೈ ಈ ವಿಷಯವನ್ನು ತುಳು ಭಾಷೆ ಮಾತನಾಡುವ ಮೂಲಕವೇ ಪ್ರಸ್ತಾಪಿಸಿದರು. ಇದಕ್ಕೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ತುಳು ಭಾಷೆಯಲ್ಲೇ ಪ್ರತಿಕ್ರಿಯೆ ನೀಡಿದ್ದು ವಿಶೇಷ ಎನ್ನಿಸಿತು.

ಬಳಿಕ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ತುಳುವಿನಲ್ಲೇ ಮಾತಾಡಲು ಮುಂದಾದ ವೇಳೆ ನೀವು ಕನ್ನಡದಲ್ಲೇ ಮಾತನಾಡಿ ಎಂದು ಯು.ಟಿ ಖಾದರ್ ಸೂಚಿಸಿದರು. ತುಳು ಭಾಷೆ ಮಾತನಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಸದನದಲ್ಲಿ ಅದನ್ನು ಬರೆದುಕೊಳ್ಳುವವರಿಗೆ ತೊಂದರೆ ಆಗುತ್ತದೆ ಎಂದು ಕಾಂಗ್ರೆಸ್ ಸದಸ್ಯ ಬಸವರಾಜ ರಾಯರೆಡ್ಡಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹೇಳೋದೇನು?
ಈ ವೇಳೆ ಧ್ವನಿ ಎತತಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಅರ್ಥ ಆಗದಿದ್ದರೆ ಉತ್ತರ ಕೊಡುವುದು ಕಷ್ಟವಾಗುತ್ತದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷರುತುಳು ಮಾತನಾಡಿದಾಗ ಎಲ್ಲರೂ ಖುಷಿ ಖುಷಿಯಿಂದ ಇದ್ದರು ಅಂದರೆ, ಈ ಭಾಷೆ ಮಾತನಾಡುವವರು ಎಲ್ಲರನ್ನೂ ಖುಷಿಯಾಗಿರಿಸುತ್ತಾರೆ ಎಂದರು. ಜೊತೆಗೆ ಸಚಿವರಿಗೆ ರಾಜ್ಯದ ಎರಡನೇ ಭಾಷೆ ಕುರಿತು ಸೂಕ್ತವಾಗಿ ಪರಿಗಣಿಸಿ ಎಂದು ಸಲಹೆ ನೀಡಿದರು.
ತುಳು ಭಾಷೆ ಕುರಿತು ಎಲ್ಲಾ ಇಲಾಖೆಗಳ ವರದಿಗಳನ್ನು ತರಿಸಿಕೊಂಡು ಕಾನೂನು ಇಲಾಖೆಯು ತುಳು ಭಾಷೆಯನ್ನು ಎರಡನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಿ ಎಂದು ಸಭಾಧ್ಯಕ್ಷರು ನಿರ್ದೇಶಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ ಅವರು ವರದಿ ಪರಿಶೀಲಿಸಿಸುವುದಾಗಿ ತಿಳಿಸಿದರು ಎಂದು ಟಿವಿ ನೈನ್ ವರದಿ ಮಾಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications