ನಿವೇಶನ ಪಡೆದಿದ್ದು ಶಾಸಕನಾಗಿದ್ದರಿಂದ : ಸುದರ್ಶನ್
ಬೆಂಗಳೂರು, ಜ. 15: ನಾನು ಹಲವು ವರ್ಷಗಳ ಕಾಲ ಶಾಸಕನಾಗಿದ್ದೆ. ಇದರ ಆಧಾರದ ಮೇಲೆ ನಿವೇಶನ ಪಡೆದಿದ್ದೇನೆಯೇ ಹೊರತು ಭೂ ಒತ್ತುವರಿ ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಆರ್.ವಿ. ಸುದರ್ಶನ್ ಹೇಳಿದ್ದಾರೆ.
ಬಿಜೆಪಿ ಮಾಡಿರುವ ಭೂ ಒತ್ತುವರಿ ಆರೋಪದ ಕುರಿತು ಸುದರ್ಶನ್ ಗುರುವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿದ್ದಾರೆ.
ನನ್ನ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿದ್ದರಿಂದ ಕುಟುಂಬದವರು ಮುಜುಗುರಪಡುತ್ತಿದ್ದಾರೆ. ನಾನಾಗಲಿ, ನನ್ನ ಕುಟುಂಬದ ಸದಸ್ಯರಾಗಲಿ ಯಾವತ್ತೂ ಭ್ರಷ್ಟಾಚಾರದಿಂದ ಹಣ ಸಂಪಾದಿಸಿಲ್ಲ ಎಂದು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ. [ವಿ.ಆರ್. ಸುದರ್ಶನ್ ವಿರುದ್ಧ ರಾಜ್ಯಪಾಲರಿಗೆ ದೂರು]

ನನ್ನ ವಿರುದ್ಧ ಕುತಂತ್ರ : ನಮಗೆ ಇದ್ದ ಆಸ್ತಿ ಮಾರಿ ಬೆಂಗಳೂರಿನಲ್ಲಿ ಮನೆ ಕಟ್ಟಿಕೊಂಡಿದ್ದೇನೆ. ನನ್ನ ವಿರುದ್ಧ ಬಂದಿರುವ ಆರೋಪದ ಹಿಂದೆ ಕೆಲವು ಅಧಿಕಾರಿಗಳು ಹಾಗೂ ನಮ್ಮ ಸಮುದಾಯದ ಕೆಲವರ ಕುತಂತ್ರವಿದೆ ಎಂದು ಸುದರ್ಶನ್ ಆರೋಪಿಸಿದ್ದಾರೆ. ನನ್ನ ಮಗ ವಿದೇಶದಲ್ಲಿ ತಾನೇ ಸಂಪಾದಿಸಿಕೊಳ್ಳುತ್ತ ಓದುತ್ತಿದ್ದಾನೆ ಎಂದು ಹೇಳಿದ್ದಾರೆ. [ಸರ್ಕಾರ, ರಾಜಭವನದ ನಡುವೆ ಕೆಪಿಎಸ್ ಸಿ ಕಿತ್ತಾಟ]
ವಿ.ಆರ್. ಸುದರ್ಶನ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರಾಗಿ ನೇಮಿಸಿದ್ದನ್ನು ಬಿಜೆಪಿ ವಿರೋಧಿಸಿತ್ತು. ಸುದರ್ಶನ್ ಅವರು ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಸರ್ಕಾರಿ ಭೂಮಿ ಕಬಳಿಸಿ ವಾಣಿಜ್ಯ ಮಳಿಗೆ ನಿರ್ಮಿಸಿದ್ದಾರೆ. ಆದ್ದರಿಂದ ಅವರನ್ನು ಕೆಪಿಎಸ್ಸಿಗೆ ನೇಮಿಸಬಾರದು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಕುರಿತು ವಿವರ ಕೇಳಿದರೆ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications