Get Updates
Get notified of breaking news, exclusive insights, and must-see stories!

Vande Bharat Express: ಕರ್ನಾಟಕಕ್ಕೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು: ಮತ್ತೊಂದು ಭರ್ಜರಿ ಗುಡ್‌ನ್ಯೂಸ್‌ & ಅಪ್ಡೇಟ್ಸ್!‌

Vande Bharat Express: ಕರ್ನಾಟಕಕ್ಕೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ವಿಚಾರದಲ್ಲಿ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಿದೆ. ಈಗಾಗಲೇ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಗುಡ್‌ನ್ಯೂಸ್‌ ನೀಡಿದೆ. ಇದೀಗ ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ವಿಸ್ತರಿಸಲಾಗುತ್ತಿದ್ದು ಈ ಬಗ್ಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಭರ್ಜರಿ ಅಪ್ಡೇಟ್ಸ್‌ ನೀಡಿದ್ದಾರೆ. ಕರ್ನಾಟಕಕ್ಕೆ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲಿಗೆ ಸಂಬಂಧಿಸಿದಂತೆ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ ಅದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ "ವಂದೇ ಭಾರತ ಎಕ್ಸಪ್ರೆಸ್ ರೈಲು" ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತಾದ ನಮ್ಮ ಬೇಡಿಕೆಯ ಬದಲು, ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್ ರೈಲು ಚಲಿಸಲಾಗುವ ಕುರಿತು ಅಗತ್ಯ ಅನುಮೋದನೆ / ಆದೇಶ ನೀಡಿರುವ ಬಗ್ಗೆ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ತಿಳಿಸಿರುವುದು ಅತ್ಯಂತ ಸಂತಸದ ಸಂಗತಿ ಅಂತ ಸಂಸದ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

Vande Bharat Express train to Karnataka Another great good news amp amp updates

ಬೆಂಗಳೂರು- ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ ಎಕ್ಸಪ್ರೆಸ್ ರೈಲು ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತು ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಇವರೊಂದಿಗೆ ಹಲವು ಬಾರಿ ಸಭೆಯನ್ನು / ಚರ್ಚೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಇವರ ಉಪಸ್ಥಿತಿಯಲ್ಲಿ ನಡೆದಿದ್ದು ಮತ್ತು ಒತ್ತಾಯಿಸಿದ್ದು ಇಲ್ಲಿ ಸ್ಮರಣೀಯ.

ಆದರೆ ಪ್ರಸ್ತಾಪಿತ ವಿಷಯವಾಗಿ ಬೆಳಗಾವಿ-ಬೆಂಗಳೂರು ನಡುವೆ ಬೆಳಗಾವಿ ನಗರದಿಂದ ಹೊಸ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರವನ್ನು ಬೆಳಿಗ್ಗೆ ಪ್ರಾರಂಭಿಸಿ ಬೆಂಗಳೂರು ತಲುಪಿ, ತದನಂತರ ಮಧ್ಯಾಹ್ನ ಬೆಂಗಳೂರಿನಿಂದ ಹೊರಟು ರಾತ್ರಿ ಬೆಳಗಾವಿ ತಲುಪುವ ಬಗ್ಗೆ ವಿಷಯ ತಿಳಿದು ಬಂದಿದೆ. ನೂತನ ವಂದೇ ಭಾರತ ಎಕ್ಸಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯಿಂದ ಪ್ರಾರಂಭಿಸುವ ವಿಷಯವಾಗಿ ಅಗತ್ಯ ಅನುಮೋದನೆ ದೊರೆತಿರುವುದಕ್ಕೆ ಮೊದಲನೆಯದಾಗಿ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ, ಮಾನ್ಯ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಪ್ರಹ್ಲಾದ್ ಜೋಶಿ ಅವರಿಗೆ ಹಾಗೂ ಕೇಂದ್ರ ರೇಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+