ರಾಗಿ ನವಣೆ ಸಾಮೆಯಂಥ ಸಿರಿಧಾನ್ಯ ಹೇರಳವಾಗಿ ಬಳಸಿ
ಬೆಂಗಳೂರು, ನ. 19 : ಅತಿ ಹೆಚ್ಚು ಪೋಷಕಾಂಶ ಹಾಗೂ ನಾರಿನಾಂಶ ಹೊಂದಿರುವಂತಹ ರಾಗಿ, ನವಣೆ, ಬರಗು, ಹಾರಕ, ಸಾಮೆ, ಸಜ್ಜೆ, ಊದಲು ಮತ್ತು ಕೊರಲೆ ಮುಂತಾದ ಸಿರಿಧಾನ್ಯಗಳನ್ನು ಹೇರಳವಾಗಿ ನಾವು ಸೇವಿಸುವ ಆಹಾರದಲ್ಲಿ ಬಳಸಿದಲ್ಲಿ ಉತ್ತಮ ಆರೋಗ್ಯವನ್ನು ಹೊಂದಬಹುದಾಗಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದ್ದಾರೆ.
ಕೃಷಿ ಇಲಾಖೆ, ಜೈವಿಕ್ ಕೃಷಿ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಶನಿವಾರ 'ಇಂದಿರಾನಗರ ಕ್ಲಬ್ನಲ್ಲಿ' ಸಾವಯವ ಉತ್ಪನ್ನಗಳು ಹಾಗೂ ಸಿರಿಧಾನ್ಯಗಳ ಕುರಿತು ಗ್ರಾಹಕರಿಗೆ ಜಾಗೃತಿ ಮೂಡಿಸುವ 'ಸಾವಯವ ಹಾಗೂ ಸಿರಿಧಾನ್ಯ ಮೇಳ' ಕಾರ್ಯಕ್ರಮ ಅವರು ಉದ್ಫಾಟಿಸಿ ಮಾತನಾಡುತ್ತಿದ್ದರು.
ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗನುಗುಣವಾಗಿ ಸಮತೋಲಿತ ಆಹಾರ ಪದ್ಧತಿಯನ್ನು ನಾವಿಂದು ಅಳವಡಿಸಿಕೊಳ್ಳಬೇಕಾಗಿದ ಅಗತ್ಯವಿದೆ. ಸಿರಿಧಾನ್ಯ ಪದಾರ್ಥಗಳಿಂದ ಮುದ್ದೆ, ರೊಟ್ಟಿಯಂತಹ ಸಾಂಪ್ರಾದಾಯಕ ಆಹಾರ ತಯಾರಿಸಬಹುದು ಎಂದು ಕೃಷ್ಣಬೈರೇಗೌಡರು ವಿವರಿಸಿದರು. [ತುಮಕೂರಿನ ವಿಶೇಷ: ತಟ್ಟೆ ಇಡ್ಲಿ, ಚಿತ್ರಾನ್ನ, ಮುದ್ದೆ, ಚಪಾತಿ ಊಟ...]

ಸಿರಿಧಾನ್ಯಗಳು ಬಡವರ ಆಹಾರವೆಂದು ನಾವಿಂದು ಭಾವಿಸಿದ್ದೇವೆ. ಈ ಹಿಂದೆ ನಮ್ಮ ಹಿರಿಯರು ತಾವು ಬಳಸುತ್ತಿದ್ದ ಆಹಾರದಲ್ಲಿ ಶೇ.60ರಷ್ಟು ಸಿರಿಧಾನ್ಯಗಳನ್ನು ಬಳಸುತ್ತಿದ್ದರು. ಆದರೆ ಇಂದಿನ ನಮ್ಮ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳ ಬಳಕೆ ಶೇ.5ಕ್ಕೂ ಕಡಿಮೆ ಇದೆ. ಇದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಲಿವೆ ಎಂದರು.
ನಮ್ಮ ದೇಶದಲ್ಲಿ ಹೃದ್ರೋಗ, ಸಕ್ಕರೆ ಖಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಮತ್ತೊಂದೆಡೆ ಜನರಿಗೆ ಆರೋಗ್ಯದ ಬಗ್ಗೆಯೂ ಕೂಡಾ ಕಾಳಜಿ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಸ್ವಾಭಾವಿಕವಾಗಿ ಖಾಯಿಲೆ ನಿಯಂತ್ರಿಸಿ ಆರೋಗ್ಯ ಕಾಪಾಡುವ ಸಿರಿಧಾನ್ಯಗಳು ಅತ್ಯುತ್ತಮ ಆಯ್ಕೆ ಎಂದು ಸಚಿವರು ತಿಳಿಸಿದರು. [ಫುಡ್ ವೇಸ್ಟೇಜ್ ಸೆನ್ಸ್, ಮತ್ತ ದೊಡ್ಡಸ್ತಿಕಿ ನಾನ್ ಸೆನ್ಸ್!]
ಹಣ್ಣು ತರಕಾರಿಗಳಿಗೆ ನೀಡಿದಂತೆ ಸಿರಿಧಾನ್ಯಗಳಿಗೆ ಪ್ರಥಮ ಆದ್ಯತೆಯನ್ನು ನಾವು ಇಂದು ನೀಡಬೇಕಿದೆ. ಅಕ್ಕಿ, ಗೋಧಿ, ಸಕ್ಕರೆಗೆ ಸಮನಾಗಿ ಸಿರಿಧಾನ್ಯಗಳನ್ನು ಯಥೇಚ್ಚವಾಗಿ ಉಪಯೋಗಿಸಬಹುದಾಗಿದೆ ಎಂದ ಸಚಿವರು, ಸಿರಿಧಾನ್ಯಗಳು ಮಾನವನಿಗೆ ಮಾತ್ರವಲ್ಲದೆ ಪರಿಸರಕ್ಕೂ ಕೂಡಾ ಪೂರಕವಾಗಿವೆ ಎಂದರು.
ಅಕ್ಕಿ, ಗೋಧಿ, ಕಬ್ಬಿನ ಬೆಳೆಗಳಿಗೆ ಒದಗಿಸುವ ನೀರಿನ ಕಾಲು ಭಾಗದಷ್ಟು ಅಲ್ಪ ಪ್ರಮಾಣದ ನೀರಿನಲ್ಲಿ ಸಿರಿಧಾನ್ಯಗಳನ್ನು ಬೆಳೆಯಬಹುದಾಗಿದ್ದು, ಸಿರಿಧಾನ್ಯ ಬೆಳೆಗಳಿಗೆ ಅತಿ ಕಡಿಮೆ ಔಷಧಿಯನ್ನು ಸಿಂಪಡಿಸಬಹುದಾಗಿದೆ. ಕಡಿಮೆ ರಾಸಾಯನಿಕ ಗೊಬ್ಬರವನ್ನು ಬೆಳೆಗಳಿಗೆ ಒದಗಿಸುವ ಮೂಲಕ ಅತಿ ಕಡಿಮೆ ಖರ್ಚಿನಲ್ಲಿ ಸ್ವಾಭಾವಿಕ ಸಾವಯವ ಪದ್ಧತಿಯಲ್ಲಿ ಸಿರಿಧಾನ್ಯಗಳನ್ನು ಬೆಳೆಯಬಹುದಾಗಿದೆ ಎಂದು ವಿವರಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications