Happy Valentind's Day: ವಾಟಾಳ್ ನಾಗರಾಜ್ ಮಾಡಿಸಿದರು ಡಿಫರೆಂಟ್ ಮದುವೆ
ಬೆಂಗಳೂರು, ಫೆಬ್ರವರಿ.14: ಸಂಗಾತಿಗಳ ಸಂಭ್ರಮಕ್ಕೆ ಪ್ರೇಮಿಗಳ ದಿನ ಎಂದರೆ ಒಂದು ರೀತಿ ಹಬ್ಬವೇ ಸರಿ. ದೇಶಾದ್ಯಂತ ಶುಕ್ರವಾರ ಪ್ರೇಮಿಗಳ ದಿನವನ್ನು ಸಂಭ್ರಮದಿಂದ ಪ್ರೇಮಿಗಳು ಆಚರಿಸಿದರು. ಇದೇ ದಿನ ಬೆಂಗಳೂರು ಒಂದು ವಿಶೇಷ ಮದುವೆಗೆ ಸಾಕ್ಷಿಯಾಯಿತು.
ಪ್ರೇಮಿಗಳ ದಿನದಂದೇ ಈ ವಿಶೇಷ ಮದುವೆಯನ್ನು ಮಾಡಿಸಿದ್ದು ಬೇರೆ ಯಾರೂ ಅಲ್ಲ. ಒನ್ ಆಂಡ್ ಒನ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್. ನಗರದ ಕಬ್ಬನ್ ಪಾರ್ಕ್ ನಲ್ಲಿ ಎರಡು ಕುದುರೆಗಳಿಗೆ ವಾಟಾಳ್ ಮುಂದೆ ನಿಂತು ಮದುವೆ ಮಾಡಿಸಿದರು.
ರಾಜ ಮತ್ತು ರಾಣಿ ಎಂಬ ಎರಡು ಕುದುರೆಗಳಿಗೆ ಶಾಸ್ತ್ರೋಕ್ತವಾಗಿ ವಿವಾಹ ಮಹೋತ್ಸವನ್ನು ನಡೆಸಲಾಯಿತು. ಈ ವೇಳೆ ಸಂಗೀತ ನಾದಸ್ವರದ ಮಧ್ಯೆ ರಾಣಿ ಎಂಬ ಹೆಣ್ಣು ಕುದುರೆಗೆ ಮಂಗಳಸೂತ್ರಧಾರಣೆ ಮಾಡಲಾಯಿತು.

ಪ್ರೇಮಿಗಳ ದಿನ ವಿಶೇಷ ಆಚರಣೆ ಮೊದಲಲ್ಲ:
ಪ್ರೇಮಿಗಳ ದಿನದ ಆಚರಣೆಯನ್ನು ಸಾಕಷ್ಟು ಜನರು ವಿರೋಧಿಸುತ್ತಾರೆ. ಆದರೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ಇದಕ್ಕೆ ತದ್ವಿರುದ್ಧ. ಪ್ರೇಮಿಗಳ ಪರ ಮಾತನಾಡುವ ವಾಟಾಳ್ ನಾಗರಾಜ್ ಇಂಥ ವಿಭಿನ್ನ ಹೋರಾಟಗಳಿಂದಲೇ ಹೆಚ್ಚು ಪ್ರಸಿದ್ಧಿ ಪಡೆದವರು. ಕಳೆದ ವರ್ಷ ಎರಡು ಕುರಿಗಳಿಗೆ ವಿವಾಹ ನಡೆಸುವ ಮೂಲಕ ವಾಟಾಳ್ ನಾಗರಾಜ್ ಗಮನ ಸೆಳೆದಿದ್ದರು. ಇನ್ನು, ಪ್ರೇಮಿಗಳಿಗೆ ಕೇಂದ್ರ ಸರ್ಕಾರವು 1 ಲಕ್ಷ ರೂಪಾಯಿ ಮತ್ತು ರಾಜ್ಯ ಸರ್ಕಾರದಿಂದ 50 ಸಾವಿರ ರೂಪಾಯಿ ನೀಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದು, ಸಾಕಷ್ಟು ಸುದ್ದಿಯಾಗಿತ್ತು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications