ಪ್ಯಾರಿಸ್ನಿಂದ ಬೆಂಗಳೂರಿಗೆ ಬಂದ 172 ಕನ್ನಡಿಗರು
ಬೆಂಗಳೂರು, ಮೇ 28 : ವಂದೇ ಭಾರತ್ ಮಿಷನ್ ಅಡಿ 21ನೇ ವಿಮಾನ ಬೆಂಗಳೂರಿಗೆ ಆಗಮಿಸಿದೆ. ಲಾಕ್ ಡೌನ್ ಪರಿಣಾಮ ಫ್ರಾನ್ಸ್ನ ಪ್ಯಾರಿಸ್ನಲ್ಲಿ ಸಿಲುಕಿದ್ದ 172 ಕನ್ನಡಿಗರು ನಗರಕ್ಕೆ ಆಗಮಿಸಿದ್ದು, ಕ್ವಾರಂಟೈನ್ಗೆ ತೆರಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ವಿಮಾನ ಗುರುವಾರ ಸಂಜೆ ಆಗಮಿಸಿತು. ವಿಮಾನದಲ್ಲಿ 123 ಪುರುಷರು, 48 ಮಹಿಳೆಯರು ಸೇರಿ 172 ಪ್ರಯಾಣಿಕರಿದ್ದರು.
ವಂದೇ ಭಾರತ್ ಮಿಷನ್ ಅಡಿ ಬೆಂಗಳೂರಿಗೆ ಆಗಮಿಸಿದ 21ನೇ ಏರ್ ಇಂಡಿಯಾ ವಿಮಾನ ಇದಾಗಿದೆ. ಬೆಂಗಳೂರಿನಿಂದ ವಿಮಾನ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಹಾರಿತು.

ವಿಮಾನ ಆಗಮಿಸುತ್ತಿದ್ದಂತೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದರು. ಯಾವುದೇ ಪ್ರಯಾಣಿಕರಿಗೆ ಕೋವಿಡ್ - 19 ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ.
"ಎಲ್ಲಾ ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ಗಾಗಿ ಹೋಟೆಲ್ಗಳಿಗೆ ಕಳುಹಿಸಿ ಕೊಡಲಾಯಿತು" ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದ್ದಾರೆ.
ಬುಧವಾರ ಐರ್ಲೆಂಡ್ನ ದುಬ್ಲಿನ್ನಿಂದ 136 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಮೇ 26ರಂದು ನ್ಯೂಯಾರ್ಕ್ನಿಂದ 310 ಪ್ರಯಾಣಿಕರು ನಗರಕ್ಕೆ ಆಗಮಿಸಿದ್ದರು. ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ನಡೆಸಲಾಗುತ್ತಿದೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ











Click it and Unblock the Notifications