'ಬಿಜೆಪಿಗೆ ಬಡವರ ಕಾಳಜಿಯಿದ್ದರೆ ದೇಶಾದ್ಯಂತ ಅನ್ನಭಾಗ್ಯ ಕೊಡಲಿ'
ಬೆಂಗಳೂರು, ಜನವರಿ 03 : ಬಿಜೆಪಿಯವರು ಅನ್ನ ಭಾಗ್ಯ ನಮ್ಮದು ಎಂದು ಹೇಳುತ್ತಾರೆ ಆದರೆ ಛತ್ತೀಸ್ ಗಢ ಹಾಗೂ ಮಧ್ಯಪ್ರದೇಶದಲ್ಲಿ ಯಾಕೆ ಜಾರಿ ಮಾಡಿಲ್ಲ ಎಂದು ಆಹಾರ ಸಚಿವ ಯು.ಟಿ. ಖಾದರ್ ಪ್ರಶ್ನಿಸಿದ್ದಾರೆ.
ವಿಕಾಸಸೌಧದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಅನ್ನಭಾಗ್ಯ ನಮ್ಮದು ಎಂದು ಹೇಳುತ್ತಾರೆ, ಅನ್ನಭಾಗ್ಯದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ದೇಶಾದ್ಯಂತ ಜಾರಿ ಮಾಡಲಿ ಎಂದು ಸವಾಲೆಸೆದರು.
ಪಡಿತರ ಚೀಟಿಯ ವಿತರಣೆಯನ್ನು ಆಧುನಿಕ ತಂತ್ರಜ್ಞಾನ ಬಳಸಿ ನೀಡಟುವ ವ್ಯವಸ್ಥೆ ಉತ್ತಮವಾಗಿದೆ.15 ಲಕ್ಷದ 42 ಸಾವಿರ ಜನ ಅರ್ಜಿ ಸಲ್ಲಿಸಿದ್ದಾರೆ. ರೆವಿನ್ಯೂ ಅಧಿಕಾರಿಗಳು ಪರಿಶೀಲನೆ ನಡೆಸಿ ವಿಲೇವಾರಿ ಮಾಡುತ್ತಿದ್ದಾರೆ.14ಲಕ್ಷದ 92ಸಾವಿರ ಅರ್ಜಿಗಳು ಪರಿಶೀಲನೆಯಾಗಿದೆ. 13 ಲಕ್ಷ ಅರ್ಜಿಗಳು ಜಿಲ್ಲೆಗಳಿಂದ ಇಲಾಖೆಗೆ ಪರಿಶೀಲನೆ ನಂತರ ಬಂದಿದೆ ಎಂದು ಮಾಹಿತಿ ನೀಡಿದರು.

11 ಲಕ್ಷದ 71 ಸಾವಿರ ಜನರಿಗೆ ಅಂಚೆ ಮೂಲಕ ಪಡಿತರ ಚೀಟಿ ತಲುಪಿಸಿದ್ದೇವೆ. ಆಹಾರ ಇಲಾಖೆಯ ವೆಬ್ ಸೈಟ್ ಗೆ ಹೋಗಿ ನಿಮ್ಮ ಅರ್ಜಿ ನಂಬರ್ ಹಾಕಿದರೆ ಅರ್ಜಿಯ ಸ್ಥಿತಿಗತಿ ತಿಳಿಯುತ್ತದೆ. ಇಪ್ಪತ್ತಾರು ಸಾವಿರ ಅರ್ಜಿಗಳು ತಿರಸ್ಕೃತವಾಗಿವೆ. ತಿರಸ್ಕೃತವಾದ ಅರ್ಜಿಗಳ ವಿವರಗಳ್ನು ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತೇವೆ. ತಿರಸ್ಕೃತವಾಗಿದ್ದರೂ ಪುನಃ ಅರ್ಜಿ ಸಲ್ಲಿಸಬಹುದು ಎಂದರು.
ಸಿಎಂ ಅನಿಲಭಾಗ್ಯ ಯೋಜನೆ ವಿಚಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರದದ ಜತೆಗಿನ ಸಂಘರ್ಷ ಕೊನೆಯಾಗಿದೆ. ಸಿಎಂ ಅನಿಲ ಭಾಗ್ಯ ಶೀಘ್ರದಲ್ಲೇ ಅನುಷ್ಠಾನ ಮಾಡುತ್ತೇವೆ. ಸಿಲಿಂಡರ್ ಇಲ್ಲದವರ ಪಟ್ಟಿಯ ಮೂಲಕ ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications