ವಂದೇ ಭಾರತ್ ಮಿಷನ್; ಬೆಂಗಳೂರಿಗೆ ಬಂತು 24 ವಿಮಾನ
ಬೆಂಗಳೂರು, ಮೇ 30 : ವಂದೇ ಭಾರತ್ ಮಿಷನ್ ಅಡಿ 24ನೇ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿದಿದೆ. ದೇಶಿಯ ವಿಮಾನ ಸೇವೆ ಆರಂಭವಾಗಿದ್ದರೂ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಇದುವರೆಗೂ ಆರಂಭವಾಗಿಲ್ಲ.
ಜರ್ಮನಿಯ ಫ್ರಾಂಕ್ಫರ್ಟ್ನಿಂದ ಶನಿವಾರ ಮಧ್ಯಾಹ್ನ 1.15ಕ್ಕೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ವಿಮಾನ ಆಗಮಿಸಿತು. 248 ಮಂದಿ ಅನಿವಾಸಿ ಭಾರತೀಯರು ಈ ವಿಮಾನದಲ್ಲಿದ್ದರು.
ಮಾರ್ಚ್ 22ರ ಬಳಿಕ ಅಂತರರಾಷ್ಟ್ರೀಯ ವಿಮಾನ ಹಾರಾಟ ಸಂಪೂರ್ಣವಾಗಿ ರದ್ದುಗೊಂಡಿದೆ. ವಂದೇ ಭಾರತ್ ಮಿಷನ್ ಅಡಿ ಆಗಮಿಸುವ ವಿಮಾನ ಮತ್ತು ಬೇರೆ ದೇಶಗಳ ವಿಶೇಷ ವಿಮಾನಗಳು ಮಾತ್ರ ಬೆಂಗಳೂರು ವಿಮಾನ ನಿಲ್ದಾಣದಿಂದ ಹಾರಾಟ ನಡೆಸುತ್ತಿವೆ.
ಶನಿವಾರ ಫ್ರಾಂಕ್ಫರ್ಟ್ನಿಂದ 248 ಪ್ರಯಾಣಿಕರು, ಮುಂಜಾನೆ 3.15ಕ್ಕೆ ವಾಷಿಂಗ್ಟನ್ ಆಗಮಿಸಿದ ವಿಮಾನದಲ್ಲಿ 105 ಕನ್ನಡಿಗರು ಬೆಂಗಳೂರು ನಗರಕ್ಕೆ ಬಂದರು. ಎಲ್ಲರ ಆರೋಗ್ಯ ಪರೀಕ್ಷೆಯನ್ನು ನಡೆಸಿ ಕ್ವಾರಂಟೈನ್ಗಾಗಿ ಕಳುಹಿಸಲಾಗಿದೆ. ಯಾವುದೇ ಪ್ರಯಾಣಿಕರಲ್ಲಿ ಕೋವಿಡ್ - 19 ಸೋಂಕಿನ ಲಕ್ಷಣ ಕಂಡುಬಂದಿಲ್ಲ.

ಪ್ರಯಾಣಿಕರ ಕೊರತೆ
ವಿಶ್ವದಲ್ಲಿ ಕೊರೊನಾ ಭೀತಿ ಆರಂಭವಾದ ಮೇಲೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಸಂಖ್ಯೆ ಇಳಿಮುಖವಾಗಿತ್ತು. ಫೆಬ್ರವರಿಯಲ್ಲಿ ಶೇ 20ರಷ್ಟು, ಮಾರ್ಚ್ನಲ್ಲಿ ಶೇ 50ರಷ್ಟು ಪ್ರಯಾಣಿಕರ ಸಂಖ್ಯೆ ಇಳಿಮುಖವಾಯಿತು. ಬಳಿಕ ವಿಮಾನಗಳ ಸಂಚಾರ ರದ್ದುಗೊಂಡಿತು.

ಹೊಸ-ಹೊಸ ಪ್ರದೇಶದಿಂದ ವಿಮಾನ
ಕಳೆದ 2 ತಿಂಗಳಿನಲ್ಲಿ ಹೊಸ-ಹೊಸ ಪ್ರದೇಶದಿಂದ ಬೆಂಗಳೂರು ನಗರಕ್ಕೆ ವಿಮಾನಗಳು ಬಂದಿಳಿದಿವೆ. ಇಲ್ಲಿಯ ತನಕ ಆ ಪ್ರದೇಶಗಳಿಗೆ ಬೆಂಗಳೂರಿನಿಂದ ಯಾವುದೇ ವಿಮಾನ ಹಾರಾಟ ಇರಲಿಲ್ಲ. ವಂದೇ ಭಾರತ್ ಮಿಷನ್ ಅಡಿ ಭಾರತೀಯರನ್ನು ಹೊತ್ತ ವಿಮಾನ ಬೆಂಗಳೂರು ನಗರಕ್ಕೆ ಬಂದಿಳಿದಿವೆ. ನಗರಕ್ಕೆ ಶನಿವಾರದ ತನಕ 24 ಏರ್ ಇಂಡಿಯಾ ವಿಮಾನಗಳು ಆಗಮಿಸಿವೆ.

ಜಿಲ್ಲಾಡಳಿತದಿಂದ ಕ್ರಮ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ಎಲ್ಲರ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ. ಬಿಬಿಎಂಪಿ ಸಹಕಾರದಿಂದ ಅವರಿಗೆ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ತಮ್ಮ ಖರ್ಚಿನಲ್ಲಿಯೇ ಪ್ರಯಾಣಿಕರು ಕ್ವಾರಂಟೈನ್ ಆಗಬೇಕಿದೆ.

ವಿಮಾನಗಳ ಪಟ್ಟಿ
ಅಮೆರಿಕ ವಾಷಿಂಗ್ಟನ್, ದಕ್ಷಿಣ ಕೊರಿಯಾದ ಸಿಯೋಲ್, ಫ್ರಾನ್ಸ್ನ ಪ್ಯಾರಿಸ್, ದುಬ್ಲಿನ್, ಮನಿಲಾ, ಟೊರೆಂಟೊ, ಮೆಲ್ಬೋರ್ನ್ ಸೇರಿದಂತೆ ವಿವಿಧ ನಗರಗಳಿಂದ ಬೆಂಗಳೂರು ನಗರಕ್ಕೆ ವಿಮಾನಗಳು ಆಗಮಿಸಿವೆ. ಪ್ರಯಾಣಿಕರು ಕ್ವಾರಂಟೈನ್ಗೆ ತೆರಳಲು ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications