ಕಲಾಸೌಧದಲ್ಲಿ ವಾಲಿ ವಧೆ ಮತ್ತೊಮ್ಮೆ ನೋಡಿ ಆನಂದಿಸಿ
ಬೆಂಗಳೂರು, ಆಗಸ್ಟ್ 17: "ಅಶ್ವಘೋಷ ಥಿಯೇಟರ್ ಟ್ರಸ್ಟ್ " ಅರ್ಪಿಸುವ ಕುವೆಂಪು ರವರ ಶ್ರೀ ರಾಮಾಯಣ ದರ್ಶನಂ ಕಾವ್ಯ ಆಧಾರಿತಗಣೇಶ್ ಎಂ ಉಡುಪಿಯವರ ನಿರ್ದೇಶನ ಶ್ರೀಗಜಾನನ ಯುವಕ ಮಂಡಳಿ. ಶೇಷಗಿರಿ ಹಾನಗಲ್ ತಾ|| ಇವರು ಅಭಿನಯಿಸುವ ನಾಟಕ " ವಾಲಿ ವಧೆ " ಆಗಸ್ಟ್ 19ರಂದು ಹನುಮಂತನಗರದ ಕೆಎಸ್ ಕಲಾಸೌಧದಲ್ಲಿ ಪ್ರದರ್ಶನಗೊಳ್ಳಲಿದೆ.
ಜ್ಞಾನಪೀಠ ಪುರಸ್ಕೃತ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಚಂದ್ರಶೇಖರ ಕಂಬಾರರು ವಾಲೀ ವಧೆ ನಾಟಕದ ಬಗ್ಗೆ ಹೇಳಿದ್ದು ಹೀಗೆ.......
"ವಾಲೀ ವಧೆ"... ಇದು ಕೇವಲ ನಾಟಕವಲ್ಲ, ಅದ್ಭುತ ಮತ್ತು ಶ್ರೇಷ್ಠ ರಂಗಪ್ರಯೋಗ. ಇದು ಪವಾಡ ನಾನು ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಅನೇಕ ಅದ್ಭುತ ನಾಟಕಗಳನ್ನು ನೋಡಿದ್ದೇನೆ.

ಆ ಎಲ್ಲ ನಾಟಕಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲಬಹುದಾದ ನಾಟಕವಿದು. ಜಗತ್ತಿನ ಶ್ರೇಷ್ಠ ನಾಟಕಗಳಿಗೆ ಸರಿಸಾಟಿಯಾಗಿ ನಿಲ್ಲಬಹುದಾದ ನಾಟಕವಿದು. ದಯವಿಟ್ಟು ಒಮ್ಮೆ ಈ ನಾಟಕ ನೋಡಿ, ಮತ್ತೆರಡು ಸಲ ನೋಡುವಂತೆ ಈ ಪ್ರಯೋಗ ಮಾಡುತ್ತದೆ. ಕುವೆಂಪು ಮತ್ತು ನಾಟಕದ ನಿರ್ದೇಶಕರಿಗೆ ಅನಂತ ಅನಂತ ಧನ್ಯವಾದಗಳು. ಇಂತಹ ಅದ್ಭುತ ನಾಟಕ ಕೊಟ್ಟಿದ್ದಕ್ಕೆ.
ಎಂದಿದ್ದಾರೆ.
ಕುವೆಂಪುರವರ ಶ್ರೀರಾಮಾಯಣ ದರ್ಶನಂ ಇದರ "ಪೂಣ್ದೇನಗ್ನಿಸಾಕ್ಷಿ" ಮತ್ತು "ನೀಂ ಸತ್ಯವ್ರತ ನೇದಿಟಂ " ಎಂಬೆರಡು ಕಾವ್ಯಭಾಗದಿಂದ ಈ ನಾಟಕವನ್ನು ರಚಿಸಲಾಗಿದೆ. ಇಂಗ್ಲೀಷ್ ಮುಖ್ಯವಾಹಿನಿಗೆ ಹರಿಯುತ್ತಿರುವ ಈ ಕಾಲಘಟ್ಟದಲ್ಲಿ ಕನ್ನಡದ ಘಟ್ಟಕಾವ್ಯ ಒಂದರ ರುಚಿಯನ್ನು ಇಂದಿನ ತಲೆಮಾರಿಗೆ ಮುಟ್ಟಿಸುವುದಕ್ಕಾಗಿ ಮತ್ತು ಸಂಬಂಧಗಳು ಪಲ್ಲಟಗೊಳ್ಳುತ್ತಿರುವ ಸಂದರ್ಭದಲ್ಲಿ ಪ್ರೀತಿಯ ರೂಪಕವಾಗಿ "ವಾಲಿವಧೆ" ಒದಗಿಬಂದಿದೆ.

ದಿನಾಂಕ. ಸಮಯ : ಆಗಸ್ಟ್ 19 ಭಾನುವಾರ ಸಂಜೆ 7 ಗಂಟೆಗೆ
ಪ್ರದರ್ಶನ ಸ್ಥಳ : ಕೆ ಹೆಚ್ ಕಲಾಸೌಧ
ಹನುಮಂತನಗರ
ಟಿಕೇಟ್ : ಬುಕ್ ಮೈ ಶೋ ಮತ್ತುಸ್ನೇಹ ಬುಕ್ ಹೌಸ್, ಶ್ರೀನಗರ, ಕೆ ಹೆಚ್ ಕಲಾಸೌಧ

ವಾಲ್ಮೀಕಿ ರಾಮಾಯಣದ ದುಷ್ಟ ವಾಲಿಯನ್ನು ಕುವೆಂಪು ಇಲ್ಲಿ ಅವನು ಸಾಯುವ ಕೊನೆಯ ಘಟ್ಟದಲ್ಲಿ ಪ್ರೀತಿಗಾಗಿ ಹಂಬಲಿಸಿ ತುಡಿಯುವ, ತನ್ನ ಅಹಂಕಾರಕ್ಕೆ ತಾನೆ ನಾಚಿ ಪಶ್ಚಾತ್ತಾಪ ಪಡುವ ವಿವೇಕದೊಂದಿಗಿನ ಪ್ರೇಮ ಬದುಕನ್ನು ಇಚ್ಛಿಸುವ ಅಣ್ಣ ವಾಲಿಯಾಗಿ ಚಿತ್ರಿಸಿದ್ದಾರೆ. ಯಕ್ಷಗಾನ, ಕಳರಿ ಮತ್ತು ಮಣಿಪುರಿ ಕಲೆಯ ಕೆಲವು ಪಟ್ಟುಗಳನ್ನು ನಾಟಕದಲ್ಲಿ ಅಳವಡಿಸಲಾಗಿದೆ.
ಇದೊಂದು ಸಂಗೀತ ಪ್ರಧಾನ ನಾಟಕ. ವೈಚಾರಿಕನು-ಭಾವಕನೊಳಗೆ, ಭಾವಕನು-ವೈಚಾರಿಕನೊಳಗೆ ಕುಳಿತು ತಳಮಳಿಸುತ್ತಿರುವ ಭಾರತದ ಹಳೆಯ ಕಥೆಯೊಂದು ಕೇವಲ ಆಳದ ಪ್ರೀತಿಗಾಗಿ ಇಲ್ಲಿ ನಾಟಕವಾಗಿದೆ.
ಬೆಳಕು : ರಾಜು ಮಣಿಪಾಲ
ಪ್ರಸಾಧನ : ಪ್ರಶಾಂತ ಉದ್ಯಾವರ,
ಭವನ ನಿರ್ವಹಣೆ : ನಾಗರಾಜ್ ಧಾರೇಶ್ವರ, ಪ್ರಭು ಗುರಪ್ಪನವರ
ಪಾತ್ರಧಾರಿಗಳು: ದೇವಿಪ್ರಸಾದ್ ಎರತೋಡಿ, ಸಿದ್ದು ಕೊಂಡೋಜಿ,
ಅಮೀರ ಪಠಾಣ, ಸಿದ್ದಪ್ಪ ರೊಟ್ಟಿ, ಹರೀಶ್ ಗುರಪ್ಪನವರ , ಸಣ್ಣಪ್ಪ ಗೊರವರ , ಜಗದೀಶ ಕಟ್ಟಿಮನಿ, ಪ್ರಜ್ವಲ್ ಹೊಂಬಳ, ರಂಜಿತ ಜಾಧವ, ಅನೀಶ ಉಡುಪಿ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications