ವಾಲ್ಮೀಕಿ ಜಯಂತಿ: ಸಚಿವ ಶ್ರೀರಾಮುಲು ಎದುರು ಮೀಸಲಾತಿಗಾಗಿ ಘೋಷಣೆ!
ಬೆಂಗಳೂರು, ಅ. 31: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಎದುರೇ ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ. ಬೆಂಗಳೂರಿನ ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಚಿವ ಶ್ರೀರಾಮುಲು ಹಾಗೂ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು.
Recommended Video
ಇದೇ ಸಂದರ್ಭದಲ್ಲಿ ವಾಲ್ಮೀಕಿ ಪ್ರತಿಮೆಯ ಎದುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವಾಲ್ಮೀಕಿ ಜ್ಯೋತಿಯನ್ನು ಸಚಿವ ಶ್ರೀರಾಮುಲು ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶ್ರೀರಾಮುಲು ಸಮ್ಮುಖದಲ್ಲೇ ಮೀಸಲಾತಿಗಾಗಿ ಹೋರಾಟದ ಘೋಷಣೆ ಕೇಳಿ ಬಂದಿತು. ನಂತರ ಮಾತನಾಡಿದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು, ವಾಲ್ಮೀಕಿ ನಾಯಕ ಜನಾಂಗಕ್ಕೆ ಶೇಕಡಾ 7.5 ಒಳಮೀಸಲಾತಿ ಕಲ್ಪಿಸಬೇಕೆಂಬ ಒತ್ತಾಯವನ್ನು ಪ್ರಸ್ತಾಪಿಸಿದರು.

ಪ್ರಸಕ್ತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ನವೆಂಬರ್ 10 ರಿಂದ ಡಿಸೆಂಬರ್ 10ರೊಳಗಾಗಿ ಮೀಸಲು ನಿಗದಿ ಮಾಡಿ ಆದೇಶ ಹೊರಡಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ನಮಗೆ ಶ್ರೀರಾಮುಲು ಅವರ ಬಗ್ಗೆ ವಿಶ್ವಾಸವಿದೆ. ಅಲ್ಲಿಯವರೆಗೆ ಕಾಯುತ್ತೇವೆ ಎಂದು ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.

ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಸರ್ಕಾರವು ಕೊಟ್ಟ ಮಾತಿನಂತೆ ಭರವಸೆ ಉಳಿಸಿಕೊಳ್ಳುತ್ತೇವೆ. ನೀತಿ ಸಂಹಿತೆ ಕಾರಣ ಈಗ ಘೋಷಣೆ ಮಾಡುವಂತಿಲ್ಲ ಎಂದು ಇದೇ ಸಮದರ್ಭದಲ್ಲಿ ಶ್ರೀರಾಮುಲು ಅವರು ಭರವಸೆ ನೀಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications