Get Updates
Get notified of breaking news, exclusive insights, and must-see stories!

ಹಗರಣದ ಹಣ ದೆಹಲಿ ತಲುಪಿದ್ದರ ರೂಟ್ ಮ್ಯಾಪ್ ಕೊಟ್ಟ ಆರ್‌.ಅಶೋಕ್: 4 ಹಂತಗಳಲ್ಲಿ ಹೋರಾಟ

ಬೆಂಗಳೂರು, ಜೂನ್ 06: ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಕಾರಣವಾದ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಡಿ ಮಂತ್ರಿ ಮಂಡಲವೇ ಭಾಗಿಯಾಗಿದೆ. ಸಚಿವ ನಾಗೇಂದ್ರ ಜೊತೆಗೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ ಸಜ್ಜಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಾಗೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ಗುರುವಾರ ದೂರು ಸಲ್ಲಿಸಿದರು.

Valmiki Corporation Scam Money how To reach Delhi R Ashok Given Route Map

ಈ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವರು ರಾಜೀನಾಮೆ ಕೊಟ್ಟಿದ್ದು, ಮುಖ್ಯಮಂತ್ರಿ ಸಹ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಚಿವ ಬಿ.ನಾಗೇಂದ್ರ ಅವರು ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇದಕ್ಕೂ ದೊಡ್ಡ ಆರೋಪಿಗಳು ಇದರ ಹಿಂದೆ ಇದ್ದಾರೆ. ಈ ಎಲ್ಲ ಸತ್ಯ ಹೊರಬರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು. ಸೂಕ್ತ ತನಿಖೆ ನಡೆಸಿ ದೊಡ್ಡ ಆರೋಪಿಗಳನ್ನು ಬಯಲಿಗೆಳೆಯಬೇಕು ಎಂದರು.

Valmiki Corporation Scam Money how To reach Delhi R Ashok Given Route Map

ಹಣ ದೆಹಲಿ ತಲುಪಿದ್ದು ಹೇಗೆ?

ಅಕ್ರಮದ ಹಣವನ್ನು ಸಚಿವರೊಬ್ಬರೇ ನುಂಗಿಲ್ಲ. ಇದರಲ್ಲಿ ಇಡೀ ಸಚಿವ ಸಂಪುಟ ಶಾಮೀಲಾಗಿದೆ. ಬೆಂಗಳೂರಿನಿಂದ ಮೊದಲು ಟಕಾಟಕ್ ಹೈದರಾಬಾದ್‌ ತಲುಪಿದೆ. ಅಲ್ಲಿಂದ ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಹೈಕಮಾಂಡ್‌ಗೆ ತಲುಪಿದೆ ಎಂದು ಅವರು ಹಣ ತಲುಪಿದ್ದರ ರೂಟ್ ಮ್ಯಾಪ್ ಮಾಹಿತಿ ನೀಡಿದರು.

ಎಲ್ಲಿ ಹಗರಣವು ತಮ್ಮ ಬುಡಕ್ಕೆ ಬಂದು ಬಿಡುತ್ತದೆ ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆ ಮಾಡಿಸಲು ನಿರಾಕರಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಕೂಡ ಇದಕ್ಕೆ ಉತ್ತರ ನೀಡಬೇಕು ಎಂದು ಗುಡುಗಿದರು.

14 ಸಲ ಬಜೆಟ್ ಮಂಡಿಸಿದವರ ಮುಂದೆಯೇ ಹಗರಣ

ಬಡವರಿಗೆ ಸೇರಬೇಕಾಗಿದ್ದ ಹಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಬಿಗೆ ಹೋಗಿದೆ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ. 14 ಬಾರಿ ಬಜೆಟ್ ಮಂಡಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಈಗ ಅವರ ಕಣ್ಣಿನಡಿಯಲ್ಲೇ ಹಗರಣ ನಡೆದಿದೆ. ಒಂದು ವರ್ಷ ಕಾಂಗ್ರೆಸ್‌ ಸರ್ಕಾರ ಲೂಟಿ ಗ್ಯಾರಂಟಿಯನ್ನು ನೀಡಿದೆ ಎಂದು ದೂರಿದರು.

ಲೂಟಿಕೋರರ ಪಾರ್ಟಿ ಕಾಂಗ್ರೆಸ್‌ ನುಡಿದಂತೆ ನಡೆಯುತ್ತೇವೆ ಎಂದು ಹಣ ಕೊಳ್ಳೆ ಹೊಡೆದಿದ್ದಾರೆ. ಯಾವುದೇ ಪ್ರಕರಣದಲ್ಲಿ ಒಂದೇ ಬಾರಿಗೆ ಎರಡು ಸಂಸ್ಥೆಯಿಂದ ತನಿಖೆ ನಡೆಸಲು ಸಾಧ್ಯವಿಲ್ಲ. ಆದರೆ ಸಿಬಿಐ ಮಾಡಬೇಕಾದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಈ ಎಟಿಎಂ ಸರ್ಕಾರ ಟಕಾಟಕ್ ಎಂದು ಹಣ ವರ್ಗಾವಣೆ ಮಾಡಿಕೊಂಡಿದೆ ಎಂದು ವಿವರಿಸಿದರು.

ಇನ್ನೂ ಯಾವ ನಿಗಮಗಳಲ್ಲಿ ಎಷ್ಟು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ? ಎಷ್ಟು ಬೇನಾಮಿ ಖಾತೆಗಳಿಗೆ ಹಣ ಹೋಗಿದೆ ಎಂದು ಪತ್ತೆಯಾಗಬೇಕು. ಸಚಿವರ ಆಪ್ತ ಸಹಾಯಕ ಇದರಲ್ಲಿ ಶಾಮೀಲಾಗಿದ್ದಾನೆ ಎಂದರೆ ಸಚಿವರು ಕೂಡ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯಿಂದ ನಾಲ್ಕು ಹಂತದಲ್ಲಿ ಹೋರಾಟ

ರಾಜ್ಯಪಾಲರಿಗೆ ಈ ಕುರಿತು ವಿವರ ನೀಡಿದ್ದೇವೆ. ಬಿಜೆಪಿ ನಾಲ್ಕು ಹಂತಗಳಲ್ಲಿ ಇದರ ವಿರುದ್ಧ ಹೋರಾಟ ಮಾಡಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ಕೂಡ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಈವರೆಗೆ ಸಚಿವರ ಪರ ನಿಂತಿದ್ದ ಸಿಎಂ ಸಿದ್ದರಾಮಯ್ಯನವರಷ್ಟು ಭಂಡ ಯಾರೂ ಇಲ್ಲ. ಈ ಭ್ರಷ್ಟಾಚಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+