ತಪ್ತ ಮುದ್ರಾಧಾರಣೆಗೆ ಸಜ್ಜಾದ ಉತ್ತರಾದಿ ಮಠ
ನಗರದ ಬಸವನಗುಡಿಯ ಉತ್ತರಾದಿ ಮಠದ ರಸ್ತೆಗೆ ಮಧ್ವ ಮತದ ಯತಿವರ್ಯ ಸತ್ಯ ಪ್ರಮೋದ ತೀರ್ಥ ಸ್ವಾಮೀಜಿ ಅವರ ಹೆಸರಿಟ್ಟ ಶುಭ ಸಂದರ್ಭದ ಬೆನ್ನಲ್ಲೇ ತಪ್ತಮುದ್ರಧಾರಣೆ ಮಹೋತ್ಸವ ಸರ್ವಸಿದ್ಧತೆಯಾಗಿದೆ.
ಆಷಾಡಶುಕ್ಲ ಪ್ರಥಮ ಏಕಾದಶಿ.ರಾಜ್ಯದ ನಾನಾ ಭಾಗದಲ್ಲಿರುವ ಮಾಧ್ವ ಮಠಗಳಲ್ಲಿ ತಪ್ತಮುದ್ರಾಧಾರಣೆಯು ವಿವಿಧ ಮಠಾಧೀಶರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಗಳೊಂದಿಗೆ ಆಚರಣೆಯಾಗಲಿದೆ.ಮಹಿಳೆಯರು, ಪುರುಷರು, ಆಬಾಲವೃದ್ಧರು, ಯಾವುದೇ ಜಾತಿಮತದವರು ಹಾಕಿಕೊಳ್ಳಬಹುದಾಗಿದೆ.
ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ. ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಈ ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳು. ಇದು ವೈಷ್ಣವ ಲಾಂಛನವಾಗಿದ್ದು ಮಠಾಧೀಶರು ಮಾತ್ರ ಹಾಕುತ್ತಾರೆ.
ಸತ್ಯ ಪ್ರಮೋದ ತೀರ್ಥ(1948-1997) ರ ಹೆಸರಿನ ರಸ್ತೆಯನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತಕುಮಾರ್ ಅವರು ಭಾನುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮೇಯರ್ ಬಿ.ಎಸ್ ಸತ್ಯನಾರಾಯಣ, ಚಿಕ್ಕಪೇಟೆ ಶಾಸಕ ಅರ್.ವಿ ದೇವರಾಜ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮುಂತಾದವರು ಭಾಗವಹಿಸಿದ್ದರು. ಸಮಾರಂಭದ ಚಿತ್ರಗಳು ಮುಂದಿವೆ ನೋಡಿ...

ಅನೇಕ ಕಡೆಗಳಲ್ಲಿ ಮುದ್ರಾಧಾರಣೆ
ಬೆಂಗಳೂರಿನ ಉತ್ತರಾದಿ ಮಠವಲ್ಲದೆ ಪೇಜಾವರ, ಕಾಣಿಯೂರು, ಉತ್ತರಾದಿ, ಪುತ್ತಿಗೆ, ಸೋದೆ, ಸವಣೂರು, ತುಮಕೂರಿನ ಭೀಮನಕಟ್ಟೆಯಲ್ಲಿ, ಹುಬ್ಬಳ್ಳಿಯಲ್ಲಿ ಉಡುಪಿಯ ಭಂಡಾರಕೇರಿ ಮಠದ ಶ್ರೀಗಳು, ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಠಾಧೀಶರು,ಅದಮಾರು, ಫಲಿಮಾರು ಸೇರಿದಂತೆ ಅನೇಕ ಕಡೆಗಳಲ್ಲಿ ಮುದ್ರಾಧಾರಣೆ ನಡೆಯಲಿದೆ.

ಸತ್ಯಾತ್ಮ ತೀರ್ಥಸ್ವಾಮೀಜಿ ಹಿತವಚನ
ಸಂಸಾರ ಎಂಬ ಭವಸಾಗರದಲ್ಲಿ ಮುಳುಗಿ ಹೋಗಿರುವ ಜನರ ದೇಹಶುದ್ಧಿಗೆ ಏಕಾದಶಿಯಂದು ನೀಡುವ ತಪ್ತಮುದ್ರಾಧಾರಣೆ ಬಹು ಪ್ರಮುಖವಾದುದು. ವೈಷ್ಣವದೀಕ್ಷೆ ಪ್ರತೀಕವಾಗಿರುವ ತಪ್ತಮುದ್ರಾಧಾರಣೆಯಿಂದ ಧರ್ಮದ ನೀತಿಯ ಕರ್ತವ್ಯವನ್ನು ಜೀವಂತವಾಗಿಸಬಹುದು ಎಂದು ಸತ್ಯಾತ್ಮ ತೀರ್ಥಸ್ವಾಮೀಜಿ ಹೇಳಿದ್ದಾರೆ.

ತಪ್ತಮುದ್ರಾಧಾರಣೆಯಿಂದ ಶುದ್ಧಿ
ಬುದ್ಧಿ ಮನಸ್ಸುಗಳಿರಲು ದೇಹಬೇಕು. ಕಾಮ, ಕ್ರೋಧ, ಲೋಭದಿಂದಾಗಿ ಮೈಲಿಗೆಯಾದ ದೇಹವನ್ನು ತಪ್ತಮುದ್ರಾಧಾರಣೆಯಿಂದ ಶುದ್ಧಿಗೊಳಿಸಿದಾಗ ಸಂಸ್ಕಾರ, ಪಾವಿತ್ರ್ಯ ಲಭಿಸುತ್ತದೆ

ಯುಗಪುರುಷ ಸತ್ಯ ಪ್ರಮೋದ ತೀರ್ಥರು
ಯುಗಪುರುಷ ಸತ್ಯ ಪ್ರಮೋದ ತೀರ್ಥರು ಧಾರವಾಡ ಮೂಲದವರಾಗಿದ್ದು ಗುರುರಾಜ ನಾಮಾಂಕಿತರಾಗಿ 1948ರಲ್ಲಿ ಬೆಂಗಳೂರಿನ ಉತ್ತರಾದಿ ಮಠದ ಗುರುಗಳಾದರು. ಮಧ್ವಾಚಾರ್ಯರ ನಂತರ ಗುರುಪೀಠವನ್ನೇರಿದ 41ನೇ ಯತಿವರ್ಯ ಎನಿಸಿದರು. ಸುಂಕೇನಹಳ್ಳಿ ವಾರ್ಡ್ ಗೆ ಸೇರುವ ಉತ್ತರಾದಿಮಠದ ಮುಂದಿನ ರಸ್ತೆಗೆ ಅವರ ಹೆಸರನ್ನು ಇಡಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications