ವಂದೇ ಭಾರತ್ ; ಮುಂದಿನ ವಾರ ಬೆಂಗಳೂರಿಗೆ 7 ವಿಮಾನ ಆಗಮನ
ಬೆಂಗಳೂರು, ಜೂನ್ 25 : ವಂದೇ ಭಾರತ್ ಮಿಷನ್ನ 3ನೇ ಹಂತದ ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರಕ್ಕೆ 7 ವಿಮಾನಗಳು ಆಗಮಿಸಲಿವೆ. ಮುಂದಿನ ವಾರ ಅಮೆರಿಕದಿಂದ ಕನ್ನಡಿಗರು ಆಗಮಿಸಲಿದ್ದಾರೆ.
Recommended Video
7 ವಿಮಾನಗಳು ಸಹ ಸ್ಯಾನ್ ಫ್ರಾನ್ಸಿಸ್ಕೊನಿಂದ ಹೊರಡಲಿದ್ದು ದೆಹಲಿಗೆ ಆಗಮಿಸಿ ಬಳಿಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಸೇರಲಿದೆ. ಆದರೆ ಈ ವಿಮಾನದಲ್ಲಿ ಪ್ರಜೆಗಳನ್ನು ತವರು ದೇಶಕ್ಕೆ ಕರೆತರಲು ಅಮೆರಿಕ ಒಪ್ಪಿಗೆ ನೀಡಿಲ್ಲ.
ಒಟ್ಟು 1,183 ಕನ್ನಡಿಗರು ಸ್ಯಾನ್ ಫ್ರಾನ್ಸಿಸ್ಕೊನಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ. 169 ಪ್ರಯಾಣಿಕರು ಇರುವ ಮೊದಲ ವಿಮಾನ ಬುಧವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಂದೇ ಭಾರತ್ ಮಿಷನ್ ಅಡಿ ಹಾರಾಟ ನಡೆಸುವ ವಿಮಾನದಲ್ಲಿ ಅಮೆರಿಕದ ಪ್ರಜೆಗಳು ದೇಶಕ್ಕೆ ವಾಪಸ್ ಆಗಲು ಅಮೆರಿಕೆ ನಿರ್ಬಂಧ ಹೇರಿದೆ. ಆದ್ದರಿಂದ ಭಾರತದಿಂದಿ ವಿಮಾನದಲ್ಲಿ ಸಿಬ್ಬಂದಿಗಳು ಮಾತ್ರ ಸಂಚಾರ ನಡೆಸಲಿದ್ದಾರೆ.
ಅಮೆರಿಕ ಮಾತ್ರವಲ್ಲ ಭಾರತದಿಂದ ತನ್ನ ದೇಶದ ಪ್ರಜೆಗಳು ವಂದೇ ಭಾರತ್ ಮಿಷನ್ ಅಡಿ ಹಾರಾಟ ನಡೆಸುವ ವಿಮಾನದಲ್ಲಿ ಆಗಮಿಸುವಂತಿಲ್ಲ ಎಂದು ಫ್ರಾನ್ಸ್ ಸರ್ಕಾರವೂ ನಿರ್ಬಂಧ ಹೇರಿದೆ. ಆದರೆ ಪ್ಯಾರೀಸ್ನಿಂದ ಭಾರತೀಯರು ವಾಪಸ್ ತೆರಳಲು ಅನುಮತಿ ನೀಡಲಾಗಿದೆ.
ವಂದೇ ಭಾರತ್ ಮಿಷನ್ನ 3ನೇ ಹಂತದ ಕಾರ್ಯಾಚರಣೆಯಲ್ಲಿ 35 ವಿಮಾನಗಳು ಬೇರೆ-ಬೇರೆ ದೇಶಗಳಿಂದ ಬೆಂಗಳೂರು ನಗರಕ್ಕೆ ಆಗಮಿಸಲಿವೆ. ವಿಮಾನದಲ್ಲಿ ಬಂದ ಎಲ್ಲರೂ ಅವರ ಖರ್ಚಿನಲ್ಲಿಯೇ ಕ್ವಾರಂಟೈನ್ನಲ್ಲಿ ಇರಲಿದ್ದು, ಬಳಿಕ ಮನೆಗೆ ವಾಪಸ್ ಆಗಲಿದ್ದಾರೆ.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ












Click it and Unblock the Notifications