ಯುಟಿ ಖಾದರ್ ಗೆ ಒಲಿದ ಚಾಮರಾಜನಗರ ಉಸ್ತುವಾರಿ ಪಟ್ಟ
ಬೆಂಗಳೂರು, ಜನವರಿ 17: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಯು.ಟಿ. ಖಾದರ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಚ್.ಸಿ ಮಹದೇವ ಪ್ರಸಾದ್ ಅವರ ದಿಢೀರ್ ನಿಧನದ ಹಿನ್ನೆಲೆ ಯು, ಟಿ. ಖಾದರ್ ಅವರನ್ನು ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಯು. ಟಿ .ಖಾದರ್ ಪ್ರಸ್ತುತ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದು ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಿಯೂ ಇದ್ದಾರೆ. ಈಗ ಚಾಮರಾಜನಗರದ ಉಸ್ತುವಾರಿಯ ಜವಾಬ್ದಾರಿಯೂ ಅವರ ಹೆಗಲೇರಿದೆ.[ಎಪಿಎಲ್ ಪಡಿತರ ಚೀಟಿಗಾಗಿ ಇಂದಿನಿಂದಲೇ(ಜ.9) ಅರ್ಜಿ ಹಾಕಿ]

ಚಾಮರಾಜನಗರ ಗುಂಡ್ಲುಪೇಟೆ ಶಾಸಕ, ಸಕ್ಕರೆ ಮತ್ತು ಸಹಕಾರಿ ಸಚಿವರಾಗಿದ್ದ ಎಚ್.ಎಸ್. ಮಹದೇವ ಪ್ರಸಾದ್ ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ತಮ್ಮದೇ ಜಿಲ್ಲೆಯಾದ ಕಾರಣ ಅತೀವ ಪ್ರೀತಿಯಿಂದ ಜನರ ಕೆಲಸಗಳನ್ನು ಮಾಡುತ್ತಿದ್ದರು. ಜ.3 ರಂದು ಹೃದಯಾಘಾತದಿಂದಾಗಿ ವಿಧಿವಶರಾದ ಹಿನ್ನೆಲೆ ಉಸ್ತುವಾರಿ ಸಚಿವ ಸ್ಥಾನ ಮತ್ತು ಸಕ್ಕರೆ ಮತ್ತು ಸಹಕಾರ ಸ್ಥಾನ ಮತ್ತೆ ಸಿಎಂ ಸಿದ್ದರಾಮಯ್ಯನವರೇ ವಹಿಸಿಕೊಂಡಿದ್ದರು. ಅದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ಯು.ಟಿ.ಖಾದರ್ ಅವರಿಗೆ ವರ್ಗಾಯಿಸಿದ್ದಾರೆ.
ಯು.ಟಿ. ಖಾದರ್ ಅವರು ಮತ್ತೊಂದು ಉಸ್ತುವಾರಿ ಸಚಿವ ಸ್ಥಾನವನ್ನು ವಹಿಸಿಕೊಂಡಿದ್ದು, ಎಚ್.ಎಸ್. ಮಹದೇವಪ್ರಸಾದ್ ಅವರಂತಯೇ ದಕ್ಷವಾಗಿ ಜನರ ಕೆಲಸಗಳನ್ನು ಮಾಡಬೇಕಿದೆ.
-
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ












Click it and Unblock the Notifications