Vande Bharat Express: ಕರ್ನಾಟಕ ವಂದೇ ಭಾರತ್ ರೈಲು ಸೇವೆ ವಿಸ್ತರಣೆ: ವಿ.ಸೋಮಣ್ಣ ಹರ್ಷ
Vande Bharat Express Train: ರಾಜ್ಯ ರಾಜಧಾನಿ ಬೆಂಗಳೂರಿನಿಂದ ತೊಗರಿ ಕಣಜ ಕಲಬುರಗಿಗೆ ಈಗಾಗಲೇ ಕೇಂದ್ರ ಸರ್ಕಾರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಅನುಮೋದನೆ ನೀಡಿದೆ. ಕಾರ್ಯಾಚರಣೆ ಸಹ ಇದೆ. ಇದೀಗ ಈ ರೈಲು ಸೇವೆ ವಿಸ್ತರಣೆ ಮಾಡಿದ್ದಕ್ಕೆ ರೈಲ್ವೆ ಖಾತೆ ಕರ್ನಾಟಕ ಸಚಿವ ವಿ.ಸೋಮಣ್ಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರ್ಗಿ-ಬೆಂಗಳೂರು ನಡುವೆ ನೇರ ವೇಗದ ರೈಲು ಸಂಪರ್ಕಕ್ಕಾಗಿ ಜನತೆ ವರ್ಷಗಳಿಂದ ಮಾಡಿಕೊಂಡು ಬಂದ ಬೇಡಿಕೆ ಈಗಾಗಲೇ ಸಾಕಾರವಾಗಿದೆ. ಜನರ ಮತ್ತೊಂದು ಬೇಡಿಕೆ ಸಹ ಈಡೇರಿಕೆ ಆಗಿದೆ. ಕಲಬುರ್ಗಿಯಿಂದ ಬೆಂಗಳೂರಿನ ಎಸ್ಎಂವಿಟಿವರೆಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂವರೆಗೆ ವಿಸ್ತರಣೆ ಮಾಡಿ, ಮಾರ್ಗ ಬದಲಾಯಿಸಲಾಗಿದೆ. ಸಂಚಾರದ ಸಮಯವನ್ನೂ ಬದಲಾವಣೆ ಮಾಡಲಾಗಿದೆ ಎಂದು ವಿ.ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಈ ರೈಲಿನ ವಂದೇ ಭಾರತ್ ಸಂಚಾರವನ್ನು ವಿಸ್ತರಣೆ ಮಾಡಲಾಗಿದೆ. ಬಹುದಿನಗಳ ಕನಸು ನನಸಾಗಿದೆ. ಇದಕ್ಕಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸೋಮಣ್ಣ ಅಭಿನಂದನೆ ತಿಳಿಸಿದ್ದಾರೆ. ರೈಲು ಪ್ರಯಾಣಿಕರು, ಭಕ್ತರು ಈ ಸೇವೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ಅವರು ಕೋರಿದ್ದಾರೆ.
ಹೊಸ ವಂದೇ ಭಾರತ್ ರೈಲು ಶ್ರೀ ಸತ್ಯ ಸಾಯಿ ಪ್ರಕಾಶ ನಿಲಯಂ ಮಾರ್ಗವಾಗಿ ಸಂಚರಿಸುವ ಕಾರಣ ರೈಲು ಪ್ರಯಾಣದ ಸಮಯ ಕಡಿಮೆಯಾಗಲಿದೆ. ಬೆಂಗಳೂರು, ಕಲಬುರಗಿ ಮಧ್ಯದ ಸ್ಥಳಗಳಿಗೆ ಸಹ ನೇರ ಮತ್ತು ವೇಗದ ಸಂಪರ್ಕ ಸಿಗಲಿದೆ. ಕಲಬುರ್ಗಿಯಿಂದ ಪ್ರತಿದಿನ ಬೆಳಗ್ಗೆ 6:10ಕ್ಕೆ ರೈಲು ಹೊರಡಲಿದೆ. ಹೋಸಪೇಟೆ, ಸತ್ಯ ಸಾಯಿ ಪ್ರಕಾಶ ನಿಲಯಂನಿಂದ ಮುಂತಾದ ಪ್ರಮುಖ ನಿಲ್ದಾಣಗಳನ್ನು ದಾಟಿ ಸಂಜೆ ವೇಳೆಗೆ ಬೆಂಗಳೂರು ತಲುಪಲಿದೆ. ಮರಳಿ ಮಧ್ಯಾಹ್ನ 2:40ಕ್ಕೆ ಹೊರಡಲಿದ್ದು, ರಾತ್ರಿ ವೇಳೆಗೆ ಕಲಬುರ್ಗಿ ತಲುಪುತ್ತದೆ.
ಕರ್ನಾಟಕ-ಬೆಂಗಳೂರು ನಡುವಿನ ನೇರ ವೇಗದ ರೈಲು ಸೇವೆ ವಿಸ್ತರಣೆ ಆಗಿದ್ದರಿಂದ ಪ್ರಯಾಣಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ವ್ಯಾಪಾರಿ ವರ್ಗ ಈ ವಂದೇ ಭಾರತ್ ಸೇವೆಯಿಂದ ಸಾಕಷ್ಟು ಪ್ರಯೋಜನವಾಗಿದೆ. ಮುಖ್ಯವಾಗಿ ಕಲಬುರ್ಗಿ-ಬೆಂಗಳೂರು ನಡುವಿನ ಪ್ರಯಾಣದ ಸಮಯ ಗಮನಾರ್ಹವಾಗಿ ಕಡಿಮೆಯಾಗಲಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications