ಕೆಎಚ್ ಕಲಾಸೌಧದಲ್ಲಿ 'ವಾಲಿ ವಧೆ' ತಪ್ಪದೇ ನೋಡಿ!
ಬೆಂಗಳೂರು, ಏಪ್ರಿಲ್ 07: "ಅಶ್ವಘೋಷ ಥಿಯೇಟರ್ ಟ್ರಸ್ಟ್ " ಅರ್ಪಿಸುವ ಕುವೆಂಪು ರವರ ಶ್ರೀ ರಾಮಾಯಣ ದರ್ಶನಂ ಕಾವ್ಯ ಆಧಾರಿತಗಣೇಶ್ ಎಂ ಉಡುಪಿಯವರ ನಿರ್ದೇಶನ ಶ್ರೀಗಜಾನನ ಯುವಕ ಮಂಡಳಿ. ಶೇಷಗಿರಿ ಹಾನಗಲ್ ತಾ|| ಇವರು ಅಭಿನಯಿಸುವ ನಾಟಕ " ವಾಲಿ ವಧೆ " ಏಪ್ರಿಲ್ 15 ರಂದು ಹನುಮಂತನಗರದ ಕೆಎಸ್ ಕಲಾಸೌಧದಲ್ಲಿ ಪ್ರದರ್ಶನಗೊಳ್ಳಲಿದೆ.
ಕುವೆಂಪುರವರ ಶ್ರೀರಾಮಾಯಣ ದರ್ಶನಂ ಇದರ "ಪೂಣ್ದೇನಗ್ನಿಸಾಕ್ಷಿ" ಮತ್ತು "ನೀಂ ಸತ್ಯವ್ರತ ನೇದಿಟಂ " ಎಂಬೆರಡು ಕಾವ್ಯಭಾಗದಿಂದ ಈ ನಾಟಕವನ್ನು ರಚಿಸಲಾಗಿದೆ. ಇಂಗ್ಲೀಷ್ ಮುಖ್ಯವಾಹಿನಿಗೆ ಹರಿಯುತ್ತಿರುವ ಈ ಕಾಲಘಟ್ಟದಲ್ಲಿ ಕನ್ನಡದ ಘಟ್ಟಕಾವ್ಯ ಒಂದರ ರುಚಿಯನ್ನು ಇಂದಿನ ತಲೆಮಾರಿಗೆ ಮುಟ್ಟಿಸುವುದಕ್ಕಾಗಿ ಮತ್ತು ಸಂಬಂಧಗಳು ಪಲ್ಲಟಗೊಳ್ಳುತ್ತಿರುವ ಸಂದರ್ಭದಲ್ಲಿ ಪ್ರೀತಿಯ ರೂಪಕವಾಗಿ "ವಾಲಿವಧೆ" ಒದಗಿಬಂದಿದೆ.

ವಾಲ್ಮೀಕಿ ರಾಮಾಯಣದ ದುಷ್ಟ ವಾಲಿಯನ್ನು ಕುವೆಂಪು ಇಲ್ಲಿ ಅವನು ಸಾಯುವ ಕೊನೆಯ ಘಟ್ಟದಲ್ಲಿ ಪ್ರೀತಿಗಾಗಿ ಹಂಬಲಿಸಿ ತುಡಿಯುವ, ತನ್ನ ಅಹಂಕಾರಕ್ಕೆ ತಾನೆ ನಾಚಿ ಪಶ್ಚಾತ್ತಾಪ ಪಡುವ ವಿವೇಕದೊಂದಿಗಿನ ಪ್ರೇಮ ಬದುಕನ್ನು ಇಚ್ಛಿಸುವ ಅಣ್ಣ ವಾಲಿಯಾಗಿ ಚಿತ್ರಿಸಿದ್ದಾರೆ.
ಯಕ್ಷಗಾನ, ಕಳರಿ ಮತ್ತು ಮಣಿಪುರಿ ಕಲೆಯ ಕೆಲವು ಪಟ್ಟುಗಳನ್ನು ನಾಟಕದಲ್ಲಿ ಅಳವಡಿಸಲಾಗಿದೆ. ಇದೊಂದು ಸಂಗೀತ ಪ್ರಧಾನ ನಾಟಕ. ವೈಚಾರಿಕನು-ಭಾವಕನೊಳಗೆ, ಭಾವಕನು-ವೈಚಾರಿಕನೊಳಗೆ ಕುಳಿತು ತಳಮಳಿಸುತ್ತಿರುವ ಭಾರತದ ಹಳೆಯ ಕಥೆಯೊಂದು ಕೇವಲ ಆಳದ ಪ್ರೀತಿಗಾಗಿ ಇಲ್ಲಿ ನಾಟಕವಾಗಿದೆ.
ಬೆಳಕು : ರಾಜು ಮಣಿಪಾಲ
ಪ್ರಸಾಧನ : ಪ್ರಶಾಂತ ಉದ್ಯಾವರ, ಭವನ
ನಿರ್ವಹಣೆ : ನಾಗರಾಜ್ ಧಾರೇಶ್ವರ, ಪ್ರಭು ಗುರಪ್ಪನವರ
ಪಾತ್ರಧಾರಿಗಳು: ದೇವಿಪ್ರಸಾದ್ ಎರತೋಡಿ, ಸಿದ್ದು ಕೊಂಡೋಜಿ, ಅಮೀರ ಪಠಾಣ, ಸಿದ್ದಪ್ಪ ರೊಟ್ಟಿ, ಹರೀಶ್ ಗುರಪ್ಪನವರ , ಸಣ್ಣಪ್ಪ ಗೊರವರ , ಜಗದೀಶ ಕಟ್ಟಿಮನಿ, ಪ್ರಜ್ವಲ್ ಹೊಂಬಳ, ರಂಜಿತ ಜಾಧವ, ಅನೀಶ ಉಡುಪಿ
ಸ್ಥಳ : ಕೆ ಹೆಚ್ ಕಲಾಸೌಧ
ಹನುಮಂತನಗರ
ಬಸವನಗುಡಿ, ಬೆಂಗಳೂರು
ಶ್ರೀ ರಾಮಾಂಜನೇಯ ಗುಡ್ಡ ಹತ್ತಿರ
ಏಪ್ರಿಲ್ 15 ಸಂಜೆ 7 ಗಂಟೆಗೆ
ನಾಟಕದ ಟಿಕೆಟ್ ಗಳನ್ನು ಕಲಾಸೌಧದ ಟಿಕೆಟ್ ಕೌಂಟರ್ ಅಥವಾ ಬುಕ್ ಮೈ ಶೋ.ಕಾಂ ನಲ್ಲಿ ಪಡೆಯಬಹುದು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications