Get Updates
Get notified of breaking news, exclusive insights, and must-see stories!

ವಾಲ್ಮೀಕಿ ಜಾತ್ರೆಯಲ್ಲಿ ಅಭಿಮಾನಿಗಳ ದಾಂಧಲೆ: ಆಹ್ವಾನವಿರಲಿಲ್ಲ ಎಂದ ಕಿಚ್ಚ ಸುದೀಪ್, ಆಹ್ವಾನ ನೀಡಿದ್ದ ಪೋಟೋ ವೈರಲ್

ತಮಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಒಪ್ಪಿಕೊಂಡ ಕಾರ್ಯಕ್ರಮವನ್ನು ಯಾವಾಗಲೂ ತಪ್ಪಿಸಿಲ್ಲ ಎಂದು ಸುದೀಪ್ ಹೇಳಿದ್ದಾರೆ

ಬೆಂಗಳೂರು, ಫೆಬ್ರವರಿ. 10: ದಾವಣಗೆರೆಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್ ಬರುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳು ಆಕ್ರೋಶದಿಂದ ವರ್ತಿಸಿರುವ ಘಟನೆ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆದಿವೆ.

ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಎರಡು ದಿನಗಳ ಕಾಲ ನಡೆದ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ನಟ ಸುದೀಪ್ ಕಾರ್ಯಕ್ರಮಕ್ಕೆ ಬರದ ಕಾರಣ ಅಭಿಮಾನಿಗಳು ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು. ಗಲಾಟೆಗೆ ವಾಲ್ಮೀಕಿ ಪೀಠಾಧಿಪತಿ ಪ್ರಸನ್ನನಾನಂದ ಸ್ವಾಮೀಜಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೆ ಕಾರ್ಯಕ್ರಮಕ್ಕೆ ಗೈರಾಗಿದ್ದ ಬಗ್ಗೆ ಸ್ಪಷ್ಟನೆ ನೀಡಿರುವ ಸುದೀಪ್ ತಮಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಒಪ್ಪಿಕೊಂಡ ಕಾರ್ಯಕ್ರಮವನ್ನು ಯಾವಾಗಲೂ ತಪ್ಪಿಸಿಲ್ಲ ಎಂದು ಹೇಳಿದ್ದಾರೆ. ಇದು ಇನ್ನೊಂದು ರೀತಿಯ ಬೆಳವಣಿಗೆಗೆ ಕಾರಣವಾಗಿದೆ.

Valmiki Jatre issue: This is What Kichcha Sudeep Said About The Fans Clash

"ಸ್ನೇಹಿತರಿಗೆ ನಲ್ಮೆಯ ನಮಸ್ಕಾರ, ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ ..ಮುಂದೆ ಖಂಡಿತ ಬರುವೆ. ಪ್ರೀತಿ ಇರಲಿ. ಶಾಂತ ರೀತಿಯಿಂದ ವರ್ತಿಸಿ ... ಪ್ರೀತಿಯೊಂದಿಗೆ ನಿಮ್ಮ ಕಿಚ್ಚ.... " ಎಂದು ಟ್ವೀಟ್ ಮಾಡಿದ್ದಾರೆ.

ಇದಾದ ಬೆನ್ನಲ್ಲೇ ಪ್ರಸನ್ನಾನಂದಪುರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ನಟ ಸುದೀಪ್ ಅವರಿಗೆ ಆಹ್ವಾನ ನೀಡಲು ಹೋಗಿರುವ ಫೋಟೋಗಳು ವೈರಲ್ ಆಗುತ್ತಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕಿಚ್ಚ ಸುದೀಪ್ ಅವರ ಟ್ವೀಟ್‌ಗೆ ಈ ಫೋಟೋಗಳನ್ನು ಸೇರಿಸಿ ರೀಟ್ವೀಟ್ ಮಾಡಲಾಗುತ್ತಿದೆ.

Valmiki Jatre issue: This is What Kichcha Sudeep Said About The Fans Clash

"2/2/23 ಪ್ರಸನ್ನನಾಂದ ಮಹಾಸ್ವಾಮಿಜೀಯವರು ಮತ್ತು 2023 ರ ವಾಲ್ಮೀಕಿ ಜಾತ್ರೆಯ ಅಧ್ಯಕ್ಷರು ಹಾಗೂ ಜಗಳೂರಿನ ಶಾಸಕರಾದ ಎಸ್ ವಿ.ರಾಮಚಂದ್ರಪ್ಪ ಅವರು ಕಿಚ್ಚ ಸುದೀಪ್‌ ಅವರ ಮನೆಗೆ ಭೇಟಿ ನೀಡಿ ಸುದೀಪ್ ರವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಅವರ ತಂದೆಯವರಾದ ಸಂಜೀವ್ ಸರ್‌ ಅವರನ್ನ ಭೇಟಿ ಮಾಡಿ ಸುದೀಪ್ ಅವರನ್ನ ಕರೆದುಕೊಂಡು ಕಾರ್ಯಕ್ರಮಕ್ಕೆ ಬನ್ನಿ ಎಂದು ಆಹ್ವಾನಿಸಲಾಗಿತ್ತು" ಎಂದು ಟಿಪ್ಪಣಿ ಬರೆಯಲಾಗಿದೆ.

ಮನೆಗೆ ಹೋಗಿ ಆಹ್ವಾನ ನೀಡಿದರೂ, ಕಾರ್ಯಕ್ರಮ ಆಯೋಜನಕರು ಆಹ್ವಾನ ನೀಡಿಲ್ಲ ಎಂದು ಹೇಳುತ್ತಿರುವುದೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಇನ್ನು, ಕಿಚ್ಚ ಸುದೀಪ್ ಹರಿಹರ ತಾಲೂಕಿನ ರಾಜನಹಳ್ಳಿಗೆ ಬರುತ್ತಾರೆ ಎಂಬ ವಿಚಾರ ತಿಳಿದು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಭಿಮಾನಿಗಳು ಬೆಳಗ್ಗೆಯಿಂದಲೂ ಕಿಚ್ಚ ಕಿಚ್ಚ ಎಂದು ಘೋಷಣೆ ಹಾಕುತ್ತಾ ಕಾಯುತ್ತಿದ್ದರು. ಆದರೆ, ಅವರು ಬಂದಿರಲಿಲ್ಲ. ಬಳಿಕ ಬೇಸರಗೊಂಡ ಅಭಿಮಾನಿಗಳು ವೇದಿಕೆ ಮುಂಭಾಗದ ಕುರ್ಚಿಗಳನ್ನು ಮುರಿದು, ಬ್ಯಾರಿಕೇಡ್‌ಗಳನ್ನು ನೆಲಕ್ಕುರುಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+