ಶ್ರೀ ರಾಮಾಯಣ ದರ್ಶನಂ ಆಧಾರಿತ ನಾಟಕ 'ವಾಲಿವಧೆ' ಪ್ರದರ್ಶನ
ಬೆಂಗಳೂರು, ಜನವರಿ 22 : ಅವಿರತ ಪ್ರತಿಷ್ಠಾನವು ರಾಷ್ಟ್ರಕವಿ ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಕೃತಿ ಆಧಾರಿತ ವಾಲಿವಧೆ ನಾಟಕವನ್ನು ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಕೆಇಎ ಪ್ರಭಾತ್ ರಂಗಮಂದಿರದಲ್ಲಿ ಫೆಬ್ರವರಿ 3 ರಂದು ಆಯೋಜಿಸಿದೆ.
ಈ ಶತಮಾನದ ಮೇರು ಕೃತಿಗಳಲ್ಲಿ ಒಂದಾದ ರಾಷ್ಟ್ರಕವಿ ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಕೃತಿಯು ರಾಮಾಯಣಕ್ಕೆ ಹೊಸ ನೋಟ ಹಾಗೂ ಹೊಸ ಭಾಷ್ಯವೊಂದನ್ನು ಕಟ್ಟಿಕೊಟ್ಟಿದ್ದಲ್ಲದೆ ಕನ್ನಡಕ್ಕೆ ಮೊದಲ ಜ್ಞಾನಪೀಠವನ್ನು ತಂದುಕೊಟ್ಟಿತು. ಈ ಕೃತಿಗೆ ಗೌರವಾರ್ಪಣವಾಗಿ ಅವಿರಿತ ಪ್ರತಿಷ್ಠಾನವು ಶ್ರೀ ರಾಮಾಯಣ ದರ್ಶನಂ ಪ್ರಸಂಗವೊಂದರ ಮನರಂಜನೀಯ ದೃಶ್ಯ ರೂಪಕವಾದ ವಾಲಿವಧೆ ನಾಟಕವನ್ನು ಆಯೋಜಿಸಿದೆ.
ನಾಟಕವು ಫೆಬ್ರವರಿ 3 ರಂದು ಬೆಳಗ್ಗೆ 11 ಗಂಟೆಯಿಂದ 12.30 ಹಾಗೂ ಸಂಜೆ 5 ರಿಂದ 6.30 ರವರೆಗೆ ನಡೆಯಲಿದೆ. ಟಿಕೇಟ್ ದರ 200 ರೂ. ಈ ನಾಟಕವು ಮಕ್ಕಳನ್ನು ತಲ್ಲೀನರಾಗಿಸಿ, ಪ್ರೌಢರನ್ನು ಭಾವುಕವಾಗಿಸುವ ಅತ್ಯಂತ ವಿಶಿಷ್ಟ ಹಾಗೂ ನವಿರಾದ ನಾಟಕವಾಗಿದೆ. ಶೇಷಗಿರಿ ಹಳ್ಳಿಯ ರೈತಾಪಿ ಜನ ತಾವೇ ಕಟ್ಟಿಕೊಂಡ ಶ್ರೀ ಗಜಾನನ ಯುವಕ ಮಂಡಲಿ ಮೂಲಕ, ಎಂ. ಗಣೇಶ ಅವರ ನಿದೇರ್ಶನದಲ್ಲಿ ನಾಟಕವನ್ನು ಪ್ರಯೋಗಿಸಲಾಗುತ್ತಿದೆ.
ಏನು-
ವಾಲಿವಧೆ
ನಾಟಕ
ಎಲ್ಲಿ-ಕೆಇಎ
ಪ್ರಭಾತ್
ರಂಗಮಂದಿರ,
ಬಸವೇಶ್ವರನಗರ
ಯಾವಾಗ-ಫೆಬ್ರವರಿ
3
ಸಮಯ-ಬೆಳಗ್ಗೆ
11
ಗಂಟೆಯಿಂದ
12.30
ಹಾಗೂ
ಸಂಜೆ
5
ರಿಂದ
6.30