ಟೆಕ್ಕಿಗಳಿಗೆ ಕಹಿ ಸುದ್ದಿ, ವರ್ತೂರು ಸೇತುವೆ ಕಾಮಗಾರಿ ಮತ್ತಷ್ಟು ವಿಳಂಬ ಸಾಧ್ಯತೆ
ಬೆಂಗಳೂರು, ಫೆಬ್ರವರಿ 11: ಸರ್ಜಾಪುರ ರಸ್ತೆ ಮೂಲಕ ವರ್ತೂರು ಕೋಡಿಗೆ ಆಗಮಿಸುವವರು ಇನ್ನೂ ಒಂದು ತಿಂಗಳು ಕಾಯಲೇ ಬೇಕಾಗಿದೆ.
ಈಗಾಗಲೇ ಮುಕ್ತಾಯದ ಹಂತದಲ್ಲಿರುವ ವರ್ತೂರು ಸೇತುವೆ ಕಾಮಗಾರಿ ಅಂತಿಮಗೊಳ್ಳಲು ಇನ್ನೂ ಒಂದು ತಿಂಗಳು ಬೇಕಾಗಿದೆ. ಬಿಬಿಎಂಪಿಯು ವರ್ತೂರು ಕೋಡಿ ಬಳಿ ಎರಡು ಸೇತುವೆ ಕಾರ್ಯವನ್ನು ಈ ತಿಂಗಳು ಪೂರ್ಣಗೊಳಿಸಬೇಕು. ಕೆಲವು ಬೇರಿಂಗ್ಗಳು ಕೊಲ್ಕತ್ತಾದಿಂದ ಆಗಮಿಸುತ್ತಿರುವ ಕಾರಣ ಕಾರ್ಯ ವಿಳಂಬವಾಗುತ್ತಿದೆ.
87 ಮೀಟರ್ ಅಂತರದಲ್ಲಿ ಎರಡು ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಒಟ್ಟು 30 ಕೋಟಿ ವೆಚ್ಚವಾಗಲಿದೆ. ಕಾಮಗಾರಿಯನ್ನು 2018ರಲ್ಲಿಯೇ ಆರಂಭಿಸಲಾಗಿದೆ. ಈ ಯೋಜನೆಯು ಜಾಗದ ತೊಂದರೆಯಿಂದಾಗಿ ಸಾಕಷ್ಟು ವಿಳಂಬವಾಗಿತ್ತು. ಆಸ್ತಿ ಮಾಲೀಕರು ಜಾಗವನ್ನು ಕೊಡಲು ಹಿಂದೇಟು ಹಾಕಿದ್ದರು.

ಬಳಿಕ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು ಸ್ಥಳವನ್ನು ನೀಡಿತ್ತು. ಇದೀಗ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಸೇತುವೆಗೆ ಬೇರಿಂಗ್ ಅಳವಡಿಸುವುದಷ್ಟೇ ಬಾಕಿ ಇದೆ.
ಇದರಲ್ಲಿ ಒಂದು ಸೇತುವೆಯ ಕಾಮಗಾರಿ ಮಾರ್ಚ್ನಲ್ಲಿ ಅಂತ್ಯಗೊಳ್ಳಲಿದ್ದು, ಮತ್ತೊಂದು ಸೇತುವೆ ಮೇ ವೇಳೆಗೆ ಸಾರ್ವಜನಿಕರಿಗೆ ಮುಕ್ತವಾಗಲಿದೆ.ವರ್ತೂರು ಕೋಡಿಯಿಂದ ಗಂಜೂರು ಮಾರ್ಗದಲ್ಲಿ ಹಲವು ವರ್ಷಗಳಿಂದ ಬಾಕಿ ಇದ್ದ ರಸ್ತೆ ಅಗಲೀಕರಣ ಕಾಮಗಾರಿ ಕೂಡ ನಡೆಯುತ್ತಿದೆ. 1.4 ಕಿ.ಮೀ ಉದ್ದದ ರಸ್ತೆ ಅಗಲೀಕರಣ ಕಾಮಗಾರಿಯೂ ನಡೆಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications