ಕಂಗ್ಲೀಷ್ ಬರೆಯುವುದನ್ನು ನಿಲ್ಲಿಸಲು ಇಲ್ಲಿದೆ ಉಪಾಯ
ಸಾಮಾಜಿಕ ಜಾಲತಾಣಗಳಲ್ಲಿ, ಎಸ್.ಎಮ್.ಎಸ್, ಇ-ಮೇಲ್ ಗಳಲ್ಲಿ ಬರೆಯುವ ಕಂಗ್ಲೀಷ್ (kanglish) ಓದಲು ಹಿಂಸೆಯಾದಾಗ ಅದೆಷ್ಟೇ ಒಳ್ಳೆಯ ಮಾಹಿತಿ ಇದ್ದರೂ, ಅದನ್ನು ಓದದೆ ಮುಂದುವರೆಯುವುದು ನನ್ನ ಅಭ್ಯಾಸ.
ಆದರೆ ಇದರಿಂದ ಭಾಷೆಗೆ ಇಂಟರ್ನೆಟ್ನಲ್ಲಿ ದೊರಕಬೇಕಾದ ಜಾಗವನ್ನೂ ಕಂಗ್ಲೀಷ್ ಬರೆಯುವ ಅನೇಕರು ಕಸಿಯುತ್ತಿರುವುದನ್ನು ಕಂಡಾಗ, ಮತ್ತೆ ಮತ್ತೆ ಕನ್ನಡ ಟೈಪಿಸುವುದು ಹೇಗೆ ಎಂದು ಹೇಳುವುದನ್ನು ಆಗ್ಗಾಗೆ ಮಾಡಿದರೂ, ಅದನ್ನು ಇನ್ನೊಮ್ಮೆ ಬ್ಲಾಗಿಸಲೇ ಬೇಕಿರುವ ಅಗತ್ಯತೆ ಹೆಚ್ಚುತ್ತಿದೆ. ಕನ್ನಡದ ಪದಗಳನ್ನು ಯುನಿಕೋಡ್ನಲ್ಲಿ ಗೂಗಲ್, ಬಿಂಗ್, ಯಾಹೂ ನಂತಹ ಸರ್ಚ್ ಎಂಜಿನ್ಗಳು ನೋಡಲು ಸಾಧ್ಯವಾಗದೆ ಇದ್ದಾಗ, ಈ ಕಂಪೆನಿಗಳು ಆಯಾ ಭಾಷೆಗೆ ಬೇಕಿರುವ ಸೌಲಭ್ಯಗಳನ್ನು ತಮ್ಮ ವೆಬ್ಸೈಟ್ನಿಂದ ಒದಗಿಸಲು ಮುಂದೆ ಬರುವುದಿಲ್ಲ.
ಕನ್ನಡದ ಬಳಕೆ ಇಂಟರ್ನೆಟ್ ನಲ್ಲಿ ಹೆಚ್ಚಾಗಲು ನಾವು ಅದನ್ನು ಇಂಗ್ಲೀಷ್ನಲ್ಲೇ ಟೈಪಿಸಿದರೆ ಸಾಲದು, ಜೊತೆಗೆ ಎಲ್ಲರು ನೋಡಲು ಇಚ್ಚೆ ಪಡುವ, ನೋಡಲು ಸಾಧ್ಯವಾಗಿಸುವ ಯುನಿಕೋಡ್ನಲ್ಲೇ ಟೈಪಿಸಬೇಕು. ಬರಹ, ನುಡಿ ಇತ್ಯಾದಿಗಳ ತಂತ್ರಾಂಶಗಳು ಲಭ್ಯವಿಲ್ಲದ ಪಕ್ಷದಲ್ಲಿ ಗೂಗಲ್ ಕ್ರೋಮ್ನ ವಿಕಿಮೀಡಿಯ ಇನ್ಪುಟ್ ಟೂಲ್ಸ್ ಎನ್ನುವ ಈ ಕೆಳಗಿನ ಚಿತ್ರದಲ್ಲಿರುವ ಎಕ್ಸ್ಟೆನ್ಷನ್ ಬಳಸಿ ಕನ್ನಡ ಅಥವಾ ಇನ್ಯಾವುದೇ ಭಾಷೆಗಳನ್ನು ಟೈಪಿಸಲು ಸಾಧ್ಯವಿದೆ.
ಮೋಝಿಲ್ಲಾ ಫೈರ್ ಫಾಕ್ಸ್ ನಲ್ಲಿ ಟೂಲ್ ಸ್ಥಾಪಿಸಲು ಮೆನು>>ಟೂಲ್>>add ons ಗೆ ಹೋಗಿ ಸರ್ಚ್ ಬಾಕ್ಸ್ ನಲ್ಲಿ Wikimedia Input Tools ಎಂದು ಟೈಪಿಸಿ install ಮಾಡಿಕೊಳ್ಳಿ

ಕನ್ನಡದಲ್ಲಿ ಕಗಪ, ಇನ್ಸ್ಸ್ಕ್ರಿಪ್ಟ್ , ಟ್ರಾನ್ಸ್ಲಿಟರೇಷನ್ (ಲಿಪ್ಯಂತರಣ) ಆಯ್ಕೆಗಳ ಕೀಬೋರ್ಡ್ ಬಳಸಿ ಸುಲಭವಾಗಿ ಎಲ್ಲಿ ಬೇಕೆಂದರಲ್ಲಿ ಕನ್ನಡ ಟೈಪಿಸಬಹುದು. ಎಕ್ಸ್ಟೆನ್ಷನ್ ಅನ್ನು ಇನ್ಸ್ಟಾಲ್ ಮಾಡಿಕೊಂಡ ನಂತರ CTRL + M ಬಳಸಿ ಇದರಲ್ಲಿನ ಇತರೆ ಕೀಬೋರ್ಡ್ ಆಯ್ಕೆಗಳನ್ನು ಬಳಸಿಕೊಳ್ಳಬಹುದು. ಇಂಗ್ಲೀಷ್ ಟೈಪಿಸಲು CTRL + M ಬಳಸಿ ಮತ್ತೆ ನಿಮ್ಮ ಸಿಸ್ಟಂನ ಮೂಲ/ನಿರ್ದಿಷ್ಟ ಕೀಬೋರ್ಡ್ಗೆ ಮರಳಬಹುದು. ಕೆಳಗಿನ ಚಿತ್ರದಲ್ಲಿ ಇದರ ಬಳಕೆಯನ್ನು ಕಾಣಬಹುದು.
ಇದರಲ್ಲಿನ jquery-ime ಅನ್ನೇ ವಿಕಿಪೀಡಿಯದಲ್ಲಿ ನೇರವಾಗಿ ಕನ್ನಡದಲ್ಲಿ ಟೈಪಿಸುವಂತೆ ಮಾಡಲಾಗಿದೆ. ನಮ್ಮ ವಚನ ಸಂಚಯದ ಹುಡುಕುವಿನಲ್ಲೂ ನಿಮಗೆ ಸಿಗುವುದು ಇದೇ. ಬರಹ.ಕಾಮ್ ನ ನಿಘಂಟುವಿನ ಹುಡುಕುವಿನಲ್ಲೂ ಇದನ್ನು ಇತ್ತೀಚೆಗೆ ಬಳಸುತ್ತಿರುವುದನ್ನು ನೀವು ಕಾಣಬಹುದು.[ಕನ್ನಡದ ಸ್ಪೆಲ್ ಚೆಕ್ಕರ್ ಹಾಕ್ಕೊಳ್ಳಿ]
ಆಂಡ್ರಾಯ್ಡ್ ಮೊಬೈಲ್ನಲ್ಲಿ ಕನ್ನಡ ಬಳಸಲು ಇರುವ ಅನೇಕ ವ್ಯವಸ್ಥೆಗಳನ್ನು ಈಗಾಗಲೇ ಇಲ್ಲಿ ಬರೆದಿದ್ದೇನೆ. ವಾರಾಂತ್ಯದಲ್ಲಿ ನಾನು ಮತ್ತು ಎನಿಸಾಫ್ಟ್ ಕನ್ನಡ ಕೀಬೋರ್ಡ್ ಮತ್ತು ಜಸ್ಟ್ ಕನ್ನಡ ಕೀಬೋರ್ಡ್ ಸೃಷ್ಟಿಸಿದ ಶ್ರೀಧರ್ ಆರ್.ಎನ್ ಸೇರಿ ಗೂಗಲ್ ಇಂಡಿಕ್ ಹ್ಯಾಕಥಾನ್ನಲ್ಲಿ ಅಭಿವೃದ್ದಿ ಪಡಿಸಿದ ಮತ್ತೊಂದು ಆಂಡ್ರಾಯ್ಡ್ ಕೀಬೋರ್ಡ್ ಬಗ್ಗೆ ಸಧ್ಯದಲ್ಲೇ ಇಲ್ಲಿ ಮತ್ತೆ ಬರೆಯಲಿದ್ದೇನೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications