ವಾಜಪೇಯಿ ಜನ್ಮದಿನ: ಪ್ರಾಮಾಣಿಕ ಆಟೋ ಚಾಲಕರಿಗೆ ಡಿಸಿಎಂ ಗೌರವ
ಬೆಂಗಳೂರು, ಡಿಸೆಂಬರ್ 25: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಶುಕ್ರವಾರ ನಗರದ ಮಲ್ಲೇಶ್ವರದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಪ್ರಾಮಾಣಿಕ ಹಾಗೂ ಹಿರಿಯ ಆಟೋ ಚಾಲಕರಿಗೆ ಸನ್ಮಾನಿಸಿ ಖಾಕಿ ಸಮವಸ್ತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಟೋಗಳು ನಮ್ಮ ಬೆಂಗಳೂರಿನ ಜನಜೀವನದ ಅವಿಭಾಜ್ಯ ಅಂಗ. ಒಂದು ದಿನ ಆಟೋಗಳು ರಸ್ತೆಗೆ ಇಳಿಯದಿದ್ದರೆ ಆಗುವ ಕಷ್ಟ ಅಷ್ಟಿಷ್ಟಲ್ಲ. ಅದರಲ್ಲೂ ಚಳಿ, ಮಳೆ, ಬಿಸಿಲೆನ್ನದೆ ರಸ್ತೆಗಳಲ್ಲೇ ಕೆಲಸ ಮಾಡುತ್ತ ಜೀವನ ನಡೆಸುವ ಆಟೋ ಚಾಲಕರ ಸೇವೆ ಶ್ಲಾಘನೀಯ ಎಂದರು.
ಅನೇಕ ವರ್ಷಗಳಿಂದ ಬೆಂಗಳೂರಿನಲ್ಲಿ ಆಟೋ ಚಾಲನೆ ಮಾಡಿಕೊಂಡು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತಿರುವ ಆಟೋ ಚಾಲಕರಿಗೆ ಹೂಮಾಲೆ ಹಾಕಿ ಮೈಸೂರು ಪೇಟ ತೊಡಿಸಿ ಪ್ರಶಂಸನೆಯ ಫಲಕ ನೀಡಿ ಆತ್ಮೀಯವಾಗಿ ಗೌರವಿಸಿದ ಡಿಸಿಎಂ, ಅವರ ಕುಂದುಕೊರತೆಗಳನ್ನು ವಿಚಾರಿಸಿದರು.

ಕೋವಿಡ್ ಬಂದ ಕಾರಣ ಸಾರಿಗೆಗೆ ಸಂಬಂಧಿಸಿದ ಎಲ್ಲ ವ್ಯವಸ್ಥೆಗಳಿಗೂ ಹೊಡೆತ ಬಿದ್ದಿದೆ. ಸರಕಾರ ತನ್ನ ಇತಿಮಿತಿಯೊಳಗೆ ಎಲ್ಲ ನೆರವು ನೀಡಿದೆ.
ಲಾಕ್ಡೌನ್ ಕಾಲದಲ್ಲಿ ಮಲ್ಲೇಶ್ವರ ಕ್ಷೇತ್ರದ ಆಟೋ ಚಾಲಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಎಂದು ಡಿಸಿಎಂ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲ್ಲೇಶ್ವರ ಕ್ಷೇತ್ರದ ಬಿಜೆಪಿ ನಾಯಕರು ಹಾಜರಿದ್ದರು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications