ವಾಲ್ಮೀಕಿ ಜಯಂತಿ: ಸಚಿವ ಶ್ರೀರಾಮುಲು ಎದುರು ಮೀಸಲಾತಿಗಾಗಿ ಘೋಷಣೆ!
ಬೆಂಗಳೂರು, ಅ. 31: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಎದುರೇ ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ. ಬೆಂಗಳೂರಿನ ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಚಿವ ಶ್ರೀರಾಮುಲು ಹಾಗೂ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು.
Recommended Video
ಇದೇ ಸಂದರ್ಭದಲ್ಲಿ ವಾಲ್ಮೀಕಿ ಪ್ರತಿಮೆಯ ಎದುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವಾಲ್ಮೀಕಿ ಜ್ಯೋತಿಯನ್ನು ಸಚಿವ ಶ್ರೀರಾಮುಲು ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶ್ರೀರಾಮುಲು ಸಮ್ಮುಖದಲ್ಲೇ ಮೀಸಲಾತಿಗಾಗಿ ಹೋರಾಟದ ಘೋಷಣೆ ಕೇಳಿ ಬಂದಿತು. ನಂತರ ಮಾತನಾಡಿದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು, ವಾಲ್ಮೀಕಿ ನಾಯಕ ಜನಾಂಗಕ್ಕೆ ಶೇಕಡಾ 7.5 ಒಳಮೀಸಲಾತಿ ಕಲ್ಪಿಸಬೇಕೆಂಬ ಒತ್ತಾಯವನ್ನು ಪ್ರಸ್ತಾಪಿಸಿದರು.
ಪ್ರಸಕ್ತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ನವೆಂಬರ್ 10 ರಿಂದ ಡಿಸೆಂಬರ್ 10ರೊಳಗಾಗಿ ಮೀಸಲು ನಿಗದಿ ಮಾಡಿ ಆದೇಶ ಹೊರಡಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ನಮಗೆ ಶ್ರೀರಾಮುಲು ಅವರ ಬಗ್ಗೆ ವಿಶ್ವಾಸವಿದೆ. ಅಲ್ಲಿಯವರೆಗೆ ಕಾಯುತ್ತೇವೆ ಎಂದು ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.
ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಸರ್ಕಾರವು ಕೊಟ್ಟ ಮಾತಿನಂತೆ ಭರವಸೆ ಉಳಿಸಿಕೊಳ್ಳುತ್ತೇವೆ. ನೀತಿ ಸಂಹಿತೆ ಕಾರಣ ಈಗ ಘೋಷಣೆ ಮಾಡುವಂತಿಲ್ಲ ಎಂದು ಇದೇ ಸಮದರ್ಭದಲ್ಲಿ ಶ್ರೀರಾಮುಲು ಅವರು ಭರವಸೆ ನೀಡಿದರು.