Valentine's Day: ಪ್ರೇಮಿಗಳ ದಿನದಂದು ‘ಪೋಷಕರ ಆರಾಧನಾ ದಿನ’ ಆಚರಿಸಲು ಹಿಂದೂಪರ ಸಂಘಟನೆ ಬೇಡಿಕೆ
ಬೆಂಗಳೂರು ನಗರದಲ್ಲಿ ಪ್ರೇಮಿಗಳ ದಿನ ಆಚರಿಸಲು ಅವಕಾಶ ನೀಡಬಾರದು ಎಂದು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ.
ಬೆಂಗಳೂರು, ಫೆಬ್ರವರಿ. 13: ಫೆ.14 ರಂದು ಪ್ರೇಮಿಗಳ ದಿನದ ಬದಲು 'ಪೋಷಕರ ಆರಾಧನಾ ದಿನ' ಆಚರಿಸುವಂತೆ ಬಲಪಂಥೀಯ ಹಿಂದೂ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.
ಬೆಂಗಳೂರು ನಗರದಲ್ಲಿ ಪ್ರೇಮಿಗಳ ದಿನಾಚರಣೆಯನ್ನು ಯಾವುದೇ ಸಂದರ್ಭದಲ್ಲೂ ಆಚರಿಸಲು ಅವಕಾಶ ನೀಡಬಾರದು ಎಂದು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಪತ್ರದಲ್ಲಿ ಹೊಸ ಬೇಡಿಕೆಯನ್ನು ತಿಳಿಸಿದೆ.
ಪ್ರೇಮಿಗಳ ದಿನವನ್ನು ಹಸು ಅಪ್ಪುಗೆಯ ದಿನವನ್ನಾಗಿ ಆಚರಿಸುವ ನಿರ್ಧಾರ ತೀವ್ರ ವಿವಾದಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಅದನ್ನು ಹಿಂಪಡೆದಿದೆ. ಇದಾದ ಕೂಡಲೇ ಹಿಂದೂ ಜನಜಾಗೃತಿ ಸಮಿತಿ ಹೊಸ ಬೇಡಿಕೆಯನ್ನು ಮುಂದಿಟ್ಟಿದೆ.

"ಪ್ರೇಮಿಗಳ ದಿನದಂದು ಅನೇಕ ಹುಡುಗಿಯರು ಪ್ರೀತಿಯ ಬಲೆಗೆ ಬೀಳುತ್ತಾರೆ. ಪುಲ್ವಾಮಾ ದಾಳಿಯ ವಾರ್ಷಿಕೋತ್ಸವದಂದು ಪ್ರೇಮಿಗಳ ದಿನವನ್ನು ಆಚರಿಸುವುದು ಸರಿಯಲ್ಲ. ಆದ್ದರಿಂದ ಫೆಬ್ರವರಿ 14 ಅನ್ನು ಪೋಷಕರಿಗೆ ಗೌರವ ನೀಡುವ ದಿನವನ್ನಾಗಿ ಆಚರಿಸಬೇಕು'' ಎಂದು ಜನಜಾಗೃತಿ ಸಮಿತಿ ಮುಖಂಡರು ಹೇಳಿದರು.
ಈ ಹಿಂದೆ ಬೆಂಗಳೂರಿನಲ್ಲಿ ಪ್ರೇಮಿಗಳ ದಿನ ಆಚರಿಸುತ್ತಿದ್ದವರ ಮೇಲೆ ಹಲವಾರು ದಾಳಿಗಳು ನಡೆದಿದ್ದವು.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ವಿವಾದಿತ ದೇವಮಾನವ ಅಸಾರಾಂ ಬಾಪು ಕೂಡ ಪ್ರೇಮಿಗಳ ದಿನವನ್ನು ಪೋಷಕರನ್ನು ಪೂಜಿಸುವ ದಿನವನ್ನಾಗಿ ಆಚರಿಸಬೇಕೆಂದು ಒತ್ತಾಯಿಸಿದ್ದಾರೆ. ಫೆಬ್ರವರಿ 14 ರಂದು ಪೋಷಕರನ್ನು ಗೌರವಿಸುವ ದಿನವನ್ನಾಗಿ ಆಚರಿಸಬೇಕೆಂದು ಅಸಾರಾಂ ಬಾಪು ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ.

ಪ್ರೇಮಿಗಳ ದಿನವನ್ನು ಹಸು ಅಪ್ಪುಗೆಯ ದಿನವನ್ನಾಗಿ ಆಚರಿಸುವಂತೆ ಕಳೆದ ತಿಂಗಳು ಪ್ರಾಣಿ ಕಲ್ಯಾಣ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು. ವಿಷಯ ವಿವಾದವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಯಾವುದೇ ಕಾರಣ ನೀಡದೆ ಆದೇಶವನ್ನು ಹಿಂಪಡೆದಿದೆ.
ಇತ್ತ, ಮಂಗಳೂರಿನಲ್ಲಿ ಬಜರಂಗದಳದ ಜಿಲ್ಲಾ ಸಂಚಾಲಕ ನವೀನ್ ಮೂಡುಶೆಡ್ಡೆ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸಿದ್ದು, ಮಂಗಳೂರಿನ ಎಲ್ಲಾ ವ್ಯಾಪಾರ ಸಂಸ್ಥೆಗಳು, ವಿಶೇಷವಾಗಿ ಉಡುಗೊರೆ ಕೇಂದ್ರಗಳು ಆಚರಣೆಗೆ ಬೆಂಬಲ ನೀಡದಂತೆ ಒತ್ತಾಯಿಸಿದ್ದಾರೆ.
ಪ್ರೇಮಿಗಳ ದಿನದ ಅಂಗವಾಗಿ ಉಡುಗೊರೆ ಕೇಂದ್ರಗಳು ವಿಶೇಷ ಉಡುಗೊರೆಗಳ ಮಾರಾಟವನ್ನು ಉತ್ತೇಜಿಸಬಾರದು ಎಂದು ಬಜರಂಗದಳದ ಸಂಚಾಲಕರು ಸೂಚನೆ ನೀಡಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications