ಕೇರಳ- ಕೊಡಗು ಪ್ರವಾಹ ದುರಂತಕ್ಕೆ ಮಿಡಿದ ಉತ್ತರಾಖಂಡ ಸರ್ಕಾರ!
ಬೆಂಗಳೂರು, ಆಗಸ್ಟ್ 22: ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ನಿಜಕ್ಕೂ ಆಘಾತಕಾರಿ. ನಮ್ಮ ರಾಜ್ಯ ಸರ್ಕಾರದ ವತಿಯಿಂದ 5 ಕೋಟಿ ರೂ. ಪರಿಹಾರ ನೀಡಿದ್ದೇವೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಸರ್ಕಾರದಿಂದ ಈ ಮೊತ್ತದ ಪರಿಹಾರ ನೀಡಿದ್ದೇವೆ. ಉಳಿದಂತೆ ನಮ್ಮ ರಾಜ್ಯದ ನಾಗರಿಕರು ಕೂಡ ಪ್ರತ್ಯೇಕವಾಗಿ ಪರಿಹಾರ ಸಾಮಗ್ರಿ, ಧನ ಸಂಗ್ರಹ ಮಾಡಿದ್ದಾರೆ. ಕೆಲವನ್ನು ಅದಾಗಲೇ ಎರಡೂ ರಾಜ್ಯದ ಸಂತ್ರಸ್ತ ಪೀಡಿತ ಸ್ಥಳಕ್ಕೆ ಕಳಿಸಿಕೊಡಲಾಗಿದೆ. ಇನ್ನೂ ಒಂದಿಷ್ಟು ಪರಿಹಾರ ಸಾಮಗ್ರಿ ಕಳಿಸಿಕೊಡಲಿದ್ದೇವೆ ಎಂದರು.
ಕರ್ನಾಟಕ, ಕೇರಳದಲ್ಲಿ ಆದ ಹಾನಿ ಬಗ್ಗೆ ವಿಶಾದವಿದೆ. ನಮ್ಮಂತೆ ಪ್ರವಾಸೋದ್ಯಮ ನಂಬಿದ್ದ ಭಾಗಗಳಲ್ಲಿ ಪ್ರಕೃತಿ ವಿಕೊಪ ನಡೆದಿದ್ದು ಬೇಸರ ತಂದಿದೆ. ಈ ಭಾಗದಲ್ಲಿ ಜನರ ಹಾಗೂ ಆಧುಕತೆಯ ಅಳವಡಿಕೆಯಿಂದಾದ ಬದಲಾವಣೆಯಿಂದ ಸಮಸ್ಯೆ ಆಗಿದೆ ಎನ್ನುವ ಅರಿವಿಲ್ಲ.

ನಾವು ಪ್ರಕೃತಿಗೆ ವಿರುದ್ಧವಾಗಿ ಎಲ್ಲಿಯೂ ನಡೆದುಕೊಂಡಿಲ್ಲ. ನಮ್ಮಲ್ಲಿ ಅರಣ್ಯ ಪ್ರದೇಶ ಹೆಚ್ಚಾಗುತ್ತಿದೆ. ಶೇ.65 ರಷ್ಟಿದ್ದ ಅರಣ್ಯ ಭೂಮಿ ಈಗ ಶೇ. 71ನ್ನು ದಾಟಿದೆ. ನಾವು ಅರಣ್ಯ ಪೋಷಣೆ ಜತೆಗೆ ಪ್ರವಾಸೋದ್ಯಮ ಸೇರಿದಂತೆ ಇತರೆ ಪ್ರಗತಿ ಮಾಡುತ್ತಿದ್ದೇವೆ ಎಂದರು.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications