ಬೆಂಗಳೂರು ಹೈದರಾಬಾದ್ ನಡುವೆ ವಂದೇ ಭಾರತ್ ರೈಲು, ವಿವರ
ಬೆಂಗಳೂರು, ಏಪ್ರಿಲ್ 10: ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಶೀಘ್ರದಲ್ಲೇ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವಾರ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಲಂಗಾಣ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಬೆಂಗಳೂರು ಮತ್ತು ಹೈದರಾಬಾದ್ ನಡುವೆ ವಂದೇ ಭಾರತ್ ರೈಲು ಚಾಲನೆ ದಿನಾಂಕದ ಬಗ್ಗೆ ಇನ್ನೂ ಖಚಿತತೆ ತಿಳಿದಿಲ್ಲ. ಇದು ತೆಲಂಗಾಣದ ಮೂರನೇ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಬಹುದು.

ಅರೆ-ಹೈ-ಸ್ಪೀಡ್ ಎಕ್ಸ್ಪ್ರೆಸ್ ರೈಲು ಬೆಂಗಳೂರು ಮತ್ತು ಹೈದರಾಬಾದ್ನ ಕಾಚೆಗುಡ ನಡುವೆ 570 ಕಿಲೋಮೀಟರ್ಗಳಷ್ಟು ದೂರವನ್ನು ಓಡಿಸಲು ನಿರೀಕ್ಷಿಸಲಾಗಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ಅಧಿಕಾರಿಗಳು ಜನವರಿಯ ಆರಂಭದಲ್ಲಿ ತಿಳಿಸಿದ್ದಾರೆ. ಇದುವರೆಗೂ ಚಲಿಸುವ ರೈಲಿಗಳು ಸಾಮಾನ್ಯವಾಗಿ ಬೆಂಗಳೂರಿನಿಂದ ಹೈದರಾಬಾದ್ಗೆ ತಲುಪಲು ಸುಮಾರು 10 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ಆದರೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕರಿಗೆ 6 ಗಂಟೆಗಳ ಕಡಿತವಾಗುತ್ತದೆ. ಬೆಂಗಳೂರು-ಹೈದರಾಬಾದ್ ತಲುಪಲು ಕೇವಲ 4 ಗಂಟೆ ತೆಗೆದುಕೊಳ್ಳುತ್ತದೆ.
ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ಎಕ್ಸ್ಪ್ರೆಸ್ ಜೊತೆಗೆ, ಬೆಂಗಳೂರು-ಹುಬ್ಬಳ್ಳಿ ರೈಲು ಕೂಡ ಪ್ರಾರಂಭವಾಗಲಿದೆ ಎಂದು ವರದಿಗಳು ಈಗಾಗಲೇ ಕೇಳಿಬಂದಿವೆ. ತಮ್ಮ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಬಿಜೆಪಿ ಪದಾಧಿಕಾರಿಗಳು ಈಗಾಗಲೇ ವಂದೇ ಭಾರತ್ ಎಕ್ಸ್ಪ್ರೆಸ್ ಬಗ್ಗೆ ಚರ್ಚಿಸಲು ಪ್ರಾರಂಭಿಸಿದ್ದಾರೆ. ಇದು ಎರಡು ಪ್ರಮುಖ ಭಾರತೀಯ ಐಟಿ ಹಬ್ಗಳನ್ನು ಸಂಪರ್ಕಿಸುವುದರಿಂದ, ಹೈದರಾಬಾದ್-ಬೆಂಗಳೂರು ವಂದೇ ಭಾರತ್ ರೈಲುಗಳು ಮಹತ್ವದ ಬೆಳವಣಿಗೆಯಾಗಲಿವೆ ಎಂದು ವರದಿಯಾಗಿದೆ.

ಶನಿವಾರ, ಪ್ರಧಾನಿ ಮೋದಿ ಅವರು ತೆಲಂಗಾಣ ರಾಜ್ಯದಲ್ಲಿ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದು ಸಿಕಂದರಾಬಾದ್ನಿಂದ ಆಂಧ್ರಪ್ರದೇಶದ ತಿರುಪತಿಗೆ ಚಲಿಸುತ್ತದೆ. ಈ ಎಕ್ಸ್ಪ್ರೆಸ್ ರೈಲು ಎರಡು ನಗರಗಳ ನಡುವೆ 8 ಗಂಟೆ, 30 ನಿಮಿಷಗಳಲ್ಲಿ 660 ಕಿಲೋಮೀಟರ್ (3 ಗಂಟೆ, 20 ನಿಮಿಷ ವೇಗವಾಗಿ) ಚಲಿಸುತ್ತದೆ.
ಪ್ರಸಕ್ತ ವರ್ಷದ ಜನವರಿಯಿಂದ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ಆಂಧ್ರಪ್ರದೇಶದ ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವೆ ಓಡುತ್ತಿದೆ. ಸಿಕಂದರಾಬಾದ್ ಮತ್ತು ಪುಣೆ ನಡುವೆ ಎರಡನೇ ರೈಲು ಓಡಿಸುವ ಯೋಜನೆಯೂ ಇದೆ. ಇದರೊಂದಿಗೆ ದೆಹಲಿ-ಜೈಪುರ ವಂದೇ ಭಾರತ್ ಎಕ್ಸ್ಪ್ರೆಸ್ ಏಪ್ರಿಲ್ 12 ರಂದು ಪ್ರಾರಂಭವಾಗಲಿದೆ. 14ನೇ ವಂದೇ ಭಾರತ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಉದ್ಘಾಟಿಸಲಿದ್ದಾರೆ ಎಂದು ವರದಿಯಾಗಿದೆ. ದೆಹಲಿ-ಜೈಪುರ-ಅಜ್ಮೀರ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಜೈಪುರದಿಂದ ಮಧ್ಯಾಹ್ನ 12.30 ಕ್ಕೆ ಹೊರಡಲಿದೆ.
ರೈಲ್ವೇ ಸಚಿವ ಅಶ್ವನಿ ವೈಷ್ಣವ್ ಮತ್ತು ಎಲ್ಲಾ ಪ್ರಮುಖ ಸಚಿವರು, ಸಂಸದರು ಮತ್ತು ಶಾಸಕರು ಜೈಪುರದಲ್ಲಿ ಈ ಸೆಮಿ-ಹೈ-ಸ್ಪೀಡ್ ರೈಲನ್ನು ಉದ್ಘಾಟಿಸಲಿದ್ದಾರೆ. ಈ ರೈಲು ಏಪ್ರಿಲ್ 13 ರಿಂದ ಸಾರ್ವಜನಿಕರಿಗಾಗಿ ಓಡಲಿದೆ. ಈ ರೈಲು ಅಜ್ಮೀರ್ನಿಂದ ನವದೆಹಲಿಗೆ ಹೋಗುತ್ತದೆ ಮತ್ತು ಅಲ್ವಾರ್, ರೇವಾರಿ, ಜೈಪುರ ಮತ್ತು ಗುರುಗ್ರಾಮ್ನಲ್ಲಿ ನಿಲುಗಡೆಯನ್ನು ಹೊಂದಿರುತ್ತದೆ ಎಂದು ವರದಿಗಳು ಸೂಚಿಸುತ್ತವೆ. ಇದು ದೆಹಲಿಯಿಂದ ಜೈಪುರ ನಡುವಿನ ದೂರವನ್ನು 4 ಗಂಟೆಗಳಲ್ಲಿ 110 ಕಿಮೀ ವೇಗದಲ್ಲಿ ಕ್ರಮಿಸುತ್ತದೆ ಎಂದು ವರದಿಯಾಗಿದೆ.
-
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications