ಬಿಡುಗಡೆ ಒತ್ತಾಯದ ಕಾವಿನಲ್ಲಿ ತತ್ತರಗೊಂಡ ವಿಧಾನ ಸಭೆ
ಬೆಂಗಳೂರು, ಜುಲೈ, 15 : ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ನೇತಾರ, ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರನ್ನು ಪೊಲೀಸರು ಏಕಾಏಕಿ ಬಂಧಿಸಿದ ಪರಿಣಾಮ, ಬಿಡುಗಡೆ ಮಾಡುವಂತೆ ಒತ್ತಾಯಿಸಿ ಹೋರಾಟ ಭುಗಿಲೆದ್ದಿತ್ತು. ಪಾಟೀಲ್ ಅವರನ್ನು ಬಿಡುಗಡೆಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ವಿಧಾನ ಸಭೆಯಲ್ಲಿ ಮಂಗಳವಾರ ತಿಳಿಸಿದರು.
ಫ್ರೀಡಂ ಪಾರ್ಕ್ ನಲ್ಲಿ ಆರ್ಟಿಕಲ್ 371ಜೆ ಯಲ್ಲಿ ಕೆಲವು ದೋಷಗಳಿವೆ. ಅವುಗಳನ್ನು ಸರಿಪಡಿಸಿದ ಬಳಿಕವೇ ಅನುಷ್ಠಾನಗೊಳಿಸಬೇಕು ಎಂದು ಮಾಜಿ ಸಚಿವ ಪಾಟೀಲ್ ಹೋರಾಟ ಕೈಗೊಂಡಿದ್ದರು. ಧರಣಿ ಅವಧಿಯಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲು ಅಪೇಕ್ಷಿಸಿ, ಅನುಮತಿ ಪಡೆಯದೇ ರಾಜಭವನಕ್ಕೆ ತೆರಳುವುದಾಗಿ ಹಠ ಹಿಡಿದರು. ಈ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪಾಟೀಲ್ ಅವರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.[ಹೈಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ]

ಆಳಂದಾ ಕ್ಷೇತ್ರದ ಕೆಜೆಪಿ ಶಾಸಕ ಬಿ. ಆರ್ ಪಾಟೀಲ್ ಸೇರಿದಂತೆ ಹಲವಾರು ಹೈಕಮಾಂಡ್ ಭಾಗದ ಶಾಸಕರು ನಾವು ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ವೈಜನಾಥ್ ಅವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಸದನದಲ್ಲಿ ಪ್ರತಿಭಟನೆಗೆ ಮುಂದಾದರು.
ಇವರೊಂದಿಗೆ ನೈಸ್ ಸಂಸ್ಥೆ ಮುಖ್ಯಸ್ಥ ಮತ್ತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ, ಬಿಜೆಪಿ ದೊಡ್ಡನಗೌಡ ಪಾಟೀಲ್, ಕೆಜೆಪಿಯ ಗುರುಪಾಟೀಲ್, ಜೆಡಿಎಸ್ ನ ಡಾ. ಶಿವರಾಜ ಪಾಟೀಲ್ ಧರಣಿ ಆರಂಭಿಸಿ ಸರ್ಕಾರ ಪ್ರಜಾತಂತ್ರ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಧಿಕ್ಕಾರ ಕೂಗಲು ಮುಂದಾದರು.
ಕೂಡಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಬೇಕೆಂದು ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ 'ಪೊಲೀಸರು ಪಾಟೀಲ್ ಅವರನ್ನು ಬಂಧಿಸಿದ್ದಾರೆಯೇ ವಿನಃ ಅವರ ಮೇಲೆ ಯಾವುದೇ ಮೊಕದ್ದಮೆ ಹೂಡಿರುವುದಿಲ್ಲ. ಅವರನ್ನು ಗೌರವಯುತವಾಗಿಯೇ ನಡೆಸಿಕೊಳ್ಳಲಾಗಿದೆ. ಈಗಾಗಲೇ ಬಿಡುಗಡೆಗೊಳಿಸುವಂತೆ ಆದೇಶ ಕಳುಹಿಸಲಾಗಿದೆ' ಎಂದು ಸಚಿವ ಜಾರ್ಜ್ ಸದನಕ್ಕೆ ಸ್ಪಷ್ಟಪಡಿಸಿದರು.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications